ಬ್ರೇಕಿಂಗ್ ನ್ಯೂಸ್
24-08-24 10:34 pm Mangalore Correspondent ಕರಾವಳಿ
ಬೆಂಗಳೂರು, ಆ 24: ಇಂದು ಕರಾವಳಿ ಹಾಗೂ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಅತಿ ಭಾರೀ ಮಳೆಯಾಗಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ವ್ಯಾಪಕವಾಗಿ ಜಫರು ಮಳೆಯಾಗಿದ್ದರೆ, ಇತ್ತರ ಒಳನಾಡಿನ ಜಿಲ್ಲೆಗಳಾದ ಬೆಳಗಾವಿ, ಕಲಬುರ್ಗಿ, ವಿಜಯಪುರ ಯಾದಗಿರಿ ಹಾಗೂ ಶಿವಮೊಗ್ಗದಲ್ಲೂ ಅತಿ ಭಾರೀ ಮಳೆಯಾಗಿದೆ
ಮುಂದಿನ ಎರಡು ದಿನ ಕರಾವಳಿಗೆ ವರುಣಾರ್ಭಟ ಭಾನುವಾರ ಹಾಗೂ ಸೋಮವಾರ ಕರಾವಳಿ ಜಿಲ್ಲೆಗಳಾದ ಉಡುಪಿ ಹಾಗೂ ಉತ್ತರ ಕನ್ನಡಕ್ಕೆ ಅತಿಭಾರೀ ಮಳೆಯಾಗುವ ಹಿನ್ನಲೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಅಲ್ಲದೆ ಆಗಸ್ಟ್ 30 ರವರೆಗೂ ಕರಾವಳಿ ಜಿಲ್ಲೆಗಳಿಗೆ ಭಾರೀ ಮಳೆಯಾಗುವ ಹಿನ್ನಲೆ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಬೆಳಗಾವಿ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಿಗೆ ಭಾನುವಾರ ಭಾರೀ ಮಳೆಯಾಗುವ ಮುನ್ಸೂಚನೆ ಹಿನ್ನಲೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಸೋಮವಾರದಿಂದ ಮಳೆ ಪ್ರಮಾಣ ಇಳಿಕೆಯಾಗಲಿದ್ದು, ಆಗಸ್ಟ್ 29,30 ರ ನಂತರ ಭಾರೀ ಮಳೆಯಾಗಲಿರುವ ಹಿನ್ನಲೆ ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಉತ್ತರ ಕನ್ನಡದಲ್ಲಿ ಭಾರೀ ಮಳೆ ಜಿಲ್ಲೆಯಲ್ಲಿ ಮಳೆ ಆರ್ಭಟ ಮತ್ತೆ ಜೋರಾಗಿದೆ. ಶುಕ್ರವಾರ ರಾತ್ರಿಯಿಂದ ಶನಿವಾರ ದಿನವಿಡೀ ಮಳೆ ರಭಸವಾಗಿ ಅಬ್ಬರಿಸಿದ್ದು, ಕರಾವಳಿ ಭಾಗದಲ್ಲಿ ಮತ್ತೆ ಪ್ರವಾಹ ಆತಂಕ ಶುರುವಾಗಿದೆ. ಮಳೆ, ಗಾಳಿ ರಭಸ ಹೆಚ್ಚಾಗಿದೆ. ಇದರಿಂದ ಸಮುದ್ರದ ಅಲೆಗಳ ಎತ್ತರ ಹೆಚ್ಚಾಗಿ ತೀರದಲ್ಲಿಆರ್ಭಟಿಸುತ್ತಿವೆ. ಕಡಲ ಕೊರೆತವೂ ಹೆಚ್ಚಾಗಿದೆ. ಕಾರವಾರ, ಅಂಕೋಲಾ, ಗೋಕರ್ಣದಲ್ಲಿಸಮುದ್ರ ತೀರಗಳಿಗೆ ಹಾನಿಯಾಗಿವೆ. ಶನಿವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆಗಳಲ್ಲಿ ಜಿಲ್ಲೆಯಲ್ಲಿ403.6 ಮಿ.ಮೀ. ಮಳೆಯಾಗಿದೆ. ಕಾರವಾರ, ಅಂಕೋಲಾ, ಹೊನ್ನಾವರ, ಶಿರಸಿಯಲ್ಲಿ ಹೆಚ್ಚಿನ ಮಳೆಯಾಗಿದೆ ಎಂದು ಜಿಲ್ಲಾಡಳಿತ ತಿಳಿಸಿದೆ.
ಜಿಲ್ಲೆಯಲ್ಲಿ ಇನ್ನೂ ಮೂರು ದಿನಗಳ ಕಾಲ ಭಾರಿ ಮಾಳೆಯಾಗಲಿದೆ ಎಂದು ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ. ಆಳಸಮುದ್ರದ ಮೀನುಗಾರಿಕೆಗೆ ತೆರಳದಂತೆ ಮೀನುಗಾರರಿಗೆ ಸೂಚನೆ ಕೂಡ ನೀಡಲಾಗಿದೆ. ಜಿಲ್ಲೆಯಲ್ಲಿ ಶುಕ್ರವಾರ ಬೆಳಗ್ಗೆಯಿಂದ ಶನಿವಾರ ಬೆಳಗ್ಗೆವರೆಗೆ ಸುರಿದ ಮಳೆಯಲ್ಲಿಐದು ಮನೆಗಳಿಗೆ ಹಾನಿಯಾಗಿದೆ. ಕಾರವಾರ, ಕುಮಟಾದಲ್ಲಿತಲಾ ಒಂದು ಕಾಳಜಿ ಕೇಂದ್ರ ತೆರೆಯಲಾಗಿದ್ದು, 88 ಮಂದಿಗೆ ಆಶ್ರಯ ಕಲ್ಪಿಸಲಾಗಿದೆ.
Heavy rains expected in coastal districts Orange alert declared.
09-02-26 07:20 pm
Bangalore Correspondent
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರ...
09-02-26 12:29 pm
Gadag, No phone, Tv: ಎಸ್ಸೆಸ್ಸೆಲ್ಸಿ ಮಕ್ಕಳ ಭವಿಷ...
07-02-26 05:09 pm
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
10-02-26 07:31 pm
HK News Desk
ಅಡೂರು ಮೂಲದ ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು...
10-02-26 02:15 pm
ರಾಮ ಮಂದಿರ ಸ್ಫೋಟಕ್ಕೆ ಸಂಚು ರೂಪಿಸಿದ್ದ ಕೈದಿ ಫರೀದಾ...
10-02-26 11:44 am
ಕೆನಡಾದಲ್ಲಿ ಗುಂಡಿಟ್ಟು ಕನ್ನಡಿಗ ಸಾಫ್ಟ್ವೇರ್ ಇಂಜಿ...
09-02-26 10:25 pm
ಜಾಗತಿಕ ಷೇರು ಮಾರುಕಟ್ಟೆಯಲ್ಲಿ 'ಆಂಥ್ರೋಪಿಕ್' AI ಬಿ...
09-02-26 12:27 pm
10-02-26 11:03 pm
Mangalore Correspondent
Mangaore, Marriage Fraud: ಹಲವಾರು ಹೆಂಡಿರ ಮುದ್ದ...
10-02-26 08:27 pm
Oman Accident: ಒಮಾನ್ ನಲ್ಲಿ ಭೀಕರ ಅಪಘಾತ ; ಕಾಪು...
09-02-26 11:20 pm
Mangalore Accident, Bus: ನಂತೂರಿನಲ್ಲಿ ಅಪಘಾತಕ್ಕ...
09-02-26 08:02 pm
ಕೆಪಿಟಿ ಜಂಕ್ಷನ್ ಬಳಿಯ ಹೆದ್ದಾರಿ ಡಿವೈಡರ್ ಮುಚ್ಚಿದ್...
09-02-26 02:50 pm
10-02-26 09:05 pm
Bangalore Correspondent
Peter Caddy, Arrest: ಉದ್ಯಮಿಗಳಿಗೆ ಸಾಲ ಕೊಡಿಸುವು...
10-02-26 04:38 pm
Belthangady Fake Kidnap: ಕಾಲೇಜು ವಿದ್ಯಾರ್ಥಿನಿ...
10-02-26 10:59 am
ಜಾಲತಾಣದಲ್ಲೇ ಪಡ್ಡೆ ಹುಡುಗರಿಗೆ ಬಲೆ, ಖತರ್ನಾಕ್ ಪ್...
09-02-26 02:04 pm
ಬೆಳ್ತಂಗಡಿ ; ಕಾಲೇಜು ತೆರಳುತ್ತಿದ್ದ ಅಪ್ರಾಪ್ತ ಯುವತ...
09-02-26 11:26 am