ಬ್ರೇಕಿಂಗ್ ನ್ಯೂಸ್
23-08-24 05:20 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್.23: ಉಡುಪಿ ಜಿಲ್ಲೆಯ ಕಾರ್ಕಳ- ಪಡುಬಿದ್ರಿ ರಸ್ತೆಯ ಕಂಚಿನಡ್ಕದಲ್ಲಿ ಆರಂಭಿಸಲು ಉದ್ದೇಶಿಸಿದ್ದ ಟೋಲ್ ಸಂಗ್ರಹ ಕೇಂದ್ರಕ್ಕೆ ನೀಡಲಾದ ಕಾರ್ಯಾದೇಶವನ್ನು ರಾಜ್ಯ ಸರ್ಕಾರವು ತಾತ್ಕಾಲಿಕವಾಗಿ ಹಿಂಪಡೆದಿದ್ದು ಸದ್ಯಕ್ಕೆ ಟೋಲ್ ಕೇಂದ್ರ ಆರಂಭಿಸದಿರಲು ತೀರ್ಮಾನಿಸಿದೆ.
ಟೋಲ್ ಕೇಂದ್ರ ಸ್ಥಾಪನೆಗೆ ವ್ಯಾಪಕ ವಿರೋಧ ವ್ಯಕ್ತವಾದ ಕಾರಣ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿಯವರು ಆಗಸ್ಟ್ 22ರಂದು ಉಡುಪಿ ಜಿಲ್ಲೆಯ ಪ್ರತಿನಿಧಿಗಳೊಂದಿಗೆ ಸಭೆ ನಡೆಸಿದ್ದರು. ಮರುದಿನ, ಆಗಸ್ಟ್ 23ರಂದು ಜನವಿರೋಧ ಪರಿಗಣಿಸಿ ಕಾರ್ಯಾದೇಶ ಹಿಂಪಡೆಯುವುದಾಗಿ ಆದೇಶ ಹೊರಡಿಸಿದ್ದಾರೆ.

ಕಾರ್ಕಳ - ಪಡುಬಿದ್ರಿ ರಾಜ್ಯ ಹೆದ್ದಾರಿಯ ಕಂಚಿನಡ್ಕದಲ್ಲಿ ಟೋಲ್ ಕೇಂದ್ರ ಆರಂಭಿಸುವುದನ್ನು ವಿರೋಧಿಸಿ ಆಗಸ್ಟ್ 24ರಂದು ರಸ್ತೆ ತಡೆದು ಪಕ್ಷಾತೀತ ಪ್ರತಿಭಟನೆ ನಡೆಸಲು ನಿರ್ಧರಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಅವರಿಗೂ ಮನವರಿಕೆ ಮಾಡಲಾಗಿತ್ತು. ಖಾಸಗಿ ಬಸ್ ಮಾಲಕರು ಸೇರಿದಂತೆ ಎಲ್ಲ ವಿಭಾಗದಿಂದ ವಿರೋಧ ವ್ಯಕ್ತವಾಗಿತ್ತು. ಇದಲ್ಲದೆ, ಕಂಚಿನಡ್ಕದಿಂದ 7.50 ಕಿಮೀ ದೂರದಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಹೆಜಮಾಡಿ ಟೋಲ್ ಇರುವುದರಿಂದ ಹೊಸ ಟೋಲ್ ಕೇಂದ್ರ ಸ್ಥಾಪಿಸಿದರೆ ಜನರಿಗೆ ಹೊರೆಯಾಗುತ್ತದೆ ಎಂಬ ಬಗ್ಗೆ ಸಚಿವರ ಗಮನಕ್ಕೆ ತರಲಾಗಿತ್ತು.
ಟೋಲ್ ಕೇಂದ್ರ ಸ್ಥಾಪನೆಗಾಗಿ ಭಾರತೀ ಕನ್ಸ್ ಟ್ರಕ್ಷನ್ ಕಂಪನಿಗೆ ಕೆಆರ್ ಡಿಸಿಎಲ್ ಮೂಲಕ ಕಾರ್ಯಾದೇಶ ನೀಡಲಾಗಿತ್ತು. ಆದರೆ ಸ್ಥಳದಲ್ಲಿ ಸರ್ವಿಸ್ ರಸ್ತೆಯಾಗಲೀ, ಶೌಚಾಲಯ ಇನ್ನಿತರ ವ್ಯವಸ್ಥೆಗಳನ್ನು ಮಾಡದೇ ಇರುವುದರಿಂದ ಸದ್ಯಕ್ಕೆ ಕಾರ್ಯಾದೇಶ ಹಿಂಪಡೆಯುವುದಾಗಿ ತನ್ನ ಆದೇಶ ಪತ್ರದಲ್ಲಿ ಸಚಿವ ಜಾರಕಿಹೊಳಿ ತಿಳಿಸಿದ್ದಾರೆ.
Padubidri Karkala Proposed Kanchinadkka toll gate temporarily cancelled after action Committee planned to hold protest. Kanchinadkka Toll Gate Virodhi Horata Samithi has planned to stage a protest against the government’s move to open a toll gate on the Padubidri-Karkala State Highway at Kanchinadkka in Udupi district on Saturday, August 24, according to its president Suhas Hegde Nandalike.
15-01-26 05:56 pm
HK News Desk
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
15-01-26 10:24 pm
Mangalore Correspondent
ಗೋ ಸೇವೆಗೆ ಜನಸಾಮಾನ್ಯರು ಕೊಡುಗೆ ನೀಡಲು ವೇದಿಕೆ ; ಕ...
15-01-26 10:07 pm
ದಕ್ಷಿಣ ಕನ್ನಡದ ಸರ್ಕಾರಿ ಶಾಲೆಗಳಿಗೆ ಇಸ್ರೇಲ್ ಡಿಜಿ...
15-01-26 09:04 pm
ಮನರೇಗಾ ಜಾರಿಗೆ ಒತ್ತಾಯಿಸಿ ಸುಳ್ಯದಿಂದ ಮುಲ್ಕಿಗೆ ಪಾ...
15-01-26 08:12 pm
ಜ.18ರಂದು ಮಂಗಳೂರಿನಲ್ಲಿ ಪ್ರಪ್ರಥಮ ಜಾಗತಿಕ ಬಿಲ್ಲವರ...
15-01-26 04:01 pm
15-01-26 11:07 pm
Bangalore Correspondent
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm