ಬ್ರೇಕಿಂಗ್ ನ್ಯೂಸ್
31-08-24 11:12 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 31: ಹಿರಿಯ ಬಿಲ್ಲವ ಮುಂದಾಳು, ತುಳು- ಕನ್ನಡ ಸಂಘಟಕ, ಸಾಮಾಜಿಕ- ಧಾರ್ಮಿಕ ಕ್ಷೇತ್ರದ ನಾಯಕ, ಗೋಕರ್ಣನಾಥ ಬ್ಯಾಂಕಿನ ಮಾಜಿ ಅಧ್ಯಕ್ಷ ಬಿ. ದಾಮೋದರ ನಿಸರ್ಗ (73) ಅಲ್ಪಕಾಲದ ಅಸೌಖ್ಯದಿಂದ ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ತುಳು, ಕನ್ನಡ ಸಾಹಿತ್ಯ ಸಂಘಟನೆ, ಸಮ್ಮೇಳನಗಳನ್ನು ಸಂಯೋಜಿಸಿದ ಅನುಭವಿ, ತುಳುಕೂಟದ ಅಧ್ಯಕ್ಷರಾಗಿ ತುಳು ಸಾಹಿತ್ಯ ಕ್ಷೇತ್ರಕ್ಕೆ ಕೊಡುಗೆ ನೀಡಿದ ದಾಮೋದರ ನಿಸರ್ಗ ಅವರು ಹೆಸರಾಂತ ಕಾದಂಬರಿಕಾರ, ಚಲನಚಿತ್ರ ನಿರ್ದೇಶಕ ವಿಶುಕುಮಾರ್ ಇವರ ಸೋದರ. 1949ರಲ್ಲಿ ಮಂಗಳೂರಿನ ಮರೋಳಿಯ ನಿಸರ್ಗ ಮನೆಯಲ್ಲಿ ಯಕ್ಷಗಾನ ಕ್ಷೇತ್ರದ ದಿಗ್ಗಜ ದೋಗ್ರ ಪೂಜಾರಿ ಮತ್ತು ಚಂದ್ರಾವತಿ ಇವರ ಮಗನಾಗಿ ಜನಿಸಿದ್ದರು. ಇವರು ಮಡದಿ ಹೇಮಾ ನಿಸರ್ಗ, ಮಗಳು ಡಾಕ್ಟರ್ ವಿನ್ಯಾಸ ನಿಸರ್ಗ, ಅಳಿಯ ಡಾಕ್ಟರ್ ವಿನಯ್ ಜತ್ತನ್ ಮತ್ತು ಮಗ ತ್ರಿದೇವ್ ನಿಸರ್ಗ ಸೇರಿದಂತೆ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.
ಸಾಹಿತ್ಯ ಸಂಘಟನೆಯ ಜೊತೆಗೆ ವೃತ್ತಿಯಲ್ಲಿ ಸಿವಿಲ್ ಕಾಂಟ್ರಾಕ್ಟರ್ ಆಗಿದ್ದ ದಾಮೋದರ ನಿಸರ್ಗ ಮರೋಳಿಯ ಸೂರ್ಯನಾರಾಯಣ ದೇವಸ್ಥಾನದ ಆಡಳಿತ ಮೊಕ್ತೈಸರರಾಗಿ, ಗೋಕರ್ಣನಾಥ ಬ್ಯಾಂಕಿನ ಅಧ್ಯಕ್ಷರಾಗಿ, ಕಂಕನಾಡಿ ಗರಡಿಯ ಆಡಳಿತ ಮಂಡಳಿಯ ಸದಸ್ಯರಾಗಿ, ಕಂಕನಾಡಿ ಬಿಲ್ಲವ ಸಂಘದ ಸ್ಥಾಪಕ ಅಧ್ಯಕ್ಷರಾಗಿ, ಕುಡ್ಲ ತುಳುಕೂಟದ ಅಧ್ಯಕ್ಷರಾಗಿ, ತುಳು ಒಕ್ಕೂಟದ ಕಾರ್ಯಾಧ್ಯಕ್ಷರಾಗಿ, ದೋಗ್ರ ಪೂಜಾರಿ ಯಕ್ಷಗಾನ ಕೇಂದ್ರದ ಸ್ಥಾಪಕ ಅಧ್ಯಕ್ಷರಾಗಿ, ದೋಗ್ರ ಪೂಜಾರಿ ಯಕ್ಷಗಾನ ಪ್ರಶಸ್ತಿಯ ಸ್ಥಾಪಕರಾಗಿ ಹತ್ತು ಹಲವು ಕ್ಷೇತ್ರಗಳಲ್ಲಿ ತನ್ನನ್ನು ತೊಡಗಿಸಿಕೊಂಡಿದ್ದರು.
ಬಿ ದಾಮೋದರ ನಿಸರ್ಗ ಅವರ ಅಂತಿಮ ಸಂಸ್ಕಾರ ಭಾನುವಾರ ಸೆ.1ರ ಬೆಳಗ್ಗೆ 11 ಗಂಟೆಗೆ ನಡೆಯಲಿದೆ. ಮರೋಳಿಯ ಅವರ ಸ್ವಗೃಹದಿಂದ ಮೆರವಣಿಗೆಯಲ್ಲಿ ಬಂದು ಕಂಕನಾಡಿ ಗರಡಿಯ ಮುಂಭಾಗದಲ್ಲಿ 11 ಗಂಟೆಯಿಂದ 12 ಗಂಟೆಯವರೆಗೆ ಸಾರ್ವಜನಿಕ ದರ್ಶನಕ್ಕೆ ಇಡಲಾಗುವುದು ಎಂದು ಕುಟುಂಸ್ಥರು ತಿಳಿಸಿದ್ದಾರೆ.
73 year old Billava, Gokarnath bank fomer director Damodar Nisarga passes away in Mangalore.
15-01-26 05:56 pm
HK News Desk
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
15-01-26 10:24 pm
Mangalore Correspondent
ಗೋ ಸೇವೆಗೆ ಜನಸಾಮಾನ್ಯರು ಕೊಡುಗೆ ನೀಡಲು ವೇದಿಕೆ ; ಕ...
15-01-26 10:07 pm
ದಕ್ಷಿಣ ಕನ್ನಡದ ಸರ್ಕಾರಿ ಶಾಲೆಗಳಿಗೆ ಇಸ್ರೇಲ್ ಡಿಜಿ...
15-01-26 09:04 pm
ಮನರೇಗಾ ಜಾರಿಗೆ ಒತ್ತಾಯಿಸಿ ಸುಳ್ಯದಿಂದ ಮುಲ್ಕಿಗೆ ಪಾ...
15-01-26 08:12 pm
ಜ.18ರಂದು ಮಂಗಳೂರಿನಲ್ಲಿ ಪ್ರಪ್ರಥಮ ಜಾಗತಿಕ ಬಿಲ್ಲವರ...
15-01-26 04:01 pm
15-01-26 11:07 pm
Bangalore Correspondent
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm