ಬ್ರೇಕಿಂಗ್ ನ್ಯೂಸ್
31-08-24 11:12 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 31: ಹಿರಿಯ ಬಿಲ್ಲವ ಮುಂದಾಳು, ತುಳು- ಕನ್ನಡ ಸಂಘಟಕ, ಸಾಮಾಜಿಕ- ಧಾರ್ಮಿಕ ಕ್ಷೇತ್ರದ ನಾಯಕ, ಗೋಕರ್ಣನಾಥ ಬ್ಯಾಂಕಿನ ಮಾಜಿ ಅಧ್ಯಕ್ಷ ಬಿ. ದಾಮೋದರ ನಿಸರ್ಗ (73) ಅಲ್ಪಕಾಲದ ಅಸೌಖ್ಯದಿಂದ ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ತುಳು, ಕನ್ನಡ ಸಾಹಿತ್ಯ ಸಂಘಟನೆ, ಸಮ್ಮೇಳನಗಳನ್ನು ಸಂಯೋಜಿಸಿದ ಅನುಭವಿ, ತುಳುಕೂಟದ ಅಧ್ಯಕ್ಷರಾಗಿ ತುಳು ಸಾಹಿತ್ಯ ಕ್ಷೇತ್ರಕ್ಕೆ ಕೊಡುಗೆ ನೀಡಿದ ದಾಮೋದರ ನಿಸರ್ಗ ಅವರು ಹೆಸರಾಂತ ಕಾದಂಬರಿಕಾರ, ಚಲನಚಿತ್ರ ನಿರ್ದೇಶಕ ವಿಶುಕುಮಾರ್ ಇವರ ಸೋದರ. 1949ರಲ್ಲಿ ಮಂಗಳೂರಿನ ಮರೋಳಿಯ ನಿಸರ್ಗ ಮನೆಯಲ್ಲಿ ಯಕ್ಷಗಾನ ಕ್ಷೇತ್ರದ ದಿಗ್ಗಜ ದೋಗ್ರ ಪೂಜಾರಿ ಮತ್ತು ಚಂದ್ರಾವತಿ ಇವರ ಮಗನಾಗಿ ಜನಿಸಿದ್ದರು. ಇವರು ಮಡದಿ ಹೇಮಾ ನಿಸರ್ಗ, ಮಗಳು ಡಾಕ್ಟರ್ ವಿನ್ಯಾಸ ನಿಸರ್ಗ, ಅಳಿಯ ಡಾಕ್ಟರ್ ವಿನಯ್ ಜತ್ತನ್ ಮತ್ತು ಮಗ ತ್ರಿದೇವ್ ನಿಸರ್ಗ ಸೇರಿದಂತೆ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.
ಸಾಹಿತ್ಯ ಸಂಘಟನೆಯ ಜೊತೆಗೆ ವೃತ್ತಿಯಲ್ಲಿ ಸಿವಿಲ್ ಕಾಂಟ್ರಾಕ್ಟರ್ ಆಗಿದ್ದ ದಾಮೋದರ ನಿಸರ್ಗ ಮರೋಳಿಯ ಸೂರ್ಯನಾರಾಯಣ ದೇವಸ್ಥಾನದ ಆಡಳಿತ ಮೊಕ್ತೈಸರರಾಗಿ, ಗೋಕರ್ಣನಾಥ ಬ್ಯಾಂಕಿನ ಅಧ್ಯಕ್ಷರಾಗಿ, ಕಂಕನಾಡಿ ಗರಡಿಯ ಆಡಳಿತ ಮಂಡಳಿಯ ಸದಸ್ಯರಾಗಿ, ಕಂಕನಾಡಿ ಬಿಲ್ಲವ ಸಂಘದ ಸ್ಥಾಪಕ ಅಧ್ಯಕ್ಷರಾಗಿ, ಕುಡ್ಲ ತುಳುಕೂಟದ ಅಧ್ಯಕ್ಷರಾಗಿ, ತುಳು ಒಕ್ಕೂಟದ ಕಾರ್ಯಾಧ್ಯಕ್ಷರಾಗಿ, ದೋಗ್ರ ಪೂಜಾರಿ ಯಕ್ಷಗಾನ ಕೇಂದ್ರದ ಸ್ಥಾಪಕ ಅಧ್ಯಕ್ಷರಾಗಿ, ದೋಗ್ರ ಪೂಜಾರಿ ಯಕ್ಷಗಾನ ಪ್ರಶಸ್ತಿಯ ಸ್ಥಾಪಕರಾಗಿ ಹತ್ತು ಹಲವು ಕ್ಷೇತ್ರಗಳಲ್ಲಿ ತನ್ನನ್ನು ತೊಡಗಿಸಿಕೊಂಡಿದ್ದರು.
ಬಿ ದಾಮೋದರ ನಿಸರ್ಗ ಅವರ ಅಂತಿಮ ಸಂಸ್ಕಾರ ಭಾನುವಾರ ಸೆ.1ರ ಬೆಳಗ್ಗೆ 11 ಗಂಟೆಗೆ ನಡೆಯಲಿದೆ. ಮರೋಳಿಯ ಅವರ ಸ್ವಗೃಹದಿಂದ ಮೆರವಣಿಗೆಯಲ್ಲಿ ಬಂದು ಕಂಕನಾಡಿ ಗರಡಿಯ ಮುಂಭಾಗದಲ್ಲಿ 11 ಗಂಟೆಯಿಂದ 12 ಗಂಟೆಯವರೆಗೆ ಸಾರ್ವಜನಿಕ ದರ್ಶನಕ್ಕೆ ಇಡಲಾಗುವುದು ಎಂದು ಕುಟುಂಸ್ಥರು ತಿಳಿಸಿದ್ದಾರೆ.
73 year old Billava, Gokarnath bank fomer director Damodar Nisarga passes away in Mangalore.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
14-07-26 01:37 pm
HK News Staffer
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
14-07-26 02:43 pm
HK News Staffer
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm