ಬ್ರೇಕಿಂಗ್ ನ್ಯೂಸ್
29-08-24 08:32 pm Mangalore Correspondent ಕರಾವಳಿ
ಉಳ್ಳಾಲ, ಆ.29: ಉಳ್ಳಾಲ ನಗರಸಭೆಯ ಕಾಂಗ್ರೆಸ್ ಆಡಳಿತದ ಎರಡನೇ ಅವಧಿಗೆ ಅಧ್ಯಕ್ಷೆಯಾಗಿ ಶಶಿಕಲಾ, ಉಪಾಧ್ಯಕ್ಷರಾಗಿ ಸಪ್ನಾ ಹರೀಶ್ ಆಯ್ಕೆಗೊಂಡಿದ್ದಾರೆ. ಅಧ್ಯಕ್ಷರ ಆಯ್ಕೆಗೆ ನಡೆದ ಚುನಾವಣಾ ಪ್ರಕ್ರಿಯೆಯಲ್ಲಿ ಕಾಂಗ್ರೆಸ್ ಜತೆ ಎಸ್ಡಿಪಿಐ ಪಕ್ಷದ ನಗರ ಸದಸ್ಯರು ಕೈಜೋಡಿಸಿದ್ದಾರೆ.
ಉಳ್ಳಾಲ ನಗರಸಭೆಯ ಎರಡನೇ ಆಡಳಿತಾವಧಿಯ ಅಧ್ಯಕ್ಷ- ಉಪಾಧ್ಯಕ್ಷ ಸ್ಥಾನಕ್ಕೆ ಗುರುವಾರ ನಗರಸಭೆ ಸಭಾಂಗಣದಲ್ಲಿ ನಗರ ಸದಸ್ಯರು ಅಭ್ಯರ್ಥಿಗಳ ಪರ ಕೈ ಎತ್ತುವ ಮೂಲಕ ಚುನಾವಣೆ ಪ್ರಕ್ರಿಯೆ ನಡೆಯಿತು. ಅಧ್ಯಕ್ಷ ಸ್ಥಾನ ಪರಿಶಿಷ್ಟ ಜಾತಿ ಹಾಗೂ ಉಪಾಧ್ಯಕ್ಷ ಸ್ಥಾನ ಹಿಂದುಳಿದ ವರ್ಗ(ಎ)ದ ಮಹಿಳೆಗೆ ಮೀಸಲಿರಿಸಲಾಗಿತ್ತು.
ಅಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ ನ ಶಶಿಕಲಾ, ಬಿಜೆಪಿಯಿಂದ ಭವಾನಿ, ಉಪಾಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ ನ ಸಪ್ನ ಹರೀಶ್, ಬಿಜೆಪಿಯಿಂದ ನಮಿತಾ ಗಟ್ಟಿ, ಎಸ್ ಡಿಪಿಐಯಿಂದ ಝರೀನ ರವೂಫ್ ನಾಮಪತ್ರ ಸಲ್ಲಿಸಿದ್ದರು.


ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದ ಕಾಂಗ್ರೆಸ್ ನ ಶಶಿಕಲಾ ಪರ 23 ಮತಗಳು, ಬಿಜೆಪಿಯ ಭವಾನಿ ಪರ 6 ಮತಗಳು ಚಲಾವಣೆ ಆಗಿದ್ದು, ಇಬ್ಬರು ನಗರ ಸದಸ್ಯರು ತಟಸ್ಥರಾದರು. ಉಪಾಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸಿನ ಸಪ್ನಾ ಹರೀಶ್ ಪರ 17 ಮತ, ಝರೀನ ರವೂಫ್ ಪರ 6 ಮತ, ಬಿಜೆಪಿಯ ನಮಿತಾ ಗಟ್ಟಿ ಪರ 6 ಮತ ಚಲಾವಣೆ ಆದವು. ಇಬ್ಬರು ನಗರ ಸದಸ್ಯರು ಇಲ್ಲಿಯೂ ತಟಸ್ಥರಾದರು. ಸಹಾಯಕ ಆಯುಕ್ತ ಹರ್ಷವರ್ಧನ್ ಚುನಾವಣೆ ಅಧಿಕಾರಿಯಾಗಿದ್ದರು.
ಉಳ್ಳಾಲ ನಗರಸಭೆಯ ಒಟ್ಟು 31 ಸ್ಥಾನಗಳಲ್ಲಿ ಕಾಂಗ್ರೆಸ್ 13, ಬಿಜೆಪಿ 6, ಜೆಡಿಎಸ್ 4, ಎಸ್ ಡಿಪಿಐ 6 ಹಾಗೂ ಇಬ್ಬರು ಪಕ್ಷೇತರರು ಸ್ಥಾನ ಪಡೆದಿದ್ದಾರೆ. ಜೆಡಿಎಸ್ ನ ನಾಲ್ವರು ಸದಸ್ಯರ ಪೈಕಿ ಮೂವರು ಪಕ್ಷಕ್ಕೆ ರಾಜೀನಾಮೆ ನೀಡಿದ್ದು ಇಬ್ಬರು ಕಾಂಗ್ರೆಸ್ ಸೇರಿದ್ದರು. ಉಳ್ಳಾಲ ನಗರಸಭೆಯ ಕಾಂಗ್ರೆಸ್ ಆಡಳಿತದ ಮೊದಲ ಹಂತದ ಅಧ್ಯಕ್ಷ, ಉಪಾಧ್ಯಕ್ಷರ ಅವಧಿ 2023 ಮೇ ತಿಂಗಳಲ್ಲಿ ಕೊನೆಗೊಂಡಿತ್ತು.
ಕೈ ಪಕ್ಷಕ್ಕೆ ಮತ ಚಲಾಯಿಸಿದ ಎಸ್ಡಿಪಿಐ ಸದಸ್ಯರು
ನಗರಸಭೆಯ ಅಧ್ಯಕ್ಷ ಗಾದಿಗೆ ಸ್ಫರ್ಧಿಸಿದ್ದ ಶಶಿಕಲಾ ಗೆಲ್ಲಲು ಬೇಕಾದ ಸಂಖ್ಯಾ ಬಲ ಇದ್ದರೂ, ಎಸ್ಡಿಪಿಐ ನ ಆರು ನಗರ ಸದಸ್ಯರು ಕೈ ಎತ್ತಿ ಕಾಂಗ್ರೆಸ್ ಪರ ಮತ ಚಲಾಯಿಸಿದ್ದಾರೆ. ಉಪಾಧ್ಯಕ್ಷ ಸ್ಥಾನಕ್ಕೆ ಮಾತ್ರ ಎಸ್ಡಿಪಿಐನ ಝರೀನ ರವೂಫ್ ಸ್ಫರ್ಧಿಸಿದ್ದರು. ನಗರಸಭೆ ಮೊದಲ ಅವಧಿಯಲ್ಲಿ ಎಸ್ಡಿಪಿಐನ ಝರೀನ ರವೂಫ್ ಕೈ ಪಕ್ಷದ ಕೌನ್ಸಿಲರ್ಗಳ ಬೆಂಬಲದಿಂದ ಸ್ಥಾಯಿ ಸಮಿತಿ ಅಧ್ಯಕ್ಷರಾಗಿದ್ದರು.
Mangalore Ullal City Municipal Council Election Results 2024, congress bags victory, sdpi joins hand.
08-11-25 10:29 pm
Bangalore Correspondent
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
08-11-25 11:15 pm
Mangalore Correspondent
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm