ಬ್ರೇಕಿಂಗ್ ನ್ಯೂಸ್
27-08-24 08:32 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್.27: ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಮಹತ್ವಾಕಾಂಕ್ಷಿ ಯೋಜನೆಯಾದ 'ಪಿಎಂ ಸೂರ್ಯ ಘರ್ ಮುಫ್ತ್ ಬಿಜ್ಲಿ '(ಪಿಎಂ ಸೂರ್ಯ ಗೃಹ - ಉಚಿತ ವಿದ್ಯುತ್) ಯೋಜನೆಯು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈಗಾಗಲೇ ಅನುಷ್ಠಾನಗೊಂಡಿದ್ದು, ಯೋಜನೆಯ ಫಲಾನುಭವಿಗೆ ಮಂಗಳೂರಿನಲ್ಲಿ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಸಬ್ಸಿಡಿ ಪತ್ರವನ್ನು ವಿತರಿಸಿದರು.
'ಇನರ್ಜಿ ಸೋಲಾರ್ ಕಂಪನಿ'ಯ ಸಹಯೋಗದಲ್ಲಿ ಅನುಷ್ಟಾನಗೊಂಡಿರುವ 'ಪಿಎಂ ಸೂರ್ಯ ಘರ್ ಮುಫ್ತ್ ಬಿಜ್ಲಿ' ಯೋಜನೆಯ 100ನೇ ಫಲಾನುಭವಿಯಾದ ಶಕ್ತಿನಗರದ ಡಾ.ಸುಧಾಕರ್ ಕುಟುಂಬಕ್ಕೆ 78000 ರೂ. ಸಬ್ಸಿಡಿ ಪತ್ರವನ್ನು ಹಸ್ತಾಂತರ ಮಾಡಿದರು.
ಈ ವೇಳೆ ಮಾತನಾಡಿದ ಸಂಸದರು "ಸೂರ್ಯನಿಂದ ಉತ್ಪತ್ತಿಯಾಗುವ ಸೌರಶಕ್ತಿ ಬಳಸಿ ವಿದ್ಯುತ್ ಉತ್ಪಾದಿಸುವ ಮೂಲಕ ನೈಸರ್ಗಿಕ ಸಂಪನ್ಮೂಲಗಳ ಸದ್ಬಳಕೆಯಲ್ಲಿ ಭಾರತ ಕ್ರಾಂತಿ ಸೃಷ್ಟಿಸಿದ ದೇಶವಾಗಿದೆ. ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ 'ಪಿಎಂ ಸೂರ್ಯ ಘರ್ ಮುಫ್ತ್ ಬಿಜ್ಲಿ' ಯೋಜನೆ ಒಂದು ಕುಟುಂಬವನ್ನು ವಿದ್ಯುತ್ ಬಳಕೆ ಹಾಗೂ ಆರ್ಥಿಕವಾಗಿ ಸ್ವಾವಲಂಬಿಯನ್ನಾಗಿ ಮಾಡುತ್ತದೆ. ಈ ಯೋಜನೆ ಮೂಲಕ ಅಗತ್ಯವಿರುವ ವಿದ್ಯುತ್ ಉತ್ಪಾದಿಸಿ ಬಳಸುವ ಜೊತೆಗೆ ಉಳಿದ ಯುನಿಟ್ ಗಳನ್ನು ಮಾರಾಟ ಮಾಡಬಹುದಾಗಿದೆ. ಇದು ಕರ್ನಾಟಕದಲ್ಲಿ ಇರುವಂತೆ ಹಣ ಕೊಟ್ಟು ಪಡೆಯುವ ಗ್ಯಾರಂಟಿಯಲ್ಲ. ಇದು ಹಣ ಸಂಪಾದನೆ ಮಾಡಿ ತಮ್ಮ ಬದುಕಿಗೆ ಗ್ಯಾರಂಟಿ ಪಡೆಯುವಂಥ ಯೋಜನೆಯಾಗಿದೆ ಎಂದು ಹೇಳಿದರು.
"ಪ್ರಧಾನಿಗಳ ಇಂತಹ ಮಹತ್ವಾಕಾಂಕ್ಷಿ ಯೋಜನೆಗಳನ್ನು ಮೊದಲು ಒಂದು ಗ್ರಾಮ, ವಾರ್ಡ್ ಅಥವಾ ಬೂತ್ ಮಟ್ಟದಲ್ಲಿ ಮಾದರಿಯಾಗಿ ಅನುಷ್ಠಾನಗೊಳಿಸಬೇಕು. ಸಣ್ಣ ಸಣ್ಣ ಪ್ರದೇಶದಲ್ಲಿ ಅನುಷ್ಠಾನ ಪ್ರಕ್ರಿಯೆ ಸುಲಭವಾಗುತ್ತದೆ. ಇದರಿಂದ ಮುಂದೆ ದೊಡ್ಡ ಮಟ್ಟದಲ್ಲಿ ವಿಸ್ತರಿಸಲು ಅನುಕೂಲವಾಗುವ ಜೊತೆಗೆ ಇತರರಿಗೆ ಪ್ರೇರಣೆ ನೀಡುತ್ತದೆ. ಈ ನಿಟ್ಟಿನಲ್ಲಿ ಶಾಸಕರು ಹಾಗೂ ಸ್ಥಳೀಯ ಜನಪ್ರತಿನಿಧಿಗಳು ತಮ್ಮ ಒಂದು ಬೂತ್ ಅಥವಾ ವಾರ್ಡ್ ನಲ್ಲಿ ಈ ಯೋಜನೆಗಳನ್ನು ಅನುಷ್ಟಾನಗೊಳಿಸಿ ಮಾದರಿಯನ್ನಾಗಿ ರೂಪಿಸುವುದಕ್ಕೆ ಕಾರ್ಯಪ್ರವೃತ್ತರಾಗಬೇಕು ಎಂದು ಸಲಹೆ ನೀಡಿದರು. ಶಾಸಕ ವೇದವ್ಯಾಸ್ ಕಾಮತ್, ಪಾಲಿಕೆ ಸದಸ್ಯೆ ವನಿತಾ ಪ್ರಸಾದ್, ಇನರ್ಜಿ ಕಂಪನಿಯ ಅರವಿಂದ್, ಸೂರಜ್ ಶೆಟ್ಟಿ ಮುಂತಾದವರು ಉಪಸ್ಥಿತರಿದ್ದರು.
ಏನಿದು ಪಿಎಂ ಸೂರ್ಯ ಘರ್ ಯೋಜನೆ?
ದೇಶದ ಮನೆಗಳಿಗೆ ಉಚಿತ ವಿದ್ಯುತ್ ಒದಗಿಸುವ ಗುರಿಯನ್ನು ಹೊಂದಿರುವ ಪ್ರಧಾನಿ ಮೋದಿಯವರ ಕನಸಿನ ಯೋಜನೆ ಇದಾಗಿದೆ. ಯೋಜನೆಯಡಿ ಜನರಿಗೆ ತಮ್ಮ ಮನೆಯ ಛಾವಣಿ ಮೇಲೆ ಸೌರ ಫಲಕಗಳನ್ನು ಅಳವಡಿಸಲು 78,000 ರೂ. ಗಳ ವರೆಗೆ ಸಬ್ಸಿಡಿ ನೀಡಲಾಗುತ್ತದೆ. ಇದರ ಫಲಾನುಭವಿಗಳು ಉತ್ಪತ್ತಿಯಾದ ವಿದ್ಯುತ್ ಅನ್ನು ಬಳಕೆ ಮಾಡಿಕೊಂಡು ಉಳಿದ ಯೂನಿಟ್ ಗಳನ್ನು ವಿತರಣಾ ಸಂಸ್ಥೆಗೆ ಮಾರಾಟ ಮಾಡುವ ಮೂಲಕ ಲಾಭ ಗಳಿಸಬಹುದಾಗಿದೆ.
Prime Minister Narendra Modi's ambitious 'PM Surya Ghar Muft Bijli' (PM Surya Griha - Free Electricity) scheme has already been implemented in Dakshina Kannada district. Brijesh Chowta distributed the subsidy letter.
28-07-25 11:07 am
HK News Desk
Raichur Building Fall: ರಾಯಚೂರಿನಲ್ಲಿ ಚರಂಡಿ ಬ್ಲ...
27-07-25 01:09 pm
ದಾವಣಗೆರೆ ; ಸರ್ಕಾರಿ ಜಾಗದಲ್ಲಿ ಬೆಳೆದ ಬೆಳೆ ತೆರವು...
26-07-25 02:00 pm
IPS Officer Soumya Latha, Dharmasthala SIT:...
25-07-25 04:07 pm
Jeep Chikkamagaluru Accident: ನಿಯಂತ್ರಣ ತಪ್ಪಿ...
25-07-25 01:22 pm
28-07-25 12:28 pm
HK News Desk
Israel, Arabic Language: ಇಸ್ರೇಲ್ ಸೈನಿಕರಿಗೆ ಇಸ...
26-07-25 03:31 pm
ಹದಗೆಟ್ಟ ಸುರತ್ಕಲ್ - ಬಿ.ಸಿ. ರೋಡ್ ಹೆದ್ದಾರಿ ನಿರ...
25-07-25 04:40 pm
Mangalore MP Brijesh Chowta: ಮಂಗಳೂರಿನಲ್ಲಿ ಮೆರ...
24-07-25 09:06 pm
Supreme Court, Actor Darshan, Murder case: ನಟ...
24-07-25 07:54 pm
28-07-25 05:39 pm
Mangalore Correspondent
Dharmasthala Case, SIT Witness at Netravati R...
28-07-25 03:53 pm
ಕಾಸಿಲ್ಲದೇ ಕನ್ಯಾಕುಮಾರಿ ಯಾತ್ರೆ ; ಜನಮನ ಸೆಳೆದ ಮಂಗ...
28-07-25 01:14 pm
Sullia, Rain, Mangalore Death: ಸುಳ್ಯದಲ್ಲಿ ಮಳೆ...
28-07-25 10:51 am
Mangalore Kodakkena Restaurant owner Suicide:...
27-07-25 09:58 pm
27-07-25 08:39 pm
Mangalore Correspondent
ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಯುವತಿಯನ್ನ ಆಸ್ಪತ್ರೆಗ...
27-07-25 07:13 pm
Bangalore Murder, Two Children Killed, Crime:...
27-07-25 03:26 pm
ಸೈಬರ್ ವಂಚಕರ ಜಾಲಕ್ಕೆ ನಕಲಿ ಬ್ಯಾಂಕ್ ಖಾತೆ ಪೂರೈಕೆ...
26-07-25 09:35 pm
ಮನೆಗೆ ದಿನಸಿ ತರಲು ಹೋದ ಯುವತಿಗೆ ನಡು ರಸ್ತೆಯಲ್ಲೇ ತ...
24-07-25 10:38 pm