ಬ್ರೇಕಿಂಗ್ ನ್ಯೂಸ್
05-09-24 05:22 pm Mangalore Correspondent ಕರಾವಳಿ
ಮಂಗಳೂರು, ಸೆ.5: ಮಂಗಳೂರು - ಉಡುಪಿ ರಾಷ್ಟ್ರಿಯ ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದ ಬಿಎಂಡಬ್ಲ್ಯು ಐಷಾರಾಮಿ ಕಾರು ಹಠಾತ್ತನೇ ಬೆಂಕಿ ಹತ್ತಿಕೊಂಡು ಸುಟ್ಟು ಬೂದಿಯಾದ ಘಟನೆ ಸುರತ್ಕಲ್ ಎನ್ ಐಟಿಕೆ ಹಳೆ ಟೋಲ್ ಗೇಟ್ ಬಳಿ ಗುರುವಾರ ಬೆಳಗ್ಗೆ ನಡೆದಿದೆ.
ಕುಂದಾಪುರದ ದಯಾನಂದ ಶೆಟ್ಟಿ ಎಂಬವರ ಕಾರು ಇದಾಗಿದ್ದು ಅವರೇ ಉಡುಪಿಯಿಂದ ಮಂಗಳೂರಿಗೆ ಚಲಾಯಿಸುತ್ತ ಬರುತ್ತಿದ್ದಾಗ ಇಂಜಿನ್ ಭಾಗದಲ್ಲಿ ಬೆಂಕಿ ಕಂಡುಬಂದಿದೆ. ಹೀಗಾಗಿ ಕಾರನ್ನು ಎನ್ಐಟಿಕೆ ಎದುರಿನ ರಸ್ತೆಯಲ್ಲೇ ನಿಲ್ಲಿಸಿ ಹೊರಕ್ಕೆ ಇಳಿದಿದ್ದಾರೆ. ಬೆಳಗ್ಗೆ 9 ಗಂಟೆ ಸುಮಾರಿಗೆ ಉಡುಪಿಯಿಂದ ವೇಗವಾಗಿ ಮಂಗಳೂರು ಕಡೆಗೆ ಬರುತ್ತಿದ್ದಾಗ ಘಟನೆ ನಡೆದಿದೆ. ನೋಡ ನೋಡುತ್ತಲೇ ಬೆಂಕಿಯ ಜ್ವಾಲೆ ಮೇಲೇರಿದ್ದು ಪ್ಲಾಸ್ಟಿಕ್ ಆಟಿಕೆಯಂತೆ ಕಾರು ಉರಿದಿದ್ದು ಸಂಪೂರ್ಣ ಸುಟ್ಟು ಹೋಗಿದೆ. ಸ್ಥಳದಲ್ಲಿ ವಾಹನ ಸಂಚಾರ ಬಂದ್ ಮಾಡಿ, ಜನರನ್ನು ಕೂಡ ದೂರ ನಿಲ್ಲಿಸಲಾಯಿತು. ಕಾರು ಸ್ಫೋಟಗೊಂಡ ರೀತಿ ಬೆಂಕಿ ಹತ್ತಿಕೊಂಡಿದ್ದು ಜನರು ನೋಡುತ್ತಲೇ ಮರುಗಿದ್ದಾರೆ. ಐಷಾರಾಮಿ ಕಾರು ಬೆಂಕಿಯಲ್ಲಿ ಲೀನವಾಗಿದ್ದನ್ನು ದಿಗ್ಭ್ರಾಂತಿಯಿಂದ ಕಾರಿನ ಮಾಲೀಕ ರಸ್ತೆಯಲ್ಲಿ ನಿಂತು ನೋಡುವಂತಾಗಿತ್ತು.
ಮಂಗಳೂರು ಉತ್ತರ ಸಂಚಾರ ಪೊಲೀಸರು, ಸುರತ್ಕಲ್ ಠಾಣೆ ಪೊಲಿಸರು, ಅಗ್ನಿಶಾಮಕ ದಳ ಸ್ಥಳಕ್ಕೆ ಬಂದು ಬೆಂಕಿ ನಂದಿಸಿದ್ದಾರೆ. ಡೀಸೆಲ್ ಬಳಸುತ್ತಿದ್ದ ಬಿಎಂಡಬ್ಲ್ಯು ಕಾರು ಇದಾಗಿದ್ದು ನಡುರಸ್ತೆಯಲ್ಲಿ ಈ ರೀತಿ ಉರಿದು ಹೋಗಿದ್ದು ಭಾರೀ ಅಚ್ಚರಿಗೆ ಕಾರಣವಾಗಿದೆ. ಕಾರಿಗೆ ಬೆಂಕಿ ಹತ್ತಿಕೊಳ್ಳಲು ಕಾರಣವಾದ ಅಂಶ ಏನೆಂದು ಬಿಎಂಡಬ್ಲ್ಯು ಕಂಪನಿಯವರೇ ಹೇಳಬೇಕು. ಮೊದಲಿಗೆ, ಇಲೆಕ್ಟ್ರಿಕ್ ಕಾರು ಎಂದು ಹೇಳಲಾಗಿತ್ತು. ಸುರತ್ಕಲ್ ಠಾಣೆಯಲ್ಲಿ ಕೇಸು ದಾಖಲಾಗಿದ್ದು ಪೊಲೀಸರು ಡೀಸೆಲ್ ಕಾರು ಎಂದು ಖಚಿತಪಡಿಸಿದ್ದಾರೆ.
#Mangalore #BMW car catches #fire near #surathkal toll, video goes viral. The car was travelling towards #Udupi and belongs to Dayanand Shetty from Kundapura. Suddenly the car caught fire near #NITKtoll gate #bmwcarfire #mangalorenews pic.twitter.com/ArDrx4m92r
— Headline Karnataka (@hknewsonline) September 5, 2024
Mangalore BMW car catches fire near surathkal toll, videos goes viral. The car was travelling towards Udupi and belongs to Dayanand Shetty from Kundapura. Suddenly the car caught fire near NITK toll gate.
20-09-25 02:59 pm
HK News Desk
Cm Siddaramaiah, Caste Survey: ಜಾತಿ ಸಮೀಕ್ಷೆ ಮ...
19-09-25 10:04 pm
Caste survey: ಜಾತಿ ಸಮೀಕ್ಷೆಗೆ ಸರ್ಕಾರದ ಸಚಿವರಿಂದ...
19-09-25 02:16 pm
ಮೋಸದಿಂದಲೇ ಕಣ್ರೀ ಬಿಜೆಪಿ ಚುನಾವಣೆ ಗೆದ್ದಿದೆ! ರಾಹು...
19-09-25 09:45 am
ಬೆಂಗಳೂರು ಗಬ್ಬೆದ್ದು ನಾರುತ್ತಿದೆ, ರಾಜಧಾನಿ ಈಗ ಗುಂ...
19-09-25 09:42 am
20-09-25 11:42 am
HK News Desk
ಸಿಂಗಾಪುರದಲ್ಲಿ ಸ್ಕ್ಯೂಬಾ ಡೈವಿಂಗ್ ಅವಘಡ: ಬಾಲಿವುಡ್...
19-09-25 05:45 pm
Yasin Malik: ಲಷ್ಕರ್ ಮುಖ್ಯಸ್ಥ ಹಫೀಜ್ ಸಯೀದ್ ಭೇ...
19-09-25 02:24 pm
ಕೇಂದ್ರೀಕೃತ ಸಾಫ್ಟ್ವೇರ್ ಬಳಸಿ ಬೂತ್ಗಳಿಂದಲೇ ಮತದಾ...
18-09-25 08:14 pm
ಎರಡು ಬಾರಿ ಕಚ್ಚಿದ್ರೆ ಬೀದಿ ನಾಯಿಗೆ ಜೀವಾವಧಿ ಶಿಕ್ಷ...
16-09-25 10:11 pm
20-09-25 02:31 pm
Mangalore Correspondent
ಅಪಸ್ಮಾರ ಕಾಯಿಲೆ, ಕುಂಪಲದ ಹದಿಹರೆಯದ ಬ್ಯೂಟೀಷಿಯನ್ ಯ...
19-09-25 10:46 pm
ಕಟೀಲು ದೇಗುಲದಲ್ಲಿ ಸೇವಾ ದರ ಏಕಾಏಕಿ ದುಪ್ಪಟ್ಟು ; ಬ...
19-09-25 10:21 pm
ಧರ್ಮಸ್ಥಳ ಕೇಸ್ ; ಅನೇಕ ಶವಗಳನ್ನು ಹೂತಿದ್ದೆವು ಎಂದಿ...
19-09-25 09:59 pm
Kadri, Mangalore, Smart City: ‘ಸ್ಮಾರ್ಟ್ ಸಿಟಿ’...
19-09-25 07:53 pm
20-09-25 05:11 pm
Mangalore Correspondent
Kasaragod Sexual Abuse: ಅಪ್ರಾಪ್ತ ಬಾಲಕನಿಗೆ ಸಲಿ...
18-09-25 11:44 am
Vijayapura Bank Robbery: SBI ಬ್ಯಾಂಕ್ ದರೋಡೆ ;...
17-09-25 09:44 pm
Mangalore Crime, Cattle Theft: ಅಡ್ಯಾರ್ ನಲ್ಲಿ...
17-09-25 06:04 pm
Udupi, Job Fraud, Scam: ವಿದೇಶದಲ್ಲಿ ಕೆಲಸ ಕೊಡಿಸ...
17-09-25 02:46 pm