ಬ್ರೇಕಿಂಗ್ ನ್ಯೂಸ್
27-08-24 06:56 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 27: “ಶೆಫ್ ಟಾಕ್ ಸೀಸನ್ -2" ಕಬಡ್ಡಿ ಪ್ರೀಮಿಯರ್ ಲೀಗ್ ಆಗಸ್ಟ್ 30ರಿಂದ ಸೆಪ್ಟೆಂಬರ್ 1ರ ವರೆಗೆ ನಗರದ ಕರಾವಳಿ ಉತ್ಸವ ಮೈದಾನದಲ್ಲಿ ನಡೆಯಲಿದ್ದು ಆಗಸ್ಟ್ 30ರಂದು ಆಹಾರೋತ್ಸವದ ಉದ್ಘಾಟನೆ ನಡೆಯಲಿದೆ. ಇದನ್ನು ಮಂಗಳೂರು ಮಹಾನಗರ ಪಾಲಿಕೆಯ ಮೇಯರ್ ಸುಧೀರ್ ಶೆಟ್ಟಿ ಉದ್ಘಾಟಿಸಲಿದ್ದಾರೆ. ಆಗಸ್ಟ್ 31ರಂದು ಕಬಡ್ಡಿ ಪಂದ್ಯಾಟದ ಉದ್ಘಾಟನೆ ನಡೆಯಲಿದ್ದು ಇದನ್ನು ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ಡಿ. ವೇದವ್ಯಾಸ ಕಾಮತ್ ಉದ್ಘಾಟಿಸಲಿದ್ದಾರೆ ಎಂದು ಕಾರ್ಯಕ್ರಮ ಆಯೋಜಕ ಸುದೇಶ್ ಭಂಡಾರಿ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.
ಬಳಿಕ ಮಾತಾಡಿದ ಸಮಿತಿಯ ಗೌರವ ಸಲಹೆಗಾರ ವಿಶ್ವಾಸ್ ದಾಸ್ ಅವರು, ”ಕಳೆದ ವರ್ಷ ಸೀಸನ್ 1ರ ಕಬಡ್ಡಿ ಅತ್ಯಂತ ಯಶಸ್ವಿಯಾಗಿ ನಡೆದಿದ್ದು ಈ ವರ್ಷ ಗೌರವಾಧ್ಯಕ್ಷ ಪ್ರಕಾಶ್ ಕುಂಪಲ ಮಾರ್ಗದರ್ಶನದಲ್ಲಿ ಕಾರ್ಯಕ್ರಮ ಆಯೋಜಿಸುತ್ತಿದ್ದೇವೆ. ಕಬಡ್ಡಿ ಟೂರ್ನಮೆಂಟ್ ಜೊತೆಗೆ ಈ ಬಾರಿ ಆಹಾರೋತ್ಸವ ಮತ್ತು ವಿನೋದ ಮೇಳವನ್ನು ಕೂಡ ಆಯೋಜಿಸಿದ್ದೇವೆ. ಜೊತೆಗೆ ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್ ಅವರಿಗೆ ಸನ್ಮಾನ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ. ಡಾ.ಸದಾನಂದ ಶೆಟ್ಟಿ, ಕನ್ಯಾನ ಸದಾಶಿವ ಶೆಟ್ಟಿ ಹಾಗೂ ಸದಾಶಿವ ಉಳ್ಳಾಲ ಪಾಲ್ಗೊಳ್ಳಲಿದ್ದಾರೆ. ಬಹುಮಾನ ವಿತರಣೆಯನ್ನು "ಶೆಫ್ ಟಾಕ್ ಫುಡ್ & ಹಾಸ್ಪಿಟಾಲಿಟಿ ಸರ್ವಿಸಸ್"ನ ಮ್ಯಾನೇಜಿಂಗ್ ಡೈರೆಕ್ಟರ್ ಗೋವಿಂದ ಬಿ. ಪೂಜಾರಿ ನೆರವೇರಿಸಲಿದ್ದಾರೆ ಎಂದರು.

ಮಾಜಿ ಶಾಸಕ ಬಿ.ಎ.ಮೊಯಿದೀನ್ ಬಾವಾ ಮಾತನಾಡಿ, ”ಈ ವರ್ಷ ಕಬಡ್ಡಿ ಟೂರ್ನಮೆಂಟ್ನಲ್ಲಿ 8 ತಂಡಗಳು ಭಾಗವಹಿಸುತ್ತಿವೆ. ಅಸ್ರಾ ಬ್ರಿಗೇಡ್ಸ್, ಲೈಫ್ ಲೈನ್ಸ್ ಫಾಲ್ಕನ್ಸ್, ಟೀಮ್ ಬಾವ, ಯು ಕುಂಜತ್ತೂರು, ಮಂಗಳೂರು ಯುನೈಟೆಡ್ ಕಬಡ್ಡಿ ಕ್ಲಬ್, ಪ್ರಕಾಶ್ ಕುಂಪಲ ವಾರಿಯರ್ಸ್, ಕರ್ನಾಟಕ ತುಳುವಾಸ್ ನೈಜೀರಿಯಾ ಮತ್ತು ನ್ಯೂ ಸ್ಟಾರ್ ಮಂಗಳೂರು ಈ ತಂಡಗಳ ಆಟಗಾರರನ್ನು ಆಗಸ್ಟ್ 20ರಂದು ಸೀವ್ಯೂ ಹೋಟೆಲ್ನಲ್ಲಿ ನಡೆದ ಹರಾಜು ಮೂಲಕ ಆಯ್ಕೆ ಮಾಡಲಾಗಿತ್ತು, ಒಟ್ಟು 99 ಆಟಗಾರರು ಆಯ್ಕೆಯಾಗಿದ್ದಾರೆ.
ಈ ವರ್ಷ ನಾವು 100+ ಆಹಾರ ಮಳಿಗೆಗಳನ್ನು ನಿರೀಕ್ಷಿಸುತ್ತಿದ್ದೇವೆ. ಅವು ವಿವಿಧ ರೀತಿಯ ರುಚಿಕರ ಆಹಾರಗಳನ್ನು ಒದಗಿಸುತ್ತವೆ. ಮಂಗಳೂರು ಕಬಡ್ಡಿ ಪ್ರೀಮಿಯರ್ ಲೀಗ್ ಸೀಸನ್ 2 ರಲ್ಲಿ 2 ಲಕ್ಷಕ್ಕಿಂತ ಹೆಚ್ಚು ವೀಕ್ಷಕರನ್ನು ನಿರೀಕ್ಷಿಸಲಾಗಿದ್ದು ಇದು ದಕ್ಷಿಣ ಭಾರತದ ಅತ್ಯಂತ ದೊಡ್ಡ ಈವೆಂಟ್ ಆಗುವ ನಿರೀಕ್ಷೆ ಇದೆ“ ಎಂದರು.
ಪತ್ರಿಕಾಗೋಷ್ಟಿಯಲ್ಲಿ ಹರೀಶ್ ನಾಯಕ್, ಅಝ್ಪರ್ ರಜಾಕ್, ಕರುಣಾಕರ್, ಹಮೀದ್ ಅಮ್ಮಿ, ದೀಪಕ್ ಪಿಲಾರ್, ವಿನೋದ್ ಶೆಟ್ಟಿ, ಸುಕೇಶ್ ಭಂಡಾರಿ ಮತ್ತಿತರರು ಉಪಸ್ಥಿತರಿದ್ದರು.
Kabaddi premier league 2024 and food fest at karvali utsav to be organized in Mangalore on August 31st. Mangalore north MLA Vedavyas kamath will be the one who will inaugurate the program.
18-06-26 09:57 pm
HK News Staffer
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
ಆರೆಸ್ಸೆಸ್ ನೋಂದಣಿ ; ಪ್ರಿಯಾಂಕ ಖರ್ಗೆ ಪತ್ರಕ್ಕೆ ಸಾ...
18-06-26 01:25 pm
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
ಧರ್ಮಸ್ಥಳ ಕೇಸ್ ; ಎಡಪಂಥೀಯರ ಒತ್ತಡಕ್ಕೆ ಎಸ್ಐಟಿ, ಷಡ...
17-06-26 10:12 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
19-06-26 12:24 pm
HK News Staffer
Bejai, Kadri Water Issue: ಬಿಜೈ, ಕದ್ರಿಗೆ ಕಲುಷಿ...
18-06-26 12:33 pm
ಬಸ್ಸೋ, ಬಸ್ ನಿಲ್ದಾಣವೋ ? ಗುರುಪುರ ಬಂಡಸಾಲೆಯಲ್ಲಿ ವ...
16-06-26 11:35 am
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
18-06-26 01:20 pm
HK News Staffer
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm
ವಾಯುಪಡೆ ಅಧಿಕಾರಿ ಪತ್ನಿಗೆ ಅಮಲು ಪದಾರ್ಥ ನೀಡಿ ಅತ್ಯ...
16-06-26 08:32 pm
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm