ಬ್ರೇಕಿಂಗ್ ನ್ಯೂಸ್
05-09-24 03:51 pm Udupi Correspondent ಕರಾವಳಿ
ಉಡುಪಿ, ಸೆ.5: ಹಿಜಾಬ್ ವಿವಾದ ಕಾರಣಕ್ಕೆ ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ ಕುಂದಾಪುರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಬಿ.ಜಿ ರಾಮಕೃಷ್ಣ ಅವರಿಗೆ ಪ್ರಶಸ್ತಿ ಕೊಡುವುದಕ್ಕೆ ಪ್ರಗತಿಪರರಿಂದ ಆಕ್ಷೇಪ ವ್ಯಕ್ತವಾಗಿದ್ದು, ರಾಜ್ಯ ಶಿಕ್ಷಣ ಇಲಾಖೆ ಪ್ರಶಸ್ತಿಯನ್ನು ತಡೆಹಿಡಿದಿದೆ.
ಶಿಕ್ಷಕರ ದಿನಾಚರಣೆ ಹಿನ್ನೆಲೆ ರಾಜ್ಯದಲ್ಲಿ ರಾಜ್ಯ ಶಿಕ್ಷಣ ಇಲಾಖೆ ಇಬ್ಬರು ಪ್ರಾಂಶುಪಾಲರು ಸೇರಿದಂತೆ 20 ಪ್ರಾಥಮಿಕ ಶಾಲೆ ಶಿಕ್ಷಕರು, 11 ಪ್ರೌಢಶಾಲೆ ಶಿಕ್ಷಕರು, ಎಂಟು ಪಿಯು ಉಪನ್ಯಾಸಕರನ್ನು ರಾಜ್ಯಮಟ್ಟದ ಶಿಕ್ಷಕ ಪ್ರಶಸ್ತಿಗೆ ಆಯ್ಕೆ ಮಾಡಿತ್ತು. ಪ್ರಶಸ್ತಿ ಪಟ್ಟಿಯಲ್ಲಿ ಕುಂದಾಪುರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಬಿಜಿ ರಾಮಕೃಷ್ಣ ಹೆಸರೂ ಇತ್ತು. ಆದರೆ ಕೊನೆಯ ಕ್ಷಣದಲ್ಲಿ ಪ್ರಶಸ್ತಿ ಪಟ್ಟಿಯಿಂದ ಇವರ ಹೆಸರನ್ನು ಶಿಕ್ಷಣ ಇಲಾಖೆ ತಡೆಹಿಡಿದಿದೆ.
ಎರಡು ವರ್ಷಗಳ ಹಿಂದೆ ಬಿಜೆಪಿ ಸರ್ಕಾರ ಇದ್ದಾಗ ನಡೆದಿದ್ದ ಹಿಜಾಬ್ ವಿವಾದ ಸಂದರ್ಭದಲ್ಲಿ ಕುಂದಾಪುರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಮುಸ್ಲಿಂ ವಿದ್ಯಾರ್ಥಿನಿಯರನ್ನು ಕಾಲೇಜು ಗೇಟ್ ಮುಂಭಾಗದಲ್ಲಿ ತಡೆದು ನಿಲ್ಲಿಸಲಾಗಿತ್ತು. ಇದಕ್ಕಾಗಿ ಪ್ರಾಂಶುಪಾಲ ರಾಮಕೃಷ್ಣ ಬಿ.ಜಿ ಅವರನ್ನು ಹೊಣೆಯಾಗಿಸಿ, ಉತ್ತಮ ಶಿಕ್ಷಕ ಪ್ರಶಸ್ತಿಯನ್ನು ತಡೆಯಲಾಗಿದೆ.
ಹಿಜಬ್ ಧರಿಸಿದ್ದ ವಿದ್ಯಾರ್ಥಿನಿಯರನ್ನು ಕಾಲೇಜು ಗೇಟ್ ಬಳಿ ನಿಲ್ಲಿಸಿದ್ದ ಫೋಟೊ ವೈರಲ್ ಆಗಿತ್ತು. ಹೀಗಾಗಿ ಸದ್ರಿ ಪ್ರಾಂಶುಪಾಲರಿಗೆ ಪ್ರಶಸ್ತಿ ನೀಡಬಾರದು ಎಂದು ಕೆಲವು ಪ್ರಗತಿಪರರು ಜಾಲತಾಣದಲ್ಲಿ ಒತ್ತಡ ಹಾಕಿದ್ದರು. ರಾಜ್ಯ ಕಾಂಗ್ರೆಸ್ ಸರ್ಕಾರ ಇವರ ಒತ್ತಡಕ್ಕೆ ಮಣಿದು ರಾಮಕೃಷ್ಣ ಹೆಸರು ಕೈಬಿಟ್ಟಿದೆ. ಅಲ್ಲದೆ, ಸೆ.5ರಂದು ಶಿಕ್ಷಕ ದಿನದ ಪ್ರಯುಕ್ತ ಇವರೊಬ್ಬರನ್ನು ಬಿಟ್ಟು ಉಳಿದವರಿಗೆ ಪ್ರಶಸ್ತಿ ಪ್ರದಾನ ಮಾಡಿದೆ. ಇನ್ನೊಬ್ಬ ಮೈಸೂರು ಜಿಲ್ಲೆಯ ಹುಣಸೂರಿನ ಸರ್ಕಾರಿ ಕಾಲೇಜು ಪ್ರಾಂಶುಪಾಲ ಎ.ರಾಮೇ ಗೌಡ ಅವರನ್ನು ಪ್ರಶಸ್ತಿಗೆ ಪರಿಗಣಿಸಲಾಗಿದೆ.
The state government has decided to withhold the Teachers' Day Award originally given to Ramakrishna B J, principal of the Government Pre-University College in Kundapur, due to a controversy. The decision to honour Ramakrishna with the state-level 'Best Principal Award' faced objections from 'progressive' groups.
28-07-25 11:07 am
HK News Desk
Raichur Building Fall: ರಾಯಚೂರಿನಲ್ಲಿ ಚರಂಡಿ ಬ್ಲ...
27-07-25 01:09 pm
ದಾವಣಗೆರೆ ; ಸರ್ಕಾರಿ ಜಾಗದಲ್ಲಿ ಬೆಳೆದ ಬೆಳೆ ತೆರವು...
26-07-25 02:00 pm
IPS Officer Soumya Latha, Dharmasthala SIT:...
25-07-25 04:07 pm
Jeep Chikkamagaluru Accident: ನಿಯಂತ್ರಣ ತಪ್ಪಿ...
25-07-25 01:22 pm
28-07-25 12:28 pm
HK News Desk
Israel, Arabic Language: ಇಸ್ರೇಲ್ ಸೈನಿಕರಿಗೆ ಇಸ...
26-07-25 03:31 pm
ಹದಗೆಟ್ಟ ಸುರತ್ಕಲ್ - ಬಿ.ಸಿ. ರೋಡ್ ಹೆದ್ದಾರಿ ನಿರ...
25-07-25 04:40 pm
Mangalore MP Brijesh Chowta: ಮಂಗಳೂರಿನಲ್ಲಿ ಮೆರ...
24-07-25 09:06 pm
Supreme Court, Actor Darshan, Murder case: ನಟ...
24-07-25 07:54 pm
28-07-25 01:14 pm
Mangalore Correspondent
Sullia, Rain, Mangalore Death: ಸುಳ್ಯದಲ್ಲಿ ಮಳೆ...
28-07-25 10:51 am
Mangalore Kodakkena Restaurant owner Suicide:...
27-07-25 09:58 pm
Mangalore Police, Ravi Pujari: ಮಂಗಳೂರಿನ ಬಿಲ್ಡ...
27-07-25 08:56 pm
Dharmasthala Case, SIT, ADGP Pranav Mohanty:...
27-07-25 08:14 pm
27-07-25 08:39 pm
Mangalore Correspondent
ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಯುವತಿಯನ್ನ ಆಸ್ಪತ್ರೆಗ...
27-07-25 07:13 pm
Bangalore Murder, Two Children Killed, Crime:...
27-07-25 03:26 pm
ಸೈಬರ್ ವಂಚಕರ ಜಾಲಕ್ಕೆ ನಕಲಿ ಬ್ಯಾಂಕ್ ಖಾತೆ ಪೂರೈಕೆ...
26-07-25 09:35 pm
ಮನೆಗೆ ದಿನಸಿ ತರಲು ಹೋದ ಯುವತಿಗೆ ನಡು ರಸ್ತೆಯಲ್ಲೇ ತ...
24-07-25 10:38 pm