ಬ್ರೇಕಿಂಗ್ ನ್ಯೂಸ್
02-09-24 09:20 pm Mangalore Correspondent ಕರಾವಳಿ
ಮಂಗಳೂರು, ಸೆ.2: ವೆನ್ಲಾಕ್ ಆಸ್ಪತ್ರೆಯಲ್ಲಿ 50 ಬೆಡ್ ಆಯುಷ್ ಆಸ್ಪತ್ರೆಯ ಉಪಕರಣ ಖರೀದಿಯಲ್ಲಿ 28 ಲಕ್ಷ ವೆಚ್ಚದ ಸಿಎಸ್.ಆರ್ ನಿಧಿ ಯೋಜನೆಯಡಿ
ಅವ್ಯವಹಾರ ನಡೆದಿದೆ ಎಂಬ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಕೂಲಂಕುಷವಾದ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಇಲಾಖೆಯ ಪ್ರಧಾನ ಕಾರ್ಯದರ್ಶಿ ಹರ್ಷ ಗುಪ್ತಾ ಅವರಿಗೆ ಆದೇಶಿಸಿದ್ದಾರೆ.
ಪ್ರಕರಣ ಕುರಿತಂತೆ ಮಂಗಳೂರು ಜಿಲ್ಲಾ ಆಯುಷ್ ಅಧಿಕಾರಿ ಖುದ್ದು ಸಚಿವರನ್ನ ಭೇಟಿ ಮಾಡಿ ಉದ್ದೇಶಪೂರ್ವಕ ತನ್ನ ಮೇಲೆ ಆರೋಪ ಹೊರಿಸುತ್ತಿದ್ದು, ಕರ್ತವ್ಯಕ್ಕೆ ಅಡ್ಡಿಪಡಿಸಲಾಗುತ್ತಿದೆ ಎಂದು ಅಳಲು ತೋಡಿಕೊಂಡಿದ್ದರು. ಸಾಮಾಜಿಕ ಕಾರ್ಯಕರ್ತ ವಾಸುದೇವ್ ಹೊಳ್ಳ, ಜಿ.ಎಸ್.ಡಿ ಪಾಣಿ, ಕಿರಣ್ ಪೂಜಾರಿ ಎಂಬವರು ದುರುದ್ದೇಶ ಹೊಂದಿದ್ದು, ಆಯುಷ್ ಆಸ್ಪತ್ರೆಯ ಅಭಿವೃದ್ಧಿ ಕಾರ್ಯಕ್ಕೆ ಅಡ್ಡಿಯಾಗಿದ್ದಾರೆ. ಅನಗತ್ಯ ದೂರುಗಳನ್ನ ಸಲ್ಲಿಸಿ ಅಡ್ಡಿಪಡಿಸುತ್ತಿದ್ದಾರೆ. ಸಿಎಸ್.ಆರ್ ಯೋಜನೆಯ ಮೂಲಕ ಹಣವನ್ನ ತಂದು ಆಯುಷ್ ಆಸ್ಪತ್ರೆಗೆ ಮೂಲಸೌಕರ್ಯ ಒದಗಿಸಲು ಶ್ರಮ ವಹಿಸಲಾಗಿತ್ತು. ಆದರೆ ಈ ಮೂವರು ತಮ್ಮ ವೈಯಕ್ತಿಕ ಹಿತಾಸಕ್ತಿಯ ರಕ್ಷಣೆಗಾಗಿ ಸರ್ಕಾರಿ ಕಾರ್ಯಕ್ಕೆ ಅಡ್ಡಿಯುಂಟುಮಾಡಿದ್ದಾರೆ ಎಂದು ದೂರಿದ್ದರು.
ಇನ್ನೊಂದಡೆ ಈ ಯೋಜನೆಯಲ್ಲಿ ಅವ್ಯವಹಾರ ನಡೆದಿದೆ ಎಂಬ ಆರೋಪವು ಕೇಳಿಬಂದಿತ್ತು. ಆರೋಪ ಪ್ರತ್ಯಾರೋಪಗಳು ವ್ಯಕ್ತವಾದ ಹಿನ್ನೆಲೆಯಲ್ಲಿ ಪ್ರಕರಣದ ಕೂಲಂಕುಷ ತನಿಖೆಗೆ ಆರೋಗ್ಯ ಸಚಿವರು ಆದೇಶಿಸಿದ್ದಾರೆ. ಆರೋಪದಲ್ಲಿ ಸತ್ಯಾಸತ್ಯತೆ ಇದೆಯೇ ಅಥವಾ ಉದ್ದೇಶಪೂರ್ವಕವಾಗಿ ದೂರು ಸಲ್ಲಿಸಲಾಗಿದೆಯೇ ಎಂಬುದರ ಬಗ್ಗೆ ಪ್ರಾಥಮಿಕ ತನಿಖೆ ನಡೆಸಿ ವರದಿ ಸಲ್ಲಿಸಲು ಆದೇಶದಲ್ಲಿ ಸೂಚಿಸಲಾಗಿದೆ. ಅಲ್ಲದೇ ಪ್ರಕರಣದಲ್ಲಿ ಆಯುಷ್ ಅಧಿಕಾರಿಗಳು ತಪ್ಪು ಎಸಗಿದ್ದರೆ ಸೂಕ್ತ ಶಿಸ್ತುಕ್ರಮಕ್ಕೆ ಪ್ರಸ್ತಾವನೆ ಸಲ್ಲಿಸಿ. ಒಂದು ವೇಳೆ ಆಯುಷ್ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸುವ ದುರುದ್ದೇಶದಿಂದ ದೂರುದಾರರು ಆರೋಪಗಳನ್ನ ಮಾಡಿದ್ದಾರೆ ಎಂದು ಕಂಡುಬಂದರೆ ಸೂಕ್ತ ಕಾನೂನು ಕ್ರಮಕ್ಕೆ ಮುಂದಾಗುವಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಮ್ಮ ಆದೇಶದಲ್ಲಿ ಇಲಾಖೆ ಪ್ರಧಾನ ಕಾರ್ಯದರ್ಶಿ ಹರ್ಷ ಗುಪ್ತಾ ಅವರಿಗೆ ಸೂಚಿಸಿದ್ದಾರೆ.
Mangalore Ayush instrument scam, Health minister orders probe.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
14-07-26 01:37 pm
HK News Staffer
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
14-07-26 02:43 pm
HK News Staffer
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm