ಬ್ರೇಕಿಂಗ್ ನ್ಯೂಸ್
05-09-24 05:22 pm Mangalore Correspondent ಕರಾವಳಿ
ಮಂಗಳೂರು, ಸೆ.5: ಮಂಗಳೂರು - ಉಡುಪಿ ರಾಷ್ಟ್ರಿಯ ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದ ಬಿಎಂಡಬ್ಲ್ಯು ಐಷಾರಾಮಿ ಕಾರು ಹಠಾತ್ತನೇ ಬೆಂಕಿ ಹತ್ತಿಕೊಂಡು ಸುಟ್ಟು ಬೂದಿಯಾದ ಘಟನೆ ಸುರತ್ಕಲ್ ಎನ್ ಐಟಿಕೆ ಹಳೆ ಟೋಲ್ ಗೇಟ್ ಬಳಿ ಗುರುವಾರ ಬೆಳಗ್ಗೆ ನಡೆದಿದೆ.
ಕುಂದಾಪುರದ ದಯಾನಂದ ಶೆಟ್ಟಿ ಎಂಬವರ ಕಾರು ಇದಾಗಿದ್ದು ಅವರೇ ಉಡುಪಿಯಿಂದ ಮಂಗಳೂರಿಗೆ ಚಲಾಯಿಸುತ್ತ ಬರುತ್ತಿದ್ದಾಗ ಇಂಜಿನ್ ಭಾಗದಲ್ಲಿ ಬೆಂಕಿ ಕಂಡುಬಂದಿದೆ. ಹೀಗಾಗಿ ಕಾರನ್ನು ಎನ್ಐಟಿಕೆ ಎದುರಿನ ರಸ್ತೆಯಲ್ಲೇ ನಿಲ್ಲಿಸಿ ಹೊರಕ್ಕೆ ಇಳಿದಿದ್ದಾರೆ. ಬೆಳಗ್ಗೆ 9 ಗಂಟೆ ಸುಮಾರಿಗೆ ಉಡುಪಿಯಿಂದ ವೇಗವಾಗಿ ಮಂಗಳೂರು ಕಡೆಗೆ ಬರುತ್ತಿದ್ದಾಗ ಘಟನೆ ನಡೆದಿದೆ. ನೋಡ ನೋಡುತ್ತಲೇ ಬೆಂಕಿಯ ಜ್ವಾಲೆ ಮೇಲೇರಿದ್ದು ಪ್ಲಾಸ್ಟಿಕ್ ಆಟಿಕೆಯಂತೆ ಕಾರು ಉರಿದಿದ್ದು ಸಂಪೂರ್ಣ ಸುಟ್ಟು ಹೋಗಿದೆ. ಸ್ಥಳದಲ್ಲಿ ವಾಹನ ಸಂಚಾರ ಬಂದ್ ಮಾಡಿ, ಜನರನ್ನು ಕೂಡ ದೂರ ನಿಲ್ಲಿಸಲಾಯಿತು. ಕಾರು ಸ್ಫೋಟಗೊಂಡ ರೀತಿ ಬೆಂಕಿ ಹತ್ತಿಕೊಂಡಿದ್ದು ಜನರು ನೋಡುತ್ತಲೇ ಮರುಗಿದ್ದಾರೆ. ಐಷಾರಾಮಿ ಕಾರು ಬೆಂಕಿಯಲ್ಲಿ ಲೀನವಾಗಿದ್ದನ್ನು ದಿಗ್ಭ್ರಾಂತಿಯಿಂದ ಕಾರಿನ ಮಾಲೀಕ ರಸ್ತೆಯಲ್ಲಿ ನಿಂತು ನೋಡುವಂತಾಗಿತ್ತು.
ಮಂಗಳೂರು ಉತ್ತರ ಸಂಚಾರ ಪೊಲೀಸರು, ಸುರತ್ಕಲ್ ಠಾಣೆ ಪೊಲಿಸರು, ಅಗ್ನಿಶಾಮಕ ದಳ ಸ್ಥಳಕ್ಕೆ ಬಂದು ಬೆಂಕಿ ನಂದಿಸಿದ್ದಾರೆ. ಡೀಸೆಲ್ ಬಳಸುತ್ತಿದ್ದ ಬಿಎಂಡಬ್ಲ್ಯು ಕಾರು ಇದಾಗಿದ್ದು ನಡುರಸ್ತೆಯಲ್ಲಿ ಈ ರೀತಿ ಉರಿದು ಹೋಗಿದ್ದು ಭಾರೀ ಅಚ್ಚರಿಗೆ ಕಾರಣವಾಗಿದೆ. ಕಾರಿಗೆ ಬೆಂಕಿ ಹತ್ತಿಕೊಳ್ಳಲು ಕಾರಣವಾದ ಅಂಶ ಏನೆಂದು ಬಿಎಂಡಬ್ಲ್ಯು ಕಂಪನಿಯವರೇ ಹೇಳಬೇಕು. ಮೊದಲಿಗೆ, ಇಲೆಕ್ಟ್ರಿಕ್ ಕಾರು ಎಂದು ಹೇಳಲಾಗಿತ್ತು. ಸುರತ್ಕಲ್ ಠಾಣೆಯಲ್ಲಿ ಕೇಸು ದಾಖಲಾಗಿದ್ದು ಪೊಲೀಸರು ಡೀಸೆಲ್ ಕಾರು ಎಂದು ಖಚಿತಪಡಿಸಿದ್ದಾರೆ.
#Mangalore #BMW car catches #fire near #surathkal toll, video goes viral. The car was travelling towards #Udupi and belongs to Dayanand Shetty from Kundapura. Suddenly the car caught fire near #NITKtoll gate #bmwcarfire #mangalorenews pic.twitter.com/ArDrx4m92r
— Headline Karnataka (@hknewsonline) September 5, 2024
Mangalore BMW car catches fire near surathkal toll, videos goes viral. The car was travelling towards Udupi and belongs to Dayanand Shetty from Kundapura. Suddenly the car caught fire near NITK toll gate.
28-07-25 11:07 am
HK News Desk
Raichur Building Fall: ರಾಯಚೂರಿನಲ್ಲಿ ಚರಂಡಿ ಬ್ಲ...
27-07-25 01:09 pm
ದಾವಣಗೆರೆ ; ಸರ್ಕಾರಿ ಜಾಗದಲ್ಲಿ ಬೆಳೆದ ಬೆಳೆ ತೆರವು...
26-07-25 02:00 pm
IPS Officer Soumya Latha, Dharmasthala SIT:...
25-07-25 04:07 pm
Jeep Chikkamagaluru Accident: ನಿಯಂತ್ರಣ ತಪ್ಪಿ...
25-07-25 01:22 pm
28-07-25 12:28 pm
HK News Desk
Israel, Arabic Language: ಇಸ್ರೇಲ್ ಸೈನಿಕರಿಗೆ ಇಸ...
26-07-25 03:31 pm
ಹದಗೆಟ್ಟ ಸುರತ್ಕಲ್ - ಬಿ.ಸಿ. ರೋಡ್ ಹೆದ್ದಾರಿ ನಿರ...
25-07-25 04:40 pm
Mangalore MP Brijesh Chowta: ಮಂಗಳೂರಿನಲ್ಲಿ ಮೆರ...
24-07-25 09:06 pm
Supreme Court, Actor Darshan, Murder case: ನಟ...
24-07-25 07:54 pm
28-07-25 01:14 pm
Mangalore Correspondent
Sullia, Rain, Mangalore Death: ಸುಳ್ಯದಲ್ಲಿ ಮಳೆ...
28-07-25 10:51 am
Mangalore Kodakkena Restaurant owner Suicide:...
27-07-25 09:58 pm
Mangalore Police, Ravi Pujari: ಮಂಗಳೂರಿನ ಬಿಲ್ಡ...
27-07-25 08:56 pm
Dharmasthala Case, SIT, ADGP Pranav Mohanty:...
27-07-25 08:14 pm
27-07-25 08:39 pm
Mangalore Correspondent
ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಯುವತಿಯನ್ನ ಆಸ್ಪತ್ರೆಗ...
27-07-25 07:13 pm
Bangalore Murder, Two Children Killed, Crime:...
27-07-25 03:26 pm
ಸೈಬರ್ ವಂಚಕರ ಜಾಲಕ್ಕೆ ನಕಲಿ ಬ್ಯಾಂಕ್ ಖಾತೆ ಪೂರೈಕೆ...
26-07-25 09:35 pm
ಮನೆಗೆ ದಿನಸಿ ತರಲು ಹೋದ ಯುವತಿಗೆ ನಡು ರಸ್ತೆಯಲ್ಲೇ ತ...
24-07-25 10:38 pm