ಬ್ರೇಕಿಂಗ್ ನ್ಯೂಸ್
09-12-20 03:39 pm Mangalore Correspondent ಕರಾವಳಿ
ಉಳ್ಳಾಲ, ಡಿ, 9 : ತನ್ನ ಫರ್ನಿಚರ್ ವರ್ಕ್ ಶಾಪ್ ಗೆ ತಡೆಯಾಗುತ್ತಿದೆ ಎಂಬ ನೆಪ ಹೇಳಿ, ಹೆದ್ದಾರಿ ಅಂಚಿನಲ್ಲಿದ್ದ ಬೀದಿ ವ್ಯಾಪಾರಿಗಳ ಗೂಡಂಗಡಿಗಳನ್ನು ಮಾಜಿ ಕಾಂಗ್ರೆಸ್ ಸೇವಾದಳದ ನಾಯಕ ಅಶ್ರಫ್ ಪೊಲೀಸರಿಂದ ಕಿತ್ತು ತೆಗೆಸಿದ್ದು ಆಕ್ರೋಶಕ್ಕೆ ಕಾರಣವಾಗಿದೆ.
ಈ ಹಿಂದೆ ಕಾಂಗ್ರೆಸಿನ ಸೇವಾದಳದ ಜಿಲ್ಲಾ ನಾಯಕನಾಗಿದ್ದ ಅಶ್ರಪ್ ಅವರು ತೊಕ್ಕೊಟ್ಟು , ಅಂಬಿಕಾರೋಡ್ ಹೆದ್ದಾರಿ ಪಕ್ಕದಲ್ಲಿ ತನ್ನ ಫರ್ನಿಚರ್ ವರ್ಕ್ ಶಾಪ್ ಹೊಂದಿದ್ದಾರೆ. ಸ್ಥಳೀಯರ ಪ್ರಕಾರ ಈ ಫರ್ನಿಚರ್ ವರ್ಕ್ ಶಾಪ್ ಅಕ್ರಮ ಎಂದು ಹೇಳಲಾಗುತ್ತಿದೆ. ಅಶ್ರಫ್ ಮೇಲೆ ಅತ್ಯಾಚಾರದ ಆರೋಪ ಕೇಸ್ ಆದ ಮೇಲೆ ಅವರು ಕಾಂಗ್ರೆಸ್ ಪಕ್ಷದಿಂದ ಮೂಲೆಗುಂಪಾಗಿದ್ದರು. ಇವತ್ತು ಅಶ್ರಫ್, ತನ್ನ ಫರ್ನಿಚರ್ ವರ್ಕ್ ಶಾಪ್ ಮುಂದೆ ವ್ಯಾಪಾರ ನಡೆಸುತ್ತಿದ್ದ ಬೀದಿ ಬದಿ ವ್ಯಾಪಾರಿಗಳನ್ನ ಏಕಾಏಕಿ ಪೊಲೀಸ್ ಬಲ ಪ್ರಯೋಗಿಸಿ ಎತ್ತಂಗಡಿ ಮಾಡಿಸಲು ಪ್ರಯತ್ನಿಸಿದ್ದಾರೆ.


ಅಲ್ಲದೆ ಉಳ್ಳಾಲ ನಗರಸಭೆ ಪೌರಾಯುಕ್ತರನ್ನು ಸ್ಥಳಕ್ಕೆ ಕರೆಯಿಸಿದ್ದಾರೆ. ಸ್ಥಳಕ್ಕೆ ಬಂದ ನಗರ ಪೌರಾಯುಕ್ತ ರಾಯಪ್ಪನವರೂ ಧನಿಕನ ಮಾತು ಕೇಳಿ ತನಗೆ ಸಂಬಂಧಿಸದ ಹೆದ್ದಾರಿ ಬದಿಯ ಬೀದಿ ವ್ಯಾಪಾರಿಗಳ ಗೂಡುಗಳನ್ನು ತೆರವುಗೊಳಸಿ ಅಮಾನವೀಯತೆ ಮೆರೆದಿದ್ದಾರೆ. ಹೆದ್ದಾರಿ ಅಂಚಿನ ವರೆಗೂ ಇರುವ ಜಾಗ ತನ್ನದೇ ಎಂದು ಬೀದಿ ಬದಿ ವ್ಯಾಪಾರಿಗಳಲ್ಲಿ ಅಶ್ರಫ್ ಹೇಳಿಕೊಂಡಿದ್ದಾರಂತೆ.


ಸ್ಥಳದಲ್ಲಿ ಸ್ಥಳೀಯ ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರು ಸೇರಿ ಒಟ್ಟಾಗಿ ಪೊಲೀಸ್ ದೌರ್ಜನ್ಯವನ್ನು ವಿರೋಧಿಸಿದ್ದಾರೆ. ಬಡವರು ಹೆದ್ದಾರಿಯಲ್ಲಿ ಎಲ್ಲೆಡೆಯಲ್ಲೂ ಹೊಟ್ಟೆ ಹೊರೆಯಲು ಸಣ್ಣ ವ್ಯಾಪಾರ ನಡೆಸೋದು ಸಾಮಾನ್ಯ. ಆದರೆ ಓರ್ವ ಪ್ರಭಾವಿಯ ಮಾತು ಕೇಳಿ ಈ ರೀತಿ ಬಡವರ ಮೇಲೆ ಏಕಾಏಕಿ ಆಕ್ರಮಣ ಸರಿಯಲ್ಲವೆಂದು ಪೊಲೀಸರನ್ನು ತರಾಟೆಗೆ ತೆಗೆದಿದ್ದಾರೆ.
ಕಾಂಗ್ರೆಸ್ನ ದೀಪಕ್ ಪಿಲಾರ್, ಖಾದರ್ ಉಳ್ಳಾಲ್, ಬಿಜೆಪಿಯ ಚರಣ್ ಪೂಜಾರಿ, ನಾಗೇಶ್ ಕುಂಪಲ ಮೊದಲಾದವರು ಸ್ಥಳದಲ್ಲಿದ್ದು ಬಡ ಬೀದಿ ವ್ಯಾಪಾರಿಗಳ ಪರ ನಿಂತಿದ್ದಾರೆ.
Congress Member Ashraff from Thokottu mercilessly demolishes petty shops through police personal for the sake of his business activities.
25-06-26 09:10 pm
HK News Staffer
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 10:56 pm
HK News Staffer
Mangalore Drugs, Police: ಒಂದು ವರ್ಷದಲ್ಲಿ 400 ಡ...
25-06-26 10:48 pm
ಸಂಪುಟ ವಿಸ್ತರಣೆ ವಿಳಂಬ ; ಪ್ರಕೃತಿ ವಿಕೋಪ ಮೇಲುಸ್ತು...
25-06-26 02:39 pm
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
25-06-26 09:40 pm
HK News Staffer
ಮಂಡ್ಯದಲ್ಲಿ ಸೆಲ್ಫಿ ಹುಚ್ಚಿಗೆ ಐವರ ಬಲಿ ; ಕಾವೇರಿ ನ...
25-06-26 01:00 pm
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm