ಬ್ರೇಕಿಂಗ್ ನ್ಯೂಸ್
28-08-24 02:50 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 28: “ಸಂತ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾನಿಲಯದಲ್ಲಿ ಪದವಿ ಪೂರ್ವ ವಿದ್ಯಾರ್ಥಿಗಳಿಗೆ ಒಂದು ದಿನದ ರಾಷ್ಟ್ರೀಯ ಮಟ್ಟದ ಪ್ರತಿಭಾ ಉತ್ಸವ 'ಅಲೋಶಿಯಸ್ ಫೆಸ್ಟ್ 2024' ಆಗಸ್ಟ್ 31 ರಂದು ಕಾಲೇಜು ಆವರಣದ ಎಲ್.ಸಿ.ಆರ್.ಐ. ಸಭಾಂಗಣದಲ್ಲಿ ನಡೆಯಲಿದೆ ಎಂದು ವಿವಿಯ ಕುಲಪತಿ ವಂ.ಡಾ.ಪ್ರವೀಣ್ ಮಾರ್ಟಿಸ್ ಎಸ್.ಜೆ. ಪತ್ರಿಕಾಗೋಷ್ಟಿಯಲ್ಲಿ ಮಾಹಿತಿ ನೀಡಿದರು.
ಈ ಬಗ್ಗೆ ಮಾಹಿತಿ ನೀಡಿದ ಸಹ ಆಯೋಜಕಿ ಭವ್ಯಾ ಶೆಟ್ಟಿ, ಕಾಲೇಜಿನ ಹಳೆ ವಿದ್ಯಾರ್ಥಿ ಕೆಂಡಸಂಪಿಗೆ ಖ್ಯಾತಿಯ ನಟಿ ಮಾನ್ವಿತಾ ಕಾಮತ್ ಅವರು ಉತ್ಸವದ ಉದ್ಘಾಟನೆಯನ್ನು ನಡೆಸಲಿದ್ದಾರೆ. ಗೌರವ ಅತಿಥಿಯಾಗಿ ಲೇಖಕಿ ಸೆರಾ ಫೆಲೆಕ್ಸ್ ಆಗಮಿಸಲಿದ್ದು ಅವರು ಬರೆದಿರುವ 'ಎ ಕ್ರೈ ಹರ್ಡ್ ಏಸ್ ಎ ಸಾಂಗ್' ಎನ್ನುವ ಪುಸ್ತಕ ಈ ವೇಳೆ ಬಿಡುಗಡೆಗೊಳ್ಳಲಿದೆ. ಸಂತ ಅಲೋಶಿಯಸ್ ಶಿಕ್ಷಣ ಸಂಸ್ಥೆಗಳ ವರಿಷ್ಠಾಧಿಕಾರಿ ವಂ.ಮೆಲ್ವಿನ್ ಜೋಸೆಫ್ ಪಿಂಟೋ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸುವರು.
ಉತ್ಸವವನ್ನು 'ಹಬ್ಬಗಳ ಹಬ್ಬ' ಹಾಗೂ 'ಸಾಂಸ್ಕೃತಿಕ ಹಬ್ಬ' ಎಂಬ ಎರಡು ವಿಭಾಗಗಳಲ್ಲಿ ಆಯೋಜಿಸಲಾಗುವುದು. 'ಹಬ್ಬಗಳ ಹಬ್ಬ'ದಲ್ಲಿ ಒಟ್ಟು 31 ಶೈಕ್ಷಣಿಕ ಸ್ಪರ್ಧೆಗಳನ್ನು ಕಲಾ, ವಾಣಿಜ್ಯ, ವಿಜ್ಞಾನ, ಬಿಸಿಎ, ಬಿಬಿಎ, ಬಿವೋಕ್ ಹಾಗೂ ವಿಜ್ಞಾನ ಪ್ರದರ್ಶನಗಳು ಹಾಗೂ ಸಾಂಸ್ಕೃತಿಕ ಹಬ್ಬಗಳಲ್ಲಿ ಶಾಸ್ತ್ರೀಯ ನೃತ್ಯ ಫೇಸ್ ಪೈಂಟಿಂಗ್, ಮೆಹಂದಿ, ಕಸದಿಂದ ರಸ್ತೆ ಹಾಗೂ ವೈವಿದ್ಯಮ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ ಎಂದರು.
ಕಾಲೇಜಿನ ಸಾಂಸ್ಕೃತಿಕ ಕಾರ್ಯದರ್ಶಿ ಅದ್ವಿಕಾ ಶೆಟ್ಟಿ ಮಾತನಾಡಿ ”ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಸಂಸ್ಥೆಯ ಹಳೆಯ ವಿದ್ಯಾರ್ಥಿ ಉದ್ಯಮಿ
ಕನ್ಯಾನ ಸದಾಶಿವ ಶೆಟ್ಟಿ ಆಗಮಿಸಲಿದ್ದಾರೆ. ಸಮಾರಂಭದ ಅಧ್ಯಕ್ಷತೆಯನ್ನು ಅಲೋಶಿಯಸ್ ವಿಶ್ವವಿದ್ಯಾನಿಲಯದ ಕುಲಪತಿ ಪ್ರವೀಣ್ ಮಾರ್ಟಿಸ್ ಎಸ್.ಜೆ ಅವರು ವಹಿಸಲಿದ್ದಾರೆ. ವಿವಿಧ ಕಾಲೇಜುಗಳ 1000ಕ್ಕೂ ಹೆಚ್ಚು ವಿದ್ಯಾರ್ಥಿಗಳು ಸುಮಾರು 37 ಕಾರ್ಯಕ್ರಮಗಳಲ್ಲಿ ಭಾಗವಹಿಸುವ ನಿರೀಕ್ಷೆಯಿದೆ ಎಂದರು.
ಪತ್ರಿಕಾಗೋಷ್ಟಿಯಲ್ಲಿ ಉಪಕುಲಪತಿ ಡಾ.ರೇಜಿ ಜಾನ್, ವ್ಯಾನ್ಸ್ ಡಿಸೋಜ ಮತ್ತಿತರರು ಉಪಸ್ಥಿತರಿದ್ದರು.
Mangalore Aloysius College to hold Aloysius Fest 2024 on August 31st. Aloysius Fest 2024 will be divided into two main categories: 'Festival of Festivals' and 'Cultural Festival'.
15-01-26 05:56 pm
HK News Desk
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
15-01-26 10:24 pm
Mangalore Correspondent
ಗೋ ಸೇವೆಗೆ ಜನಸಾಮಾನ್ಯರು ಕೊಡುಗೆ ನೀಡಲು ವೇದಿಕೆ ; ಕ...
15-01-26 10:07 pm
ದಕ್ಷಿಣ ಕನ್ನಡದ ಸರ್ಕಾರಿ ಶಾಲೆಗಳಿಗೆ ಇಸ್ರೇಲ್ ಡಿಜಿ...
15-01-26 09:04 pm
ಮನರೇಗಾ ಜಾರಿಗೆ ಒತ್ತಾಯಿಸಿ ಸುಳ್ಯದಿಂದ ಮುಲ್ಕಿಗೆ ಪಾ...
15-01-26 08:12 pm
ಜ.18ರಂದು ಮಂಗಳೂರಿನಲ್ಲಿ ಪ್ರಪ್ರಥಮ ಜಾಗತಿಕ ಬಿಲ್ಲವರ...
15-01-26 04:01 pm
15-01-26 11:07 pm
Bangalore Correspondent
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm