ಬ್ರೇಕಿಂಗ್ ನ್ಯೂಸ್
05-09-24 03:51 pm Udupi Correspondent ಕರಾವಳಿ
ಉಡುಪಿ, ಸೆ.5: ಹಿಜಾಬ್ ವಿವಾದ ಕಾರಣಕ್ಕೆ ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ ಕುಂದಾಪುರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಬಿ.ಜಿ ರಾಮಕೃಷ್ಣ ಅವರಿಗೆ ಪ್ರಶಸ್ತಿ ಕೊಡುವುದಕ್ಕೆ ಪ್ರಗತಿಪರರಿಂದ ಆಕ್ಷೇಪ ವ್ಯಕ್ತವಾಗಿದ್ದು, ರಾಜ್ಯ ಶಿಕ್ಷಣ ಇಲಾಖೆ ಪ್ರಶಸ್ತಿಯನ್ನು ತಡೆಹಿಡಿದಿದೆ.
ಶಿಕ್ಷಕರ ದಿನಾಚರಣೆ ಹಿನ್ನೆಲೆ ರಾಜ್ಯದಲ್ಲಿ ರಾಜ್ಯ ಶಿಕ್ಷಣ ಇಲಾಖೆ ಇಬ್ಬರು ಪ್ರಾಂಶುಪಾಲರು ಸೇರಿದಂತೆ 20 ಪ್ರಾಥಮಿಕ ಶಾಲೆ ಶಿಕ್ಷಕರು, 11 ಪ್ರೌಢಶಾಲೆ ಶಿಕ್ಷಕರು, ಎಂಟು ಪಿಯು ಉಪನ್ಯಾಸಕರನ್ನು ರಾಜ್ಯಮಟ್ಟದ ಶಿಕ್ಷಕ ಪ್ರಶಸ್ತಿಗೆ ಆಯ್ಕೆ ಮಾಡಿತ್ತು. ಪ್ರಶಸ್ತಿ ಪಟ್ಟಿಯಲ್ಲಿ ಕುಂದಾಪುರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಬಿಜಿ ರಾಮಕೃಷ್ಣ ಹೆಸರೂ ಇತ್ತು. ಆದರೆ ಕೊನೆಯ ಕ್ಷಣದಲ್ಲಿ ಪ್ರಶಸ್ತಿ ಪಟ್ಟಿಯಿಂದ ಇವರ ಹೆಸರನ್ನು ಶಿಕ್ಷಣ ಇಲಾಖೆ ತಡೆಹಿಡಿದಿದೆ.
ಎರಡು ವರ್ಷಗಳ ಹಿಂದೆ ಬಿಜೆಪಿ ಸರ್ಕಾರ ಇದ್ದಾಗ ನಡೆದಿದ್ದ ಹಿಜಾಬ್ ವಿವಾದ ಸಂದರ್ಭದಲ್ಲಿ ಕುಂದಾಪುರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಮುಸ್ಲಿಂ ವಿದ್ಯಾರ್ಥಿನಿಯರನ್ನು ಕಾಲೇಜು ಗೇಟ್ ಮುಂಭಾಗದಲ್ಲಿ ತಡೆದು ನಿಲ್ಲಿಸಲಾಗಿತ್ತು. ಇದಕ್ಕಾಗಿ ಪ್ರಾಂಶುಪಾಲ ರಾಮಕೃಷ್ಣ ಬಿ.ಜಿ ಅವರನ್ನು ಹೊಣೆಯಾಗಿಸಿ, ಉತ್ತಮ ಶಿಕ್ಷಕ ಪ್ರಶಸ್ತಿಯನ್ನು ತಡೆಯಲಾಗಿದೆ.
ಹಿಜಬ್ ಧರಿಸಿದ್ದ ವಿದ್ಯಾರ್ಥಿನಿಯರನ್ನು ಕಾಲೇಜು ಗೇಟ್ ಬಳಿ ನಿಲ್ಲಿಸಿದ್ದ ಫೋಟೊ ವೈರಲ್ ಆಗಿತ್ತು. ಹೀಗಾಗಿ ಸದ್ರಿ ಪ್ರಾಂಶುಪಾಲರಿಗೆ ಪ್ರಶಸ್ತಿ ನೀಡಬಾರದು ಎಂದು ಕೆಲವು ಪ್ರಗತಿಪರರು ಜಾಲತಾಣದಲ್ಲಿ ಒತ್ತಡ ಹಾಕಿದ್ದರು. ರಾಜ್ಯ ಕಾಂಗ್ರೆಸ್ ಸರ್ಕಾರ ಇವರ ಒತ್ತಡಕ್ಕೆ ಮಣಿದು ರಾಮಕೃಷ್ಣ ಹೆಸರು ಕೈಬಿಟ್ಟಿದೆ. ಅಲ್ಲದೆ, ಸೆ.5ರಂದು ಶಿಕ್ಷಕ ದಿನದ ಪ್ರಯುಕ್ತ ಇವರೊಬ್ಬರನ್ನು ಬಿಟ್ಟು ಉಳಿದವರಿಗೆ ಪ್ರಶಸ್ತಿ ಪ್ರದಾನ ಮಾಡಿದೆ. ಇನ್ನೊಬ್ಬ ಮೈಸೂರು ಜಿಲ್ಲೆಯ ಹುಣಸೂರಿನ ಸರ್ಕಾರಿ ಕಾಲೇಜು ಪ್ರಾಂಶುಪಾಲ ಎ.ರಾಮೇ ಗೌಡ ಅವರನ್ನು ಪ್ರಶಸ್ತಿಗೆ ಪರಿಗಣಿಸಲಾಗಿದೆ.
The state government has decided to withhold the Teachers' Day Award originally given to Ramakrishna B J, principal of the Government Pre-University College in Kundapur, due to a controversy. The decision to honour Ramakrishna with the state-level 'Best Principal Award' faced objections from 'progressive' groups.
09-02-26 07:20 pm
Bangalore Correspondent
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರ...
09-02-26 12:29 pm
Gadag, No phone, Tv: ಎಸ್ಸೆಸ್ಸೆಲ್ಸಿ ಮಕ್ಕಳ ಭವಿಷ...
07-02-26 05:09 pm
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
10-02-26 07:31 pm
HK News Desk
ಅಡೂರು ಮೂಲದ ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು...
10-02-26 02:15 pm
ರಾಮ ಮಂದಿರ ಸ್ಫೋಟಕ್ಕೆ ಸಂಚು ರೂಪಿಸಿದ್ದ ಕೈದಿ ಫರೀದಾ...
10-02-26 11:44 am
ಕೆನಡಾದಲ್ಲಿ ಗುಂಡಿಟ್ಟು ಕನ್ನಡಿಗ ಸಾಫ್ಟ್ವೇರ್ ಇಂಜಿ...
09-02-26 10:25 pm
ಜಾಗತಿಕ ಷೇರು ಮಾರುಕಟ್ಟೆಯಲ್ಲಿ 'ಆಂಥ್ರೋಪಿಕ್' AI ಬಿ...
09-02-26 12:27 pm
10-02-26 11:03 pm
Mangalore Correspondent
Mangaore, Marriage Fraud: ಹಲವಾರು ಹೆಂಡಿರ ಮುದ್ದ...
10-02-26 08:27 pm
Oman Accident: ಒಮಾನ್ ನಲ್ಲಿ ಭೀಕರ ಅಪಘಾತ ; ಕಾಪು...
09-02-26 11:20 pm
Mangalore Accident, Bus: ನಂತೂರಿನಲ್ಲಿ ಅಪಘಾತಕ್ಕ...
09-02-26 08:02 pm
ಕೆಪಿಟಿ ಜಂಕ್ಷನ್ ಬಳಿಯ ಹೆದ್ದಾರಿ ಡಿವೈಡರ್ ಮುಚ್ಚಿದ್...
09-02-26 02:50 pm
10-02-26 09:05 pm
Bangalore Correspondent
Peter Caddy, Arrest: ಉದ್ಯಮಿಗಳಿಗೆ ಸಾಲ ಕೊಡಿಸುವು...
10-02-26 04:38 pm
Belthangady Fake Kidnap: ಕಾಲೇಜು ವಿದ್ಯಾರ್ಥಿನಿ...
10-02-26 10:59 am
ಜಾಲತಾಣದಲ್ಲೇ ಪಡ್ಡೆ ಹುಡುಗರಿಗೆ ಬಲೆ, ಖತರ್ನಾಕ್ ಪ್...
09-02-26 02:04 pm
ಬೆಳ್ತಂಗಡಿ ; ಕಾಲೇಜು ತೆರಳುತ್ತಿದ್ದ ಅಪ್ರಾಪ್ತ ಯುವತ...
09-02-26 11:26 am