ಬ್ರೇಕಿಂಗ್ ನ್ಯೂಸ್
28-08-24 05:49 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 28: ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ಮನೆಗೆ ಕಲ್ಲು ತೂರಾಟ ನಡೆಸಿದ ಪ್ರಕರಣ ಸಂಬಂಧಿಸಿ ಪಾಂಡೇಶ್ವರ ಪೊಲೀಸರು ಇಬ್ಬರು ಹಿಂದೂ ಸಂಘಟನೆ ಕಾರ್ಯಕರ್ತರನ್ನು ಬಂಧಿಸಿದ್ದಾರೆ.
ಬಂಟ್ವಾಳ ತಾಲೂಕಿನ ದಿನೇಶ್ ಕುಡ್ತಮೊಗರು (20) ಮತ್ತು ಬೋಳಂತೂರು ನಿವಾಸಿ ಭರತ್ ಅಲಿಯಾಸ್ ಯಕ್ಷಿತ್ (24) ಬಂಧಿತ ಆರೋಪಿಗಳು. ಇಬ್ಬರೂ ಬಜರಂಗದಳ ಕಾರ್ಯಕರ್ತರೆಂದು ತಿಳಿದುಬಂದಿದೆ. ದಿನೇಶ್ ಚಾಲಕನಾಗಿ ಕೆಲಸ ಮಾಡುತ್ತಿದ್ದು ಈ ಹಿಂದೆ ಮೂರು ಹಲ್ಲೆ ಪ್ರಕರಣಗಳನ್ನು ಎದುರಿಸುತ್ತಿದ್ದಾನೆ. ಭರತ್ ಕನ್ಯಾನದಲ್ಲಿ ಫೈನಾನ್ಸ್ ಕಲೆಕ್ಷನ್ ಮಾಡುವ ಕೆಲಸ ಮಾಡುತ್ತಿದ್ದು ಈ ಹಿಂದೆ ಒಂದು ಪ್ರಕರಣ ಇದೆ. ಆರೋಪಿಗಳು ಮಂಗಳೂರಿನ ಹೊಟೇಲ್ ಒಂದರಲ್ಲಿ ಊಟ ಮಾಡಿ, ಐವಾನ್ ವಿರುದ್ಧದ ಸಿಟ್ಟಿನಲ್ಲಿ ಕಲ್ಲು ಎಸೆದಿದ್ದಾಗಿ ವಿಚಾರಣೆ ವೇಳೆ ಒಪ್ಪಿಕೊಂಡಿದ್ದಾರೆ.
ಐವನ್ ಮನೆಯ ಪರಿಸರದ ಸಿಸಿಟಿವಿ ಕ್ಯಾಮರಾದಲ್ಲಿ ದಾಖಲಾದ ದೃಶ್ಯ ಆಧರಿಸಿ ಆರೋಪಿಗಳನ್ನು ಬಂಧಿಸಿದ್ದಾಗಿ ಕಮಿಷನರ್ ಅನುಪಮ್ ಅಗರ್ವಾಲ್ ತಿಳಿಸಿದ್ದಾರೆ. ರಾಜ್ಯಪಾಲರನ್ನು ಬಾಂಗ್ಲಾಕ್ಕೆ ಹೋಲಿಸಿ ಹೇಳಿಕೆ ನೀಡಿದ್ದಕ್ಕಾಗಿ ಎಂಎಲ್ಸಿ ಐವನ್ ಡಿಸೋಜಾ ವಿರುದ್ಧ ಆಕ್ರೋಶ ವ್ಯಕ್ತವಾಗಿತ್ತು. ಬಿಜೆಪಿ ಕಾರ್ಯಕರ್ತರು ಪ್ರತಿಭಟನೆಯನ್ನೂ ನಡೆಸಿದ್ದರು. ಇದರ ನಡುವೆ, ಆಗಸ್ಟ್ 20 ರ ತಡರಾತ್ರಿ ಐವನ್ ಡಿಸೋಜಾ ಅವರ ಮಂಗಳೂರು ನಗರದ ವೆಲೆನ್ಸಿಯಾದಲ್ಲಿರುವ ಮನೆಗೆ ಕಲ್ಲು ತೂರಾಟ ನಡೆದಿತ್ತು. ಬೈಕ್ ನಲ್ಲಿ ಬಂದ ಇಬ್ಬರು ಯುವಕರು ಮನೆಯ ಮೇಲೆ ಕಲ್ಲು ತೂರಿ ಪರಾರಿಯಾಗಿದ್ದರು ಎನ್ನಲಾಗಿತ್ತು. ಘಟನೆ ಬಗ್ಗೆ ಪ್ರಕರಣ ದಾಖಲಿಸಿ ತನಿಖೆ ನಡೆಸಿದ ಪಾಂಡೇಶ್ವರ ಠಾಣೆ ಪೊಲೀಸರು ಇದೀಗ ಇಬ್ಬರನ್ನು ಬಂಧಿಸಿದ್ದಾರೆ.
Stone pelting on Congress Ivan Dsouza house, two members of Bajrang dal arrested from bantwal. The accused have been identified as Bharat alias Yakshith (24) from Bolantoor Village, Bantwal Taluk and Dinesh Kurthamogeru (20) from Kolnadu Village, Bantwal Taluk.
18-06-26 09:57 pm
HK News Staffer
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
ಆರೆಸ್ಸೆಸ್ ನೋಂದಣಿ ; ಪ್ರಿಯಾಂಕ ಖರ್ಗೆ ಪತ್ರಕ್ಕೆ ಸಾ...
18-06-26 01:25 pm
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
ಧರ್ಮಸ್ಥಳ ಕೇಸ್ ; ಎಡಪಂಥೀಯರ ಒತ್ತಡಕ್ಕೆ ಎಸ್ಐಟಿ, ಷಡ...
17-06-26 10:12 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
19-06-26 12:24 pm
HK News Staffer
Bejai, Kadri Water Issue: ಬಿಜೈ, ಕದ್ರಿಗೆ ಕಲುಷಿ...
18-06-26 12:33 pm
ಬಸ್ಸೋ, ಬಸ್ ನಿಲ್ದಾಣವೋ ? ಗುರುಪುರ ಬಂಡಸಾಲೆಯಲ್ಲಿ ವ...
16-06-26 11:35 am
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
18-06-26 01:20 pm
HK News Staffer
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm
ವಾಯುಪಡೆ ಅಧಿಕಾರಿ ಪತ್ನಿಗೆ ಅಮಲು ಪದಾರ್ಥ ನೀಡಿ ಅತ್ಯ...
16-06-26 08:32 pm
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm