ಬ್ರೇಕಿಂಗ್ ನ್ಯೂಸ್
27-08-24 09:37 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 27: ಚೆಕ್ ಬೌನ್ಸ್ ಪ್ರಕರಣದಲ್ಲಿ ಸಿನಿಮಾ ನಟಿ ಪದ್ಮಜಾ ರಾವ್ ಅವರಿಗೆ ಮಂಗಳೂರು ನಗರದ 8ನೇ ಜೆಎಂಎಫ್ಸಿ ನ್ಯಾಯಾಲಯವು ಮೂರು ತಿಂಗಳು ಸಾದಾ ಕಾರಾಗೃಹ ಶಿಕ್ಷೆ ಹಾಗೂ 40.20 ಲಕ್ಷ ರೂ. ದಂಡ ವಿಧಿಸಿದೆ.
ತುಳು ಸಿನಿಮಾ ನಿರ್ದೇಶಕ ವೀರೇಂದ್ರ ಶೆಟ್ಟಿ ಕಾವೂರು ಎಂಬವರು ತಮ್ಮಿಂದ 41 ಲಕ್ಷ ರೂ. ಹಣ ಪಡೆದು, ಆ ಬಳಿಕ ಹಿಂದಿರುಗಿಸದೇ ವಂಚಿಸಿದ್ದಾರೆ ಎಂದು 2021ರಲ್ಲಿ ನಟಿ ಪದ್ಮಜಾ ರಾವ್ ವಿರುದ್ಧ ಪ್ರಕರಣ ದಾಖಲಿಸಿದ್ದರು. ನಟ, ನಿರ್ದೇಶಕ ವೀರೇಂದ್ರ ಶೆಟ್ಟಿ ಅವರಿಗೆ ಪದ್ಮಜಾ ರಾವ್ ಅವರು ಚಾಲಿಪೋಲಿಲು ತುಳು ಸಿನಿಮಾದಲ್ಲಿ ನಟಿಸಲು ಬಂದ ಸಂದರ್ಭ ಪರಿಚಯವಾಗಿದ್ದರು. ಬಳಿಕ ವೀರೇಂದ್ರ ಶೆಟ್ಟಿಯವರ ಒಡೆತನದ ಮಂಗಳೂರಿನ ವೀರೂ ಟಾಕೀಸ್ ಪ್ರೊಡಕ್ಷನ್ಸ್ ಸಂಸ್ಥೆಯಿಂದ ನಟಿ ಪದ್ಮಜಾ ಹಂತ ಹಂತವಾಗಿ 41 ಲಕ್ಷ ರೂ. ಸಾಲವನ್ನು ಪಡೆದಿದ್ದರು. ಸಾಲದ ಭದ್ರತೆಗೆ ಅವರು 40 ಲಕ್ಷ ರೂ. ಚೆಕ್ ನೀಡಿದ್ದರು. ಆದರೆ ಪದ್ಮಜಾ ರಾವ್ ಮನೆಯಿಂದ ಚೆಕ್ ಕಳವು ಮಾಡಿ ಸಹಿಯನ್ನು ಪೋರ್ಜರಿ ಮಾಡಲಾಗಿದೆ ಎಂದು ಪದ್ಮಜಾ ರಾವ್ ಪರ ವಕೀಲರು ಕೋರ್ಟಿನಲ್ಲಿ ವಾದಿಸಿದ್ದರು. ಆದರೆ, ಇದಕ್ಕೆ ಪೂರಕ ಪುರಾವೆಗಳನ್ನು ಒದಗಿಸುವಲ್ಲಿ ಅವರು ವಿಫಲರಾಗಿದ್ದರು.
ಆದರೆ ಪದ್ಮಜಾ ರಾವ್ ಅವರು ಸಾಲ ಹಿಂತಿರುಗಿಸದ್ದರಿಂದ ವೀರೇಂದ್ರ ಅವರು ಚೆಕ್ ನಗದೀಕರಣಕ್ಕೆ ಮುಂದಾಗಿದ್ದು ಬ್ಯಾಂಕ್ನಲ್ಲಿ ಹಣವಿಲ್ಲದ್ದರಿಂದ ಚೆಕ್ ಬೌನ್ಸ್ ಆಗಿತ್ತು. ಬಳಿಕ ಪ್ರಕರಣ ಮಂಗಳೂರಿನ ಎಂಟನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಮೆಟ್ಟಿಲೇರಿತ್ತು. ವಾದ- ವಿವಾದವನ್ನು ಆಲಿಸಿದ ನ್ಯಾಯಾಲಯ, ನಟಿ ಪದ್ಮಜಾ ರಾವ್ ಹಣ ನೀಡದೇ ವಂಚಿಸಿದ್ದಾರೆ. ಹಾಗಾಗಿ, 40.20 ಲಕ್ಷ ರೂ. ದಂಡ ಪಾವತಿಸುವಂತೆ ಪದ್ಮಜಾ ರಾವ್ ಅವರಿಗೆ ನ್ಯಾಯಾಲಯ ಆದೇಶಿಸಿದೆ.
ದಂಡದ ಮೊತ್ತದಲ್ಲಿ 40.17 ಲಕ್ಷ ರೂಪಾಯಿಯನ್ನು ದೂರುದಾರ ವೀರೇಂದ್ರ ಶೆಟ್ಟಿ ಅವರಿಗೆ ಹಾಗೂ ಉಳಿದ ಮೂರು ಸಾವಿರವನ್ನು ರಾಜ್ಯದ ಬೊಕ್ಕಸಕ್ಕೆ ತುಂಬಲು ನ್ಯಾಯಾಲಯ ಸೂಚಿಸಿದೆ. ಒಂದು ವೇಳೆ ದಂಡ ಕಟ್ಟಲು ವಿಫಲವಾದರೆ ಮೂರು ತಿಂಗಳ ಜೈಲು ಶಿಕ್ಷೆ ವಿಧಿಸಿ ಆದೇಶಿಸಲಾಗಿದೆ.
The 8th JMFC Court of Mangaluru has sentenced actress Padmaja Rao to three months of simple imprisonment and has imposed a penalty of Rs 40.20 lakhs on her in a cheque bounce case.
13-09-24 09:10 pm
Bangalore Correspondent
ಸಿಎಂ ಸಿದ್ದರಾಮಯ್ಯ ಪ್ರಕರಣ, ಹೈಕೋರ್ಟ್ ವಿಚಾರಣೆ ಮುಕ...
12-09-24 10:41 pm
MLA Pradeep Eshwar VS Sudhakar: ಸುಧಾಕರ್ ಒಬ್ಬ...
12-09-24 09:44 pm
Pilikula kamabala, Bangalore: ಪಿಲಿಕುಳ ಕಂಬಳಕ್ಕ...
12-09-24 09:13 pm
Parashuram Park, Sunil Kumar, Arun Shyam, Hig...
12-09-24 02:34 pm
13-09-24 12:33 pm
HK News Desk
ಅಬಕಾರಿ ನೀತಿ ಹಗರಣ ; 6 ತಿಂಗಳ ಬಳಿಕ ಸಿಎಂ ಕೇಜ್ರಿವಾ...
13-09-24 12:24 pm
Sitaram Yechury death; 40 ವರ್ಷಗಳಿಂದ ದೇಶದ ರಾಜಕ...
12-09-24 09:12 pm
ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಾಧೀಶರ ಮನೆಯಲ್ಲಿ ಗಣೇಶ...
12-09-24 07:40 pm
ಅಮರಾವತಿಯಲ್ಲಿ ಡೆಡ್ಲಿ ರಸ್ತೆ ಗುಂಡಿ ; ಕಾಲುವೆಗೆ ಉರ...
11-09-24 04:13 pm
13-09-24 08:58 pm
Mangalore Correspondent
Rahul Gandhi, Hariprakash Konemane, Mangalore...
13-09-24 08:28 pm
Mangalore Actor Arjun Kapikad, Koragajja: ರಾಜ...
13-09-24 07:09 pm
Ullal, Mangalore, Suicide: ರಾತ್ರಿ ಊಟ ಮುಗಿಸಿ ಕ...
13-09-24 11:20 am
Mangalore, St Antony bus, HK News: HK Impact:...
12-09-24 10:21 pm
13-09-24 10:50 pm
HK News Desk
Mangalore crime, Bantwal Bank: ಬ್ಯಾಂಕ್ ಕಚೇರಿಯ...
13-09-24 09:08 pm
ಕೊಲ್ಕತ್ತಾ ಘಟನೆ ಬೆನ್ನಲ್ಲೇ ಬಿಹಾರದಲ್ಲಿ ವೈದ್ಯನಿಂದ...
13-09-24 03:51 pm
Mangalore, Vitla, Rape, Crime: ಅಪ್ರಾಪ್ತ ವಿದ್ಯ...
13-09-24 01:28 pm
Mangalore, City Bus, St Antony Travels: ಸಿಟಿ...
12-09-24 05:37 pm