ಬ್ರೇಕಿಂಗ್ ನ್ಯೂಸ್
29-08-24 10:33 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 29: ಇಲೆಕ್ಟ್ರಿಕ್ ಆಟೋ ಚಾಲಕರಿಗೆ ಜಿಲ್ಲೆಯಾದ್ಯಂತ ಸಂಚಾರಕ್ಕೆ ಅವಕಾಶ ನೀಡಿರುವುದನ್ನು ವಿರೋಧಿಸಿ ಸಿಎನ್ ಜಿ, ಪೆಟ್ರೋಲ್ ಬಳಕೆಯ ಆಟೋ ಚಾಲಕರು ಪ್ರತಿಭಟನೆ ನಡೆಸಿದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಸ್ಪಷ್ಟನೆ ನೀಡಿದ್ದು, ಇ-ಆಟೋ ಓಡಾಟಕ್ಕೆ ಸಂಬಂಧಿಸಿ ಕೇಂದ್ರದ ಮಾರ್ಗಸೂಚಿ ಪ್ರಕಾರವೇ ಆದೇಶ ನೀಡಲಾಗಿದೆ ಎಂದು ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಮೋಟಾರು ವಾಹನ ಕಾಯಿದೆ 66 ಪ್ರಕಾರ ಎಲ್ಪಿಜಿ ಮತ್ತು ಸಿಎನ್ಜಿ ವಾಹನಗಳಿಗೆ ಪರವಾನಗಿ ನೀಡಲಾಗಿದೆ. ಆಟೋ ರಿಕ್ಷಾಗಳ ಪರವಾನಗಿ ಅನುಮತಿ ಆಧಾರದಲ್ಲಿ ವಲಯ-1, 2 ಎಂದು ವಿಂಗಡಣೆ ಮಾಡಲಾಗಿತ್ತು. ಆದರೆ ಇತ್ತೀಚೆಗೆ ಚಾಲ್ತಿಗೆ ಬಂದ ಇಲೆಕ್ಟ್ರಿಕ್ ಆಟೋರಿಕ್ಷಾಗಳಿಗೆ ಕೇಂದ್ರ ಸರಕಾರವೇ ಸೆಕ್ಷನ್ 66ರಿಂದ ವಿನಾಯಿತಿ ನೀಡಿದೆ. ಇದರಿಂದ ಸಿಎನ್ಜಿ ಮತ್ತು ಎಲ್ಪಿಜಿ ಆಟೋ ಚಾಲಕರು ಅಸಮಾಧಾನಗೊಂಡಿದ್ದಾರೆ. ಆದರೆ, ನಾವು ಕೇಂದ್ರ ಸರಕಾರದ ಮಾರ್ಗಸೂಚಿಯನ್ನಷ್ಟೇ ಪಾಲನೆ ಮಾಡಿದ್ದೇವೆ ಎಂದರು.
ಈ ಬಗ್ಗೆ ಈಗಾಗಲೇ ಆಟೋ ಚಾಲಕರು ಮತ್ತು ಅವರ ವಕೀಲರು ವಿಚಾರ ಮಂಡಿಸಿದ್ದಾರೆ. ಕೇಂದ್ರ ಸರ್ಕಾರದ ಮೋಟಾರು ವಾಹನ ನೀತಿಯಂತೆ, ಮಂಗಳೂರು ನಗರ ಪೊಲೀಸರು, ಮಹಾನಗರ ಪಾಲಿಕೆಯಿಂದ ರಸ್ತೆಯ ಒತ್ತಡ, ಪಾರ್ಕಿಂಗ್ ವ್ಯವಸ್ಥೆಯ ಮಾಹಿತಿ ಪಡೆದು ಇ-ಆಟೋಗಳಿಗೆ ಅನುಮತಿ ನೀಡಲಾಗಿದೆ. ಎಲ್ಲವೂ ಕಾನೂನು ಪ್ರಕಾರವೇ ನಡೆದಿದ್ದು, ಇದರಲ್ಲಿ ಯಾರದ್ದೇ ಹಸ್ತಕ್ಷೇಪ ಇಲ್ಲ. ಹೈಕೋರ್ಟ್ ಆದೇಶವನ್ನು ಗಮನಿಸಿಯೇ ಆದೇಶ ನೀಡಲಾಗಿದೆ. ಇಡೀ ದೇಶದಲ್ಲಿ ಇಲೆಕ್ಟ್ರಿಕ್ ಆಟೋಗಳಿಗೆ ಒಂದೇ ನಿಯಮ ಇದೆ. ವಲಯ ವಿಂಗಡಣೆ ಮಾತ್ರ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಾತ್ರ ಇದೆ ಎಂದು ತಿಳಿಸಿದರು.
ಆಟೋ ಚಾಲಕರ ಬೇಡಿಕೆ ಕುರಿತಂತೆ ಚರ್ಚಿಸಲು ಆಟೋ ಸಂಘಟನೆಗಳೊಂದಿಗೆ ಸೆ.5ರಂದು ಸಭೆ ನಡೆಸಲಾಗುವುದು. ಜಿಲ್ಲೆಯ ಒಳಗಡೆ ವಲಯ ವಿಂಗಡಣೆ ಬೇಡ ಎಂದಾದರೆ ಅದರ ಬಗ್ಗೆ ಚರ್ಚೆ ನಡೆಸಬಹುದು. ಆದರೆ ಇ-ಆಟೋಗಳ ಕುರಿತಾಗಿ ದೇಶಾದ್ಯಂತ ಏಕರೂಪದ ಕಾನೂನು ಇರುವಾಗ ಬದಲಾವಣೆ ಮಾಡಲಾಗಲ್ಲ ಎಂದು ಜಿಲ್ಲಾಧಿಕಾರಿ ಸ್ಪಷ್ಟನೆ ನೀಡಿದರು. ಪ್ರಾದೇಶಿಕ ಸಾರಿಗೆ ಅಧಿಕಾರಿ ಶ್ರೀಧರ್ ಮಲ್ಲಾಡ್ ಉಪಸ್ಥಿತರಿದ್ದರು.
Dakshina Kannada deputy commissioner Mullai Muhilan on Thursday, August 29 dismissed the demand by petrol, LPG, and CNG autorickshaw drivers to impose regulated zones on electric autorickshaws, stating that there is no provision for such restrictions under the existing Motor Vehicles Act (MVA) of 1988.
20-09-25 02:59 pm
HK News Desk
Cm Siddaramaiah, Caste Survey: ಜಾತಿ ಸಮೀಕ್ಷೆ ಮ...
19-09-25 10:04 pm
Caste survey: ಜಾತಿ ಸಮೀಕ್ಷೆಗೆ ಸರ್ಕಾರದ ಸಚಿವರಿಂದ...
19-09-25 02:16 pm
ಮೋಸದಿಂದಲೇ ಕಣ್ರೀ ಬಿಜೆಪಿ ಚುನಾವಣೆ ಗೆದ್ದಿದೆ! ರಾಹು...
19-09-25 09:45 am
ಬೆಂಗಳೂರು ಗಬ್ಬೆದ್ದು ನಾರುತ್ತಿದೆ, ರಾಜಧಾನಿ ಈಗ ಗುಂ...
19-09-25 09:42 am
20-09-25 11:42 am
HK News Desk
ಸಿಂಗಾಪುರದಲ್ಲಿ ಸ್ಕ್ಯೂಬಾ ಡೈವಿಂಗ್ ಅವಘಡ: ಬಾಲಿವುಡ್...
19-09-25 05:45 pm
Yasin Malik: ಲಷ್ಕರ್ ಮುಖ್ಯಸ್ಥ ಹಫೀಜ್ ಸಯೀದ್ ಭೇ...
19-09-25 02:24 pm
ಕೇಂದ್ರೀಕೃತ ಸಾಫ್ಟ್ವೇರ್ ಬಳಸಿ ಬೂತ್ಗಳಿಂದಲೇ ಮತದಾ...
18-09-25 08:14 pm
ಎರಡು ಬಾರಿ ಕಚ್ಚಿದ್ರೆ ಬೀದಿ ನಾಯಿಗೆ ಜೀವಾವಧಿ ಶಿಕ್ಷ...
16-09-25 10:11 pm
20-09-25 06:39 pm
Mangalore Correspondent
Mangalore, Heart Attack: ಪ್ರತ್ಯೇಕ ಪ್ರಕರಣ ; ಮೂ...
20-09-25 02:31 pm
ಅಪಸ್ಮಾರ ಕಾಯಿಲೆ, ಕುಂಪಲದ ಹದಿಹರೆಯದ ಬ್ಯೂಟೀಷಿಯನ್ ಯ...
19-09-25 10:46 pm
ಕಟೀಲು ದೇಗುಲದಲ್ಲಿ ಸೇವಾ ದರ ಏಕಾಏಕಿ ದುಪ್ಪಟ್ಟು ; ಬ...
19-09-25 10:21 pm
ಧರ್ಮಸ್ಥಳ ಕೇಸ್ ; ಅನೇಕ ಶವಗಳನ್ನು ಹೂತಿದ್ದೆವು ಎಂದಿ...
19-09-25 09:59 pm
20-09-25 05:11 pm
Mangalore Correspondent
Kasaragod Sexual Abuse: ಅಪ್ರಾಪ್ತ ಬಾಲಕನಿಗೆ ಸಲಿ...
18-09-25 11:44 am
Vijayapura Bank Robbery: SBI ಬ್ಯಾಂಕ್ ದರೋಡೆ ;...
17-09-25 09:44 pm
Mangalore Crime, Cattle Theft: ಅಡ್ಯಾರ್ ನಲ್ಲಿ...
17-09-25 06:04 pm
Udupi, Job Fraud, Scam: ವಿದೇಶದಲ್ಲಿ ಕೆಲಸ ಕೊಡಿಸ...
17-09-25 02:46 pm