ಬ್ರೇಕಿಂಗ್ ನ್ಯೂಸ್
27-08-24 08:32 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್.27: ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಮಹತ್ವಾಕಾಂಕ್ಷಿ ಯೋಜನೆಯಾದ 'ಪಿಎಂ ಸೂರ್ಯ ಘರ್ ಮುಫ್ತ್ ಬಿಜ್ಲಿ '(ಪಿಎಂ ಸೂರ್ಯ ಗೃಹ - ಉಚಿತ ವಿದ್ಯುತ್) ಯೋಜನೆಯು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈಗಾಗಲೇ ಅನುಷ್ಠಾನಗೊಂಡಿದ್ದು, ಯೋಜನೆಯ ಫಲಾನುಭವಿಗೆ ಮಂಗಳೂರಿನಲ್ಲಿ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಸಬ್ಸಿಡಿ ಪತ್ರವನ್ನು ವಿತರಿಸಿದರು.
'ಇನರ್ಜಿ ಸೋಲಾರ್ ಕಂಪನಿ'ಯ ಸಹಯೋಗದಲ್ಲಿ ಅನುಷ್ಟಾನಗೊಂಡಿರುವ 'ಪಿಎಂ ಸೂರ್ಯ ಘರ್ ಮುಫ್ತ್ ಬಿಜ್ಲಿ' ಯೋಜನೆಯ 100ನೇ ಫಲಾನುಭವಿಯಾದ ಶಕ್ತಿನಗರದ ಡಾ.ಸುಧಾಕರ್ ಕುಟುಂಬಕ್ಕೆ 78000 ರೂ. ಸಬ್ಸಿಡಿ ಪತ್ರವನ್ನು ಹಸ್ತಾಂತರ ಮಾಡಿದರು.
ಈ ವೇಳೆ ಮಾತನಾಡಿದ ಸಂಸದರು "ಸೂರ್ಯನಿಂದ ಉತ್ಪತ್ತಿಯಾಗುವ ಸೌರಶಕ್ತಿ ಬಳಸಿ ವಿದ್ಯುತ್ ಉತ್ಪಾದಿಸುವ ಮೂಲಕ ನೈಸರ್ಗಿಕ ಸಂಪನ್ಮೂಲಗಳ ಸದ್ಬಳಕೆಯಲ್ಲಿ ಭಾರತ ಕ್ರಾಂತಿ ಸೃಷ್ಟಿಸಿದ ದೇಶವಾಗಿದೆ. ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ 'ಪಿಎಂ ಸೂರ್ಯ ಘರ್ ಮುಫ್ತ್ ಬಿಜ್ಲಿ' ಯೋಜನೆ ಒಂದು ಕುಟುಂಬವನ್ನು ವಿದ್ಯುತ್ ಬಳಕೆ ಹಾಗೂ ಆರ್ಥಿಕವಾಗಿ ಸ್ವಾವಲಂಬಿಯನ್ನಾಗಿ ಮಾಡುತ್ತದೆ. ಈ ಯೋಜನೆ ಮೂಲಕ ಅಗತ್ಯವಿರುವ ವಿದ್ಯುತ್ ಉತ್ಪಾದಿಸಿ ಬಳಸುವ ಜೊತೆಗೆ ಉಳಿದ ಯುನಿಟ್ ಗಳನ್ನು ಮಾರಾಟ ಮಾಡಬಹುದಾಗಿದೆ. ಇದು ಕರ್ನಾಟಕದಲ್ಲಿ ಇರುವಂತೆ ಹಣ ಕೊಟ್ಟು ಪಡೆಯುವ ಗ್ಯಾರಂಟಿಯಲ್ಲ. ಇದು ಹಣ ಸಂಪಾದನೆ ಮಾಡಿ ತಮ್ಮ ಬದುಕಿಗೆ ಗ್ಯಾರಂಟಿ ಪಡೆಯುವಂಥ ಯೋಜನೆಯಾಗಿದೆ ಎಂದು ಹೇಳಿದರು.
"ಪ್ರಧಾನಿಗಳ ಇಂತಹ ಮಹತ್ವಾಕಾಂಕ್ಷಿ ಯೋಜನೆಗಳನ್ನು ಮೊದಲು ಒಂದು ಗ್ರಾಮ, ವಾರ್ಡ್ ಅಥವಾ ಬೂತ್ ಮಟ್ಟದಲ್ಲಿ ಮಾದರಿಯಾಗಿ ಅನುಷ್ಠಾನಗೊಳಿಸಬೇಕು. ಸಣ್ಣ ಸಣ್ಣ ಪ್ರದೇಶದಲ್ಲಿ ಅನುಷ್ಠಾನ ಪ್ರಕ್ರಿಯೆ ಸುಲಭವಾಗುತ್ತದೆ. ಇದರಿಂದ ಮುಂದೆ ದೊಡ್ಡ ಮಟ್ಟದಲ್ಲಿ ವಿಸ್ತರಿಸಲು ಅನುಕೂಲವಾಗುವ ಜೊತೆಗೆ ಇತರರಿಗೆ ಪ್ರೇರಣೆ ನೀಡುತ್ತದೆ. ಈ ನಿಟ್ಟಿನಲ್ಲಿ ಶಾಸಕರು ಹಾಗೂ ಸ್ಥಳೀಯ ಜನಪ್ರತಿನಿಧಿಗಳು ತಮ್ಮ ಒಂದು ಬೂತ್ ಅಥವಾ ವಾರ್ಡ್ ನಲ್ಲಿ ಈ ಯೋಜನೆಗಳನ್ನು ಅನುಷ್ಟಾನಗೊಳಿಸಿ ಮಾದರಿಯನ್ನಾಗಿ ರೂಪಿಸುವುದಕ್ಕೆ ಕಾರ್ಯಪ್ರವೃತ್ತರಾಗಬೇಕು ಎಂದು ಸಲಹೆ ನೀಡಿದರು. ಶಾಸಕ ವೇದವ್ಯಾಸ್ ಕಾಮತ್, ಪಾಲಿಕೆ ಸದಸ್ಯೆ ವನಿತಾ ಪ್ರಸಾದ್, ಇನರ್ಜಿ ಕಂಪನಿಯ ಅರವಿಂದ್, ಸೂರಜ್ ಶೆಟ್ಟಿ ಮುಂತಾದವರು ಉಪಸ್ಥಿತರಿದ್ದರು.
ಏನಿದು ಪಿಎಂ ಸೂರ್ಯ ಘರ್ ಯೋಜನೆ?
ದೇಶದ ಮನೆಗಳಿಗೆ ಉಚಿತ ವಿದ್ಯುತ್ ಒದಗಿಸುವ ಗುರಿಯನ್ನು ಹೊಂದಿರುವ ಪ್ರಧಾನಿ ಮೋದಿಯವರ ಕನಸಿನ ಯೋಜನೆ ಇದಾಗಿದೆ. ಯೋಜನೆಯಡಿ ಜನರಿಗೆ ತಮ್ಮ ಮನೆಯ ಛಾವಣಿ ಮೇಲೆ ಸೌರ ಫಲಕಗಳನ್ನು ಅಳವಡಿಸಲು 78,000 ರೂ. ಗಳ ವರೆಗೆ ಸಬ್ಸಿಡಿ ನೀಡಲಾಗುತ್ತದೆ. ಇದರ ಫಲಾನುಭವಿಗಳು ಉತ್ಪತ್ತಿಯಾದ ವಿದ್ಯುತ್ ಅನ್ನು ಬಳಕೆ ಮಾಡಿಕೊಂಡು ಉಳಿದ ಯೂನಿಟ್ ಗಳನ್ನು ವಿತರಣಾ ಸಂಸ್ಥೆಗೆ ಮಾರಾಟ ಮಾಡುವ ಮೂಲಕ ಲಾಭ ಗಳಿಸಬಹುದಾಗಿದೆ.
Prime Minister Narendra Modi's ambitious 'PM Surya Ghar Muft Bijli' (PM Surya Griha - Free Electricity) scheme has already been implemented in Dakshina Kannada district. Brijesh Chowta distributed the subsidy letter.
13-09-24 09:10 pm
Bangalore Correspondent
ಸಿಎಂ ಸಿದ್ದರಾಮಯ್ಯ ಪ್ರಕರಣ, ಹೈಕೋರ್ಟ್ ವಿಚಾರಣೆ ಮುಕ...
12-09-24 10:41 pm
MLA Pradeep Eshwar VS Sudhakar: ಸುಧಾಕರ್ ಒಬ್ಬ...
12-09-24 09:44 pm
Pilikula kamabala, Bangalore: ಪಿಲಿಕುಳ ಕಂಬಳಕ್ಕ...
12-09-24 09:13 pm
Parashuram Park, Sunil Kumar, Arun Shyam, Hig...
12-09-24 02:34 pm
13-09-24 12:33 pm
HK News Desk
ಅಬಕಾರಿ ನೀತಿ ಹಗರಣ ; 6 ತಿಂಗಳ ಬಳಿಕ ಸಿಎಂ ಕೇಜ್ರಿವಾ...
13-09-24 12:24 pm
Sitaram Yechury death; 40 ವರ್ಷಗಳಿಂದ ದೇಶದ ರಾಜಕ...
12-09-24 09:12 pm
ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಾಧೀಶರ ಮನೆಯಲ್ಲಿ ಗಣೇಶ...
12-09-24 07:40 pm
ಅಮರಾವತಿಯಲ್ಲಿ ಡೆಡ್ಲಿ ರಸ್ತೆ ಗುಂಡಿ ; ಕಾಲುವೆಗೆ ಉರ...
11-09-24 04:13 pm
13-09-24 08:58 pm
Mangalore Correspondent
Rahul Gandhi, Hariprakash Konemane, Mangalore...
13-09-24 08:28 pm
Mangalore Actor Arjun Kapikad, Koragajja: ರಾಜ...
13-09-24 07:09 pm
Ullal, Mangalore, Suicide: ರಾತ್ರಿ ಊಟ ಮುಗಿಸಿ ಕ...
13-09-24 11:20 am
Mangalore, St Antony bus, HK News: HK Impact:...
12-09-24 10:21 pm
13-09-24 10:50 pm
HK News Desk
Mangalore crime, Bantwal Bank: ಬ್ಯಾಂಕ್ ಕಚೇರಿಯ...
13-09-24 09:08 pm
ಕೊಲ್ಕತ್ತಾ ಘಟನೆ ಬೆನ್ನಲ್ಲೇ ಬಿಹಾರದಲ್ಲಿ ವೈದ್ಯನಿಂದ...
13-09-24 03:51 pm
Mangalore, Vitla, Rape, Crime: ಅಪ್ರಾಪ್ತ ವಿದ್ಯ...
13-09-24 01:28 pm
Mangalore, City Bus, St Antony Travels: ಸಿಟಿ...
12-09-24 05:37 pm