Mangalore Yeyyadi accident, two killed: ಯೆಯ್ಯಾಡಿ ಬಳಿ ಬೈಕ್ ಅಪಘಾತ ;  ಇಬ್ಬರು ಯುವಕರು ಸ್ಥಳದಲ್ಲೇ ಸಾವು 

06-09-24 11:57 am       Mangalore Correspondent   ಕರಾವಳಿ

ನಗರದ ಯೆಯ್ಯಾಡಿ ಬಳಿಯ ಹರಿಪದವು ಕ್ರಾಸ್ ನಲ್ಲಿ ಬೈಕ್ ಸ್ಕಿಡ್ ಆಗಿ ಬಿದ್ದು ನಿನ್ನೆ ತಡರಾತ್ರಿ ನಡೆದ ಭೀಕರ ಅಪಘಾತದಲ್ಲಿ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ. 

ಮಂಗಳೂರು, ಸೆ.6: ನಗರದ ಯೆಯ್ಯಾಡಿ ಬಳಿಯ ಹರಿಪದವು ಕ್ರಾಸ್ ನಲ್ಲಿ ಬೈಕ್ ಸ್ಕಿಡ್ ಆಗಿ ಬಿದ್ದು ನಿನ್ನೆ ತಡರಾತ್ರಿ ನಡೆದ ಭೀಕರ ಅಪಘಾತದಲ್ಲಿ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ. 

ಮೃತರನ್ನು ರಾಮಕುಂಜ ನಿವಾಸಿ ಚೇತನ್ (21) ಮತ್ತು ಕೋಡಿಕಲ್ ನಿವಾಸಿ ಕಾಶಿನಾಥ್ (17) ಎಂದು ಗುರುತಿಸಲಾಗಿದೆ. ಇವರು ಶಕ್ತಿನಗರದ ಬಾರ್‌ ಒಂದರಲ್ಲಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದಾಗ ನಸುಕಿನ ಜಾವ 2:30ರ ಸುಮಾರಿಗೆ ಘಟನೆ ನಡೆದಿದೆ.

ಹರಿಪದವು ಕ್ರಾಸ್ ನಲ್ಲಿ ಲಾರಿಗೆ ಡಿಕ್ಕಿಯಾಗುವುದನ್ನು ತಪ್ಪಿಸಲು ಬದಿಗೆ ಸರಿಸಿದ್ದು ಬೈಕ್ ಸ್ಕಿಡ್ ಆಗಿ ಪಲ್ಟಿಯಾಗಿದೆ‌. ಹೆಲ್ಮೆಟ್ ಹಾಕಿರದ ಕಾರಣ ತಲೆಯ ಭಾಗಕ್ಕೆ ತೀವ್ರ ಏಟು ಬಿದ್ದಿತ್ತು. ಗಾಯಗೊಂಡ ಇಬ್ಬರನ್ನೂ ಕೂಡಲೇ ಖಾಸಗಿ ಆಸ್ಪತ್ರೆಗೆ ಸಾಗಿಸಿದರೂ ಅಷ್ಟರಲ್ಲಿ ಮೃತಪಟ್ಟಿದ್ದಾರೆಂದು ಪೊಲೀಸರು ತಿಳಿಸಿದ್ದಾರೆ. ಯುವಕರು ಅತಿ ವೇಗದಿಂದ ಬೈಕ್ ಚಲಾಯಿಸಿದ್ದೇ ಘಟನೆಗೆ ಕಾರಣ ಎನ್ನಲಾಗುತ್ತಿದೆ. ಮಂಗಳೂರು ದಕ್ಷಿಣ ಸಂಚಾರಿ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

In a tragic accident that occurred after midnight on Thursday, two youths lost their lives after their bike skidded near Yeyyadi. The incident took place around 2:30 AM when they were returning home after finishing their shift at Chalukya Bar in Shakthinagar.