ಬ್ರೇಕಿಂಗ್ ನ್ಯೂಸ್
27-08-24 08:32 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್.27: ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಮಹತ್ವಾಕಾಂಕ್ಷಿ ಯೋಜನೆಯಾದ 'ಪಿಎಂ ಸೂರ್ಯ ಘರ್ ಮುಫ್ತ್ ಬಿಜ್ಲಿ '(ಪಿಎಂ ಸೂರ್ಯ ಗೃಹ - ಉಚಿತ ವಿದ್ಯುತ್) ಯೋಜನೆಯು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈಗಾಗಲೇ ಅನುಷ್ಠಾನಗೊಂಡಿದ್ದು, ಯೋಜನೆಯ ಫಲಾನುಭವಿಗೆ ಮಂಗಳೂರಿನಲ್ಲಿ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಸಬ್ಸಿಡಿ ಪತ್ರವನ್ನು ವಿತರಿಸಿದರು.
'ಇನರ್ಜಿ ಸೋಲಾರ್ ಕಂಪನಿ'ಯ ಸಹಯೋಗದಲ್ಲಿ ಅನುಷ್ಟಾನಗೊಂಡಿರುವ 'ಪಿಎಂ ಸೂರ್ಯ ಘರ್ ಮುಫ್ತ್ ಬಿಜ್ಲಿ' ಯೋಜನೆಯ 100ನೇ ಫಲಾನುಭವಿಯಾದ ಶಕ್ತಿನಗರದ ಡಾ.ಸುಧಾಕರ್ ಕುಟುಂಬಕ್ಕೆ 78000 ರೂ. ಸಬ್ಸಿಡಿ ಪತ್ರವನ್ನು ಹಸ್ತಾಂತರ ಮಾಡಿದರು.
ಈ ವೇಳೆ ಮಾತನಾಡಿದ ಸಂಸದರು "ಸೂರ್ಯನಿಂದ ಉತ್ಪತ್ತಿಯಾಗುವ ಸೌರಶಕ್ತಿ ಬಳಸಿ ವಿದ್ಯುತ್ ಉತ್ಪಾದಿಸುವ ಮೂಲಕ ನೈಸರ್ಗಿಕ ಸಂಪನ್ಮೂಲಗಳ ಸದ್ಬಳಕೆಯಲ್ಲಿ ಭಾರತ ಕ್ರಾಂತಿ ಸೃಷ್ಟಿಸಿದ ದೇಶವಾಗಿದೆ. ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ 'ಪಿಎಂ ಸೂರ್ಯ ಘರ್ ಮುಫ್ತ್ ಬಿಜ್ಲಿ' ಯೋಜನೆ ಒಂದು ಕುಟುಂಬವನ್ನು ವಿದ್ಯುತ್ ಬಳಕೆ ಹಾಗೂ ಆರ್ಥಿಕವಾಗಿ ಸ್ವಾವಲಂಬಿಯನ್ನಾಗಿ ಮಾಡುತ್ತದೆ. ಈ ಯೋಜನೆ ಮೂಲಕ ಅಗತ್ಯವಿರುವ ವಿದ್ಯುತ್ ಉತ್ಪಾದಿಸಿ ಬಳಸುವ ಜೊತೆಗೆ ಉಳಿದ ಯುನಿಟ್ ಗಳನ್ನು ಮಾರಾಟ ಮಾಡಬಹುದಾಗಿದೆ. ಇದು ಕರ್ನಾಟಕದಲ್ಲಿ ಇರುವಂತೆ ಹಣ ಕೊಟ್ಟು ಪಡೆಯುವ ಗ್ಯಾರಂಟಿಯಲ್ಲ. ಇದು ಹಣ ಸಂಪಾದನೆ ಮಾಡಿ ತಮ್ಮ ಬದುಕಿಗೆ ಗ್ಯಾರಂಟಿ ಪಡೆಯುವಂಥ ಯೋಜನೆಯಾಗಿದೆ ಎಂದು ಹೇಳಿದರು.
"ಪ್ರಧಾನಿಗಳ ಇಂತಹ ಮಹತ್ವಾಕಾಂಕ್ಷಿ ಯೋಜನೆಗಳನ್ನು ಮೊದಲು ಒಂದು ಗ್ರಾಮ, ವಾರ್ಡ್ ಅಥವಾ ಬೂತ್ ಮಟ್ಟದಲ್ಲಿ ಮಾದರಿಯಾಗಿ ಅನುಷ್ಠಾನಗೊಳಿಸಬೇಕು. ಸಣ್ಣ ಸಣ್ಣ ಪ್ರದೇಶದಲ್ಲಿ ಅನುಷ್ಠಾನ ಪ್ರಕ್ರಿಯೆ ಸುಲಭವಾಗುತ್ತದೆ. ಇದರಿಂದ ಮುಂದೆ ದೊಡ್ಡ ಮಟ್ಟದಲ್ಲಿ ವಿಸ್ತರಿಸಲು ಅನುಕೂಲವಾಗುವ ಜೊತೆಗೆ ಇತರರಿಗೆ ಪ್ರೇರಣೆ ನೀಡುತ್ತದೆ. ಈ ನಿಟ್ಟಿನಲ್ಲಿ ಶಾಸಕರು ಹಾಗೂ ಸ್ಥಳೀಯ ಜನಪ್ರತಿನಿಧಿಗಳು ತಮ್ಮ ಒಂದು ಬೂತ್ ಅಥವಾ ವಾರ್ಡ್ ನಲ್ಲಿ ಈ ಯೋಜನೆಗಳನ್ನು ಅನುಷ್ಟಾನಗೊಳಿಸಿ ಮಾದರಿಯನ್ನಾಗಿ ರೂಪಿಸುವುದಕ್ಕೆ ಕಾರ್ಯಪ್ರವೃತ್ತರಾಗಬೇಕು ಎಂದು ಸಲಹೆ ನೀಡಿದರು. ಶಾಸಕ ವೇದವ್ಯಾಸ್ ಕಾಮತ್, ಪಾಲಿಕೆ ಸದಸ್ಯೆ ವನಿತಾ ಪ್ರಸಾದ್, ಇನರ್ಜಿ ಕಂಪನಿಯ ಅರವಿಂದ್, ಸೂರಜ್ ಶೆಟ್ಟಿ ಮುಂತಾದವರು ಉಪಸ್ಥಿತರಿದ್ದರು.
ಏನಿದು ಪಿಎಂ ಸೂರ್ಯ ಘರ್ ಯೋಜನೆ?
ದೇಶದ ಮನೆಗಳಿಗೆ ಉಚಿತ ವಿದ್ಯುತ್ ಒದಗಿಸುವ ಗುರಿಯನ್ನು ಹೊಂದಿರುವ ಪ್ರಧಾನಿ ಮೋದಿಯವರ ಕನಸಿನ ಯೋಜನೆ ಇದಾಗಿದೆ. ಯೋಜನೆಯಡಿ ಜನರಿಗೆ ತಮ್ಮ ಮನೆಯ ಛಾವಣಿ ಮೇಲೆ ಸೌರ ಫಲಕಗಳನ್ನು ಅಳವಡಿಸಲು 78,000 ರೂ. ಗಳ ವರೆಗೆ ಸಬ್ಸಿಡಿ ನೀಡಲಾಗುತ್ತದೆ. ಇದರ ಫಲಾನುಭವಿಗಳು ಉತ್ಪತ್ತಿಯಾದ ವಿದ್ಯುತ್ ಅನ್ನು ಬಳಕೆ ಮಾಡಿಕೊಂಡು ಉಳಿದ ಯೂನಿಟ್ ಗಳನ್ನು ವಿತರಣಾ ಸಂಸ್ಥೆಗೆ ಮಾರಾಟ ಮಾಡುವ ಮೂಲಕ ಲಾಭ ಗಳಿಸಬಹುದಾಗಿದೆ.
Prime Minister Narendra Modi's ambitious 'PM Surya Ghar Muft Bijli' (PM Surya Griha - Free Electricity) scheme has already been implemented in Dakshina Kannada district. Brijesh Chowta distributed the subsidy letter.
20-09-25 02:59 pm
HK News Desk
Cm Siddaramaiah, Caste Survey: ಜಾತಿ ಸಮೀಕ್ಷೆ ಮ...
19-09-25 10:04 pm
Caste survey: ಜಾತಿ ಸಮೀಕ್ಷೆಗೆ ಸರ್ಕಾರದ ಸಚಿವರಿಂದ...
19-09-25 02:16 pm
ಮೋಸದಿಂದಲೇ ಕಣ್ರೀ ಬಿಜೆಪಿ ಚುನಾವಣೆ ಗೆದ್ದಿದೆ! ರಾಹು...
19-09-25 09:45 am
ಬೆಂಗಳೂರು ಗಬ್ಬೆದ್ದು ನಾರುತ್ತಿದೆ, ರಾಜಧಾನಿ ಈಗ ಗುಂ...
19-09-25 09:42 am
20-09-25 11:42 am
HK News Desk
ಸಿಂಗಾಪುರದಲ್ಲಿ ಸ್ಕ್ಯೂಬಾ ಡೈವಿಂಗ್ ಅವಘಡ: ಬಾಲಿವುಡ್...
19-09-25 05:45 pm
Yasin Malik: ಲಷ್ಕರ್ ಮುಖ್ಯಸ್ಥ ಹಫೀಜ್ ಸಯೀದ್ ಭೇ...
19-09-25 02:24 pm
ಕೇಂದ್ರೀಕೃತ ಸಾಫ್ಟ್ವೇರ್ ಬಳಸಿ ಬೂತ್ಗಳಿಂದಲೇ ಮತದಾ...
18-09-25 08:14 pm
ಎರಡು ಬಾರಿ ಕಚ್ಚಿದ್ರೆ ಬೀದಿ ನಾಯಿಗೆ ಜೀವಾವಧಿ ಶಿಕ್ಷ...
16-09-25 10:11 pm
20-09-25 06:39 pm
Mangalore Correspondent
Mangalore, Heart Attack: ಪ್ರತ್ಯೇಕ ಪ್ರಕರಣ ; ಮೂ...
20-09-25 02:31 pm
ಅಪಸ್ಮಾರ ಕಾಯಿಲೆ, ಕುಂಪಲದ ಹದಿಹರೆಯದ ಬ್ಯೂಟೀಷಿಯನ್ ಯ...
19-09-25 10:46 pm
ಕಟೀಲು ದೇಗುಲದಲ್ಲಿ ಸೇವಾ ದರ ಏಕಾಏಕಿ ದುಪ್ಪಟ್ಟು ; ಬ...
19-09-25 10:21 pm
ಧರ್ಮಸ್ಥಳ ಕೇಸ್ ; ಅನೇಕ ಶವಗಳನ್ನು ಹೂತಿದ್ದೆವು ಎಂದಿ...
19-09-25 09:59 pm
20-09-25 05:11 pm
Mangalore Correspondent
Kasaragod Sexual Abuse: ಅಪ್ರಾಪ್ತ ಬಾಲಕನಿಗೆ ಸಲಿ...
18-09-25 11:44 am
Vijayapura Bank Robbery: SBI ಬ್ಯಾಂಕ್ ದರೋಡೆ ;...
17-09-25 09:44 pm
Mangalore Crime, Cattle Theft: ಅಡ್ಯಾರ್ ನಲ್ಲಿ...
17-09-25 06:04 pm
Udupi, Job Fraud, Scam: ವಿದೇಶದಲ್ಲಿ ಕೆಲಸ ಕೊಡಿಸ...
17-09-25 02:46 pm