ಬ್ರೇಕಿಂಗ್ ನ್ಯೂಸ್
06-09-24 11:26 am Mangalore Correspondent ಕರಾವಳಿ
ಮಂಗಳೂರು, ಸೆ.6: ಶಾಸಕ ವೇದವ್ಯಾಸ ಕಾಮತ್ ಸಂಕುಚಿತ ಭಾವನೆಯಿಂದ ಹೊರಗೆ ಬರಬೇಕು. ಕಾಂಗ್ರೆಸ್ ಯಾವತ್ತೂ ಗಣೇಶನ ಹಬ್ಬಕ್ಕೆ ಅಡ್ಡಿ ತಂದಿಲ್ಲ. ಪೊಲೀಸರು ಅನುಮತಿ ನೀಡುವಾಗ ಕಾರ್ಯಕ್ರಮದಲ್ಲಿ ಯಾರೆಲ್ಲ ಇರುತ್ತಾರೆ, ಯಾರು ಆಯೋಜಕರು ಇತ್ಯಾದಿ ಕೇಳುವುದು ಸಹಜ. ಇಂದಿನ ದಿನಮಾನದಲ್ಲಿ ಭದ್ರತಾ ಕಾರಣಕ್ಕೆ ಇದನ್ನು ಕೇಳುತ್ತಾರೆ. ಹಾಗೆಂದು, ಗಣೇಶನ ಹಬ್ಬಕ್ಕೂ ಕಾಂಗ್ರೆಸ್ ಸರಕಾರದ ವಿಘ್ನ ಎಂದು ಹುಯಿಲೆಬ್ಬಿಸುವುದು ಎಷ್ಟು ಸರಿ ಎಂದು ಲೋಕಸಭೆ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪ್ರಶ್ನೆ ಮಾಡಿದ್ದಾರೆ.
ಕಾಂಗ್ರೆಸ್ ಭವನದಲ್ಲಿ ಸುದ್ದಿಗೋಷ್ಟಿ ನಡೆಸಿದ ಅವರು, ವೇದವ್ಯಾಸ ಕಾಮತ್ ಗಣೇಶೋತ್ಸವಕ್ಕೆ ಕಾಂಗ್ರೆಸ್ ಸರಕಾರದ ಅಡ್ಡಿ ಎಂಬ ಟೀಕೆಗೆ ತಿರುಗೇಟು ನೀಡಿದ್ದಾರೆ. ನಾವು ಕೂಡ ಹಿಂದುಗಳು, ಅದ್ದೂರಿಯಲ್ಲ, ಭಕ್ತಿಯಿಂದ ಗಣೇಶನ ಹಬ್ಬ ಮಾಡುತ್ತೇವೆ. ಶಿಸ್ತಿನಿಂದ ಮಾಡುತ್ತೇವೆ ಎಂದರು. ವೇದವ್ಯಾಸ ಕಾಮತ್ ಬಾಯಿ ಚಪಲಕ್ಕಾಗಿ ಉಸ್ತುವಾರಿ ಸಚಿವರನ್ನು ಟೀಕೆ ಮಾಡುತ್ತಿದ್ದಾರೆ. ನೀವು ಮಂಗಳೂರಿನ ಟ್ರಾಫಿಕ್ ಕಡಿಮೆ ಮಾಡಲು ಯಾವ ಒತ್ತು ನೀಡಿದ್ದೀರಿ. ವಿಧಾನಸಭೆಯಲ್ಲಿ ಎಷ್ಟು ಪ್ರಶ್ನೆ ಮಾಡಿದ್ದೀರಿ. ಸ್ಮಾರ್ಟ್ ಸಿಟಿ ಜೊತೆಗೆ ಎಷ್ಟು ಮೀಟಿಂಗ್ ಮಾಡಿದ್ದಾರೆ ಎಂದು ಪ್ರಶ್ನಿಸಿದರು.
ಜನಾರ್ದನ ಪೂಜಾರಿಯವರ ವಿರೋಧ ಇದ್ದರೂ ಬಿಜೆಪಿ ಆಡಳಿತವೇ ಮಂಗಳೂರಿನಲ್ಲಿ ಸ್ವಯಂಘೋಷಿತ ಆಸ್ತಿ ತೆರಿಗೆ ಜಾರಿಗೆ ತಂದಿತ್ತು. ಆನಂತರ, ಪ್ರತಿ ಐದು ವರ್ಷಕ್ಕೊಮ್ಮೆ ತೆರಿಗೆ ಹೆಚ್ಚಿಸಿ ಹೊರೆ ಹೊರಿಸಿದೆ. ನೀರಿನ ದರವನ್ನು ಕಾಂಗ್ರೆಸ್ ಸರಕಾರ ಇದ್ದಾಗಿನ 24 ಸಾವಿರ ಲೀಟರಿಗೆ 65 ರೂ. ಇದ್ದುದನ್ನು ಈಗ 135 ರೂ.ಗೆ ಏರಿಸಿದ್ದಾರೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಪೆಟ್ರೋಲ್ ಗೆ 74 ಡಾಲರ್ ಆಗಿದ್ದರೂ, ದೇಶದಲ್ಲಿ ದರ ಇಳಿಸದೆ ಜನರಿಗೆ ಅನ್ಯಾಯ ಮಾಡುತ್ತಿದ್ದಾರೆ ಎಂದು ಟೀಕಿಸಿದರು. ಮಂಗಳೂರು ವಿವಿಯ ಆರ್ಥಿಕ ನಷ್ಟದ ಬಗ್ಗೆ ಕೇಳಿದ ಪ್ರಶ್ನೆಗೆ, ಮಂಗಳೂರು ವಿವಿಯನ್ನು ಮತ್ತೆ ಮೇಲೆತ್ತಬೇಕು, ಮರಳಿ ಗತ ವೈಭವಕ್ಕೆ ತರಬೇಕು ಎನ್ನುವ ಕಾಳಜಿ ಇದೆ. ಪ್ರಾಮಾಣಿಕ ಪ್ರಯತ್ನ ಮಾಡುತ್ತೇವೆ, ಕಳೆದ ಬಾರಿ ಆಗಿರುವ ಲೋಪಗಳಿಂದಾಗಿ ಆರ್ಥಿಕ ದುಸ್ಥಿತಿ ಬಂದಿದೆ. ಅದನ್ನು ಸರಿಪಡಿಸಲಾಗುವುದು ಎಂದಿದ್ದಾರೆ. ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್, ಶಶಿಧರ್ ಹೆಗ್ಡೆ ಇದ್ದರು.
MLA Veda Vyasa Kamat should come out of narrow feeling. Congress has never obstructed the festival of Ganesha. When the police give permission, it is natural to ask who will be in the event, who is the organizer etc.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
14-07-26 01:37 pm
HK News Staffer
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
14-07-26 02:43 pm
HK News Staffer
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm