ಬ್ರೇಕಿಂಗ್ ನ್ಯೂಸ್
05-09-24 09:52 pm Mangalore Correspondent ಕರಾವಳಿ
ಮಂಗಳೂರು, ಸೆ.5: ಕೋಟ ಶ್ರೀನಿವಾಸ ಪೂಜಾರಿ ಅವರಿಂದ ತೆರವಾದ ವಿಧಾನ ಪರಿಷತ್ ಸ್ಥಾನಕ್ಕೆ ಬಿಜೆಪಿಯಿಂದ ಯಾರು ಅಭ್ಯರ್ಥಿ ಆಗಬೇಕು ಎನ್ನುವ ಬಗ್ಗೆ ಪಕ್ಷದ ಪ್ರಮುಖರಿಂದ ಅಭಿಪ್ರಾಯ ಕೇಳುವುದಕ್ಕಾಗಿ ಮಂಗಳೂರಿನಲ್ಲಿ ಪ್ರಮುಖರ ಸಭೆ ನಡೆದಿದೆ. ರಾಜ್ಯ ಬಿಜೆಪಿಯಿಂದ ವೀಕ್ಷಕರಾಗಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ರಾಜ್ಯ ಕಾರ್ಯದರ್ಶಿಗಳಾದ ಸುನಿಲ್ ಕುಮಾರ್, ಪ್ರೀತಂ ಗೌಡ ಆಗಮಿಸಿದ್ದು, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳ ಬಿಜೆಪಿ ಪ್ರಮುಖರಿಂದ ಅಭಿಪ್ರಾಯ ಸಂಗ್ರಹಿಸಿದ್ದಾರೆ.
ಎರಡು ಜಿಲ್ಲೆಗಳ ವ್ಯಾಪ್ತಿಯ ಎಲ್ಲ ವಿಧಾನಸಭೆ ಕ್ಷೇತ್ರ ಸಮಿತಿ ಅಧ್ಯಕ್ಷರು, ಜಿಲ್ಲಾ ಕಾರ್ಯದರ್ಶಿಗಳು, ಜಿಲ್ಲಾಧ್ಯಕ್ಷರು, ಮಾಜಿ ಶಾಸಕರು, ಹಾಲಿ ಶಾಸಕರು, ಮಾಜಿ ಎಂಎಲ್ಸಿಗಳು ಸೇರಿದಂತೆ 60ಕ್ಕೂ ಹೆಚ್ಚು ಪ್ರತಿನಿಧಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು. ದಕ್ಷಿಣ ಕನ್ನಡ ಜಿಲ್ಲೆಯಿಂದ ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಕಿಯೋನಿಕ್ಸ್ ಮಾಜಿ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ್, ಜಿಲ್ಲಾ ಕಾರ್ಯದರ್ಶಿ ಕಿಶೋರ್ ಬೊಟ್ಯಾಡಿ, ಮಾಜಿ ಸಂಸದ ನಳಿನ್ ಕುಮಾರ್, ಉಡುಪಿಯಿಂದ ಮಾಜಿ ಸಚಿವ ಪ್ರಮೋದ್ ಮಧ್ವರಾಜ್, ಪಕ್ಷದ ದ.ಕ. ಜಿಲ್ಲಾ ಪ್ರಭಾರಿ ಉದಯ ಕುಮಾರ್ ಶೆಟ್ಟಿ, ಶ್ಯಾಮಲಾ ಕುಂದರ್ ಹೆಸರು ಸಭೆಯಲ್ಲಿ ಪ್ರಸ್ತಾಪ ಆಗಿದೆಯೆಂದು ತಿಳಿದುಬಂದಿದೆ.




ಕೋಟ ಶ್ರೀನಿವಾಸ ಪೂಜಾರಿ ಬಿಲ್ಲವ ಸಮುದಾಯದ ವ್ಯಕ್ತಿಯಾಗಿದ್ದರಿಂದ ಅದೇ ಸಮುದಾಯಕ್ಕೆ ಕೊಡಬೇಕು ಎನ್ನುವ ಅಭಿಪ್ರಾಯ ಕೆಲವರಲ್ಲಿದೆ. ಇದೇ ನಿಲುವಿಗೆ ಅಂಟಿಕೊಂಡರೆ, ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಹರಿಕೃಷ್ಣ ಬಂಟ್ವಾಳ್ ಹೆಸರು ಮುನ್ನೆಲೆಗೆ ಬರಲಿದೆ. ಬಂಟ, ಬಿಲ್ಲವ ಬದಿಗಿಟ್ಟು ಸಣ್ಣ ಜಾತಿಗಳತ್ತ ಆದ್ಯತೆ ನೀಡಬೇಕು ಎನ್ನುವ ಪ್ರಸ್ತಾಪವೂ ಕೇಳಿಬಂದಿದೆ. ಮೊಗವೀರ ಸಮುದಾಯದ ಪ್ರಮೋದ್ ಮಧ್ವರಾಜ್, ಕರಾವಳಿಯ ಸಣ್ಣ ಸಮುದಾಯ ಮಡಿವಾಳ ಜನಾಂಗಕ್ಕೆ ಸೇರಿದ ಶ್ಯಾಮಲಾ ಕುಂದರ್ ಒಬ್ಬರ ಹೆಸರು ಅಂತಿಮಗೊಳ್ಳುವ ಸಾಧ್ಯತೆಯಿದೆ. ಶ್ಯಾಮಲಾ ಕುಂದರ್ ದೀರ್ಘ ಕಾಲದಿಂದ ಪಕ್ಷದ ಕಾರ್ಯಕರ್ತೆಯಾಗಿದ್ದು ಕಳೆದ ಬಾರಿ ಕಾಪು ವಿಧಾನಸಭೆ ಕ್ಷೇತ್ರದಲ್ಲಿ ಶಾಸಕ ಸ್ಥಾನದ ಆಕಾಂಕ್ಷಿಯೂ ಆಗಿದ್ದರು. ಮಹಿಳಾ ಕೋಟಾದಡಿ ಟಿಕೆಟ್ ಗಿಟ್ಟಿಸಿದರೂ ಅಚ್ಚರಿಯಿಲ್ಲ ಎನ್ನುವ ಮಾತುಗಳಿವೆ.
ಕಾಂಗ್ರೆಸಿನಲ್ಲಿ ಯಾರು ಅಭ್ಯರ್ಥಿಯಾಗಲಿದ್ದಾರೆ ಎನ್ನುವ ವಿಚಾರವೂ ಬಿಜೆಪಿ ಅಭ್ಯರ್ಥಿ ಆಯ್ಕೆಯಲ್ಲಿ ಗಣನೆಗೆ ಬರಲಿದೆ. ಕಾಂಗ್ರೆಸ್ ಕಡೆಯಿಂದ ಹಣ ಸುರಿಯಬಲ್ಲ ಗಟ್ಟಿ ಕುಳವನ್ನು ಕಣಕ್ಕಿಳಿಸಿದಲ್ಲಿ ಬಿಜೆಪಿಯಿಂದಲೂ ಹಣಬಲ ಇರುವವರಿಗೆ ಆದ್ಯತೆ ಸಿಗಲಿದೆ. ಕಾಂಗ್ರೆಸ್ ಈವರೆಗೂ ಅಭ್ಯರ್ಥಿ ಬಗ್ಗೆ ಚಿಂತೆ ಮಾಡಿದಂತಿಲ್ಲ. ಇನ್ನೆರಡು ತಿಂಗಳಲ್ಲಿ ಸ್ಥಳೀಯಾಡಳಿತ ಕ್ಷೇತ್ರದಿಂದ ವಿಧಾನ ಪರಿಷತ್ತಿನ ಆಯ್ಕೆಗೆ ಚುನಾವಣೆ ನಡೆಯುವ ಸಾಧ್ಯತೆಯಿದೆ. ಸದ್ಯಕ್ಕೆ ಪುರಸಭೆ, ಪಟ್ಟಣ ಪಂಚಾಯತ್, ಕೆಲವು ನಗರಸಭೆಗಳು ಖಾಲಿ ಇರುವುದರಿಂದ ಗ್ರಾಮ ಪಂಚಾಯತ್ ಮತ್ತು ಪಾಲಿಕೆ ಸದಸ್ಯರಿಗೆ ಮತದಾನಕ್ಕೆ ಅವಕಾಶ ಇರುತ್ತದೆ. ಮೇಲ್ನೋಟಕ್ಕೆ ಬಿಜೆಪಿಯಿಂದ ಹೆಚ್ಚಿನ ಸದಸ್ಯರು ಇದ್ದರೂ, ಹಣಬಲದಿಂದ ಮತ ಖರೀದಿಗೆ ಅವಕಾಶ ಇರುವುದರಿಂದ ಅಳೆದು ತೂಗಿ ನೋಡುವ ಲೆಕ್ಕಾಚಾರವೂ ನಡೆದಿದೆ.

ಈ ನಡುವೆ, ಮಾಜಿ ಸಂಸದ ನಳಿನ್ ಕುಮಾರ್ ಮತ್ತೆ ಸಕ್ರಿಯ ರಾಜಕಾರಣಕ್ಕೆ ಬರುವುದಕ್ಕಾಗಿ ಪ್ರಯತ್ನ ಆರಂಭಿಸಿದ್ದಾರೆ. ಇದಕ್ಕಾಗಿ ಕೋಟರಿಂದ ತೆರವಾಗುವ ಜಾಗಕ್ಕೆ ತನಗೇ ಆದ್ಯತೆ ಸಿಗಬೇಕೆಂದು ಲಾಬಿ ನಡೆಸಿದ್ದಾರೆ. ಆದರೆ, ಮತ್ತೊಬ್ಬ ಬಂಟ ಸಮುದಾಯದ ವ್ಯಕ್ತಿಗೆ ಸಿಗುವುದಾದರೆ ಅದು ಉಡುಪಿಯ ಉದಯಕುಮಾರ್ ಶೆಟ್ಟಿ ಪಾಲಾಗುವ ಸಾಧ್ಯತೆಯೇ ಹೆಚ್ಚು. ದೀರ್ಘ ಕಾಲದಿಂದ ಪಕ್ಷದ ನಿಷ್ಠಾವಂತ ವ್ಯಕ್ತಿಯಾಗಿರುವುದು ಮತ್ತು ರಾಜ್ಯ ಬಿಜೆಪಿಯ ವಿಜಯೇಂದ್ರ, ಯಡಿಯೂರಪ್ಪ ಜೊತೆಗೆ ಆರೆಸ್ಸೆಸ್ ಬೆಂಬಲವನ್ನೂ ಹೊಂದಿದ್ದಾರೆ. ನಳಿನ್ ಕುಮಾರ್ ಮೊನ್ನೆಯ ವರೆಗೂ ರಾಜ್ಯಾಧ್ಯಕ್ಷರಾಗಿದ್ದರು, ರಾಜ್ಯ ಬಿಜೆಪಿಗೆ ಅವರ ನಾಯಕತ್ವ ಅಗತ್ಯ ಇದೆ ಎನ್ನುವ ಛಾಯೆಯನ್ನು ಅವರ ಪರವಾದ ಬಣ ಕೇಂದ್ರ ಬಿಜೆಪಿ ಮುಂದಿಡಲು ಯಶಸ್ವಿಯಾದರೆ, ಸ್ಥಾನ ಗಿಟ್ಟಿಸಿಕೊಂಡರೂ ಅಚ್ಚರಿಯಿಲ್ಲ.
Who will replace vacant place of Kota Srinivas Poojary, names of satish Kumpala and Nalin kateel in race.
03-04-26 04:14 pm
HK News Staffer
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿದ ಕುಮಾರಸ್ವಾಮಿ- ಎಡಿಜ...
02-04-26 09:31 pm
ನಾನು ಮುಖ್ಯಮಂತ್ರಿಯಾಗಿ ಮುಸ್ಲಿಂ ಅಲ್ಪಸಂಖ್ಯಾತ ಮೀಸಲ...
02-04-26 08:07 pm
ತಮಿಳುನಾಡು ಚುನಾವಣೆಗೆ 44 ಮೀಸಲು ಕ್ಷೇತ್ರದಿಂದ ಕ್ರಿ...
02-04-26 08:03 pm
03-04-26 07:52 pm
HK News Staffer
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
ಇರಾನ್ ಕದನವಿರಾಮ ಕೇಳುತ್ತಿದೆ, ಒಪ್ಪದಿದ್ದರೆ ಶಿಲಾಯು...
01-04-26 11:03 pm
ಇರಾನ್ ಮೇಲೆ ಅಣ್ವಸ್ತ್ರ ದಾಳಿಗೆ ಅಮೆರಿಕ ಸಿದ್ಧತೆ; ವ...
01-04-26 12:46 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
03-04-26 11:00 pm
HK News Staffer
ಜಿಮ್ ಸೆಂಟರ್ ನೆಪದಲ್ಲಿ ಲವ್ ಜಿಹಾದ್! ಜಿಮ್ ಟ್ರೈ...
03-04-26 10:53 pm
ಮೆಲ್ಕಾರ್ ರಸ್ತೆ ದಾಟುತ್ತಿದ್ದ ವೇಳೆ ಕಾರು ಡಿಕ್ಕಿ;...
01-04-26 02:54 pm
ಕುಂಜತ್ ಬೈಲಿನಲ್ಲಿ ಫಲ್ಗುಣಿ ನದಿಗೆ ಬಿದ್ದು ಇಬ್ಬರು...
01-04-26 02:16 pm
ಜೈಲಿನಲ್ಲಿದ್ದ ಪತಿಯ ನೋಡಲು ಖಾಸಗಿ ಅಂಗದಲ್ಲಿ ಡ್ರಗ್ಸ...
31-03-26 11:11 am