ಬ್ರೇಕಿಂಗ್ ನ್ಯೂಸ್
23-08-24 05:20 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್.23: ಉಡುಪಿ ಜಿಲ್ಲೆಯ ಕಾರ್ಕಳ- ಪಡುಬಿದ್ರಿ ರಸ್ತೆಯ ಕಂಚಿನಡ್ಕದಲ್ಲಿ ಆರಂಭಿಸಲು ಉದ್ದೇಶಿಸಿದ್ದ ಟೋಲ್ ಸಂಗ್ರಹ ಕೇಂದ್ರಕ್ಕೆ ನೀಡಲಾದ ಕಾರ್ಯಾದೇಶವನ್ನು ರಾಜ್ಯ ಸರ್ಕಾರವು ತಾತ್ಕಾಲಿಕವಾಗಿ ಹಿಂಪಡೆದಿದ್ದು ಸದ್ಯಕ್ಕೆ ಟೋಲ್ ಕೇಂದ್ರ ಆರಂಭಿಸದಿರಲು ತೀರ್ಮಾನಿಸಿದೆ.
ಟೋಲ್ ಕೇಂದ್ರ ಸ್ಥಾಪನೆಗೆ ವ್ಯಾಪಕ ವಿರೋಧ ವ್ಯಕ್ತವಾದ ಕಾರಣ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿಯವರು ಆಗಸ್ಟ್ 22ರಂದು ಉಡುಪಿ ಜಿಲ್ಲೆಯ ಪ್ರತಿನಿಧಿಗಳೊಂದಿಗೆ ಸಭೆ ನಡೆಸಿದ್ದರು. ಮರುದಿನ, ಆಗಸ್ಟ್ 23ರಂದು ಜನವಿರೋಧ ಪರಿಗಣಿಸಿ ಕಾರ್ಯಾದೇಶ ಹಿಂಪಡೆಯುವುದಾಗಿ ಆದೇಶ ಹೊರಡಿಸಿದ್ದಾರೆ.

ಕಾರ್ಕಳ - ಪಡುಬಿದ್ರಿ ರಾಜ್ಯ ಹೆದ್ದಾರಿಯ ಕಂಚಿನಡ್ಕದಲ್ಲಿ ಟೋಲ್ ಕೇಂದ್ರ ಆರಂಭಿಸುವುದನ್ನು ವಿರೋಧಿಸಿ ಆಗಸ್ಟ್ 24ರಂದು ರಸ್ತೆ ತಡೆದು ಪಕ್ಷಾತೀತ ಪ್ರತಿಭಟನೆ ನಡೆಸಲು ನಿರ್ಧರಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಅವರಿಗೂ ಮನವರಿಕೆ ಮಾಡಲಾಗಿತ್ತು. ಖಾಸಗಿ ಬಸ್ ಮಾಲಕರು ಸೇರಿದಂತೆ ಎಲ್ಲ ವಿಭಾಗದಿಂದ ವಿರೋಧ ವ್ಯಕ್ತವಾಗಿತ್ತು. ಇದಲ್ಲದೆ, ಕಂಚಿನಡ್ಕದಿಂದ 7.50 ಕಿಮೀ ದೂರದಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಹೆಜಮಾಡಿ ಟೋಲ್ ಇರುವುದರಿಂದ ಹೊಸ ಟೋಲ್ ಕೇಂದ್ರ ಸ್ಥಾಪಿಸಿದರೆ ಜನರಿಗೆ ಹೊರೆಯಾಗುತ್ತದೆ ಎಂಬ ಬಗ್ಗೆ ಸಚಿವರ ಗಮನಕ್ಕೆ ತರಲಾಗಿತ್ತು.
ಟೋಲ್ ಕೇಂದ್ರ ಸ್ಥಾಪನೆಗಾಗಿ ಭಾರತೀ ಕನ್ಸ್ ಟ್ರಕ್ಷನ್ ಕಂಪನಿಗೆ ಕೆಆರ್ ಡಿಸಿಎಲ್ ಮೂಲಕ ಕಾರ್ಯಾದೇಶ ನೀಡಲಾಗಿತ್ತು. ಆದರೆ ಸ್ಥಳದಲ್ಲಿ ಸರ್ವಿಸ್ ರಸ್ತೆಯಾಗಲೀ, ಶೌಚಾಲಯ ಇನ್ನಿತರ ವ್ಯವಸ್ಥೆಗಳನ್ನು ಮಾಡದೇ ಇರುವುದರಿಂದ ಸದ್ಯಕ್ಕೆ ಕಾರ್ಯಾದೇಶ ಹಿಂಪಡೆಯುವುದಾಗಿ ತನ್ನ ಆದೇಶ ಪತ್ರದಲ್ಲಿ ಸಚಿವ ಜಾರಕಿಹೊಳಿ ತಿಳಿಸಿದ್ದಾರೆ.
Padubidri Karkala Proposed Kanchinadkka toll gate temporarily cancelled after action Committee planned to hold protest. Kanchinadkka Toll Gate Virodhi Horata Samithi has planned to stage a protest against the government’s move to open a toll gate on the Padubidri-Karkala State Highway at Kanchinadkka in Udupi district on Saturday, August 24, according to its president Suhas Hegde Nandalike.
08-11-25 10:29 pm
Bangalore Correspondent
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
08-11-25 11:15 pm
Mangalore Correspondent
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm