ಬ್ರೇಕಿಂಗ್ ನ್ಯೂಸ್
06-09-24 01:06 pm Mangalore Correspondent ಕರಾವಳಿ
ಮಂಗಳೂರು, ಸೆ.6: ಬಿಜೆಪಿ ಸದಸ್ಯತ್ವ ಪಡೆದಿದ್ದಾರೆ ಎನ್ನಲಾದ ತುಳು ರಂಗಭೂಮಿ ಮತ್ತು ಹಿರಿಯ ಚಿತ್ರನಟ ದೇವದಾಸ್ ಕಾಪಿಕಾಡ್ ಅವರಿಗೆ ದುಬೈನಲ್ಲಿ ಬಾಯ್ಕಾಟ್ ಬಿಸಿ ತಟ್ಟಿದೆ. ಮಂಗಳೂರಿನಲ್ಲಿ ಎರಡು ದಿನಗಳ ಹಿಂದೆ ಕಾಪಿಕಾಡ್ ಮನೆಗೆ ಬಂದಿದ್ದ ಮಾಜಿ ಸಚಿವ ಡಿವಿ ಸದಾನಂದ ಗೌಡ ಮತ್ತು ಬಿಜೆಪಿ ಪ್ರಮುಖರು ದೇವದಾಸ್ ಕಾಪಿಕಾಡ್ ಬಿಜೆಪಿ ಸದಸ್ಯತ್ವ ಪಡೆದಿದ್ದಾರೆ ಎಂದು ಜಾಲತಾಣದಲ್ಲಿ ಹಾಕ್ಕೊಂಡಿದ್ದು ಈಗ ಅವರಿಗೆ ಮುಳುವಾಗಿದೆ.
ಸೆ.13 ಮತ್ತು 14ರಂದು ಸೌದಿ ಅರೇಬಿಯಾದಲ್ಲಿ ಕಾಪಿಕಾಡ್ ಶೋ ಎಂದು ಕಾರ್ಯಕ್ರಮ ನಿಗದಿಯಾಗಿದೆ. ಸೌದಿಯಲ್ಲಿರುವ ಮಂಗಳೂರು ಮೂಲದ ತುಳುವರು ಕಾಮೆಡಿ ಶೋ ಕಾರ್ಯಕ್ರಮ ಏರ್ಪಡಿಸಿದ್ದರು. ಇದರ ನಡುವಲ್ಲೇ ಚಿತ್ರನಟ ದೇವದಾಸ್ ಕಾಪಿಕಾಡ್ ಬಿಜೆಪಿ ಸೇರಿದ್ದಾರೆಂದು ಸುದ್ದಿ ಹಬ್ಬಿದ್ದು ಇದಕ್ಕೆ ವಿರೋಧ ವ್ಯಕ್ತವಾಗಿದೆ. ಬಿಜೆಪಿ ದೇಶಾದ್ಯಂತ ನಡೆಸುತ್ತಿರುವ ಸದಸ್ಯತ್ವ ಅಭಿಯಾನದ ಭಾಗವಾಗಿ ಡಿವಿ ಸದಾನಂದ ಗೌಡ ಮತ್ತು ವೇದವ್ಯಾಸ ಕಾಮತ್ ನೇತೃತ್ವದಲ್ಲಿ ಬಿಜೆಪಿ ಪ್ರಮುಖರು ಮೊನ್ನೆ ಮಂಗಳೂರಿನ ಕೊಡಿಯಾಲಬೈಲಿನ ಕಾಪಿಕಾಡ್ ಮನೆಗೆ ತೆರಳಿ, ಮಿಸ್ಡ್ ಕಾಲ್ ಮೂಲಕ ಬಿಜೆಪಿ ಸದಸ್ಯತನ ಪಡೆಯುವಂತೆ ಮಾಡಿದ್ದರು. ಇದರ ಬಗ್ಗೆ ದಕ್ಷಿಣ ಕನ್ನಡ ಬಿಜೆಪಿ, ರಾಜ್ಯ ಬಿಜೆಪಿ ಮತ್ತು ಸದಾನಂದ ಗೌಡರ ಅಧಿಕೃತ ಫೇಸ್ಬುಕ್ ಪೇಜ್ ಗಳಲ್ಲಿ ಹಾಕಲಾಗಿತ್ತು.





ಇದರ ಬೆನ್ನಲ್ಲೇ ಕಾಪಿಕಾಡ್ ಶೋ ಬಾಯ್ಕಾಟ್ ಎಂಬ ಪೋಸ್ಟರ್ ಎದುರಾಗಿದ್ದು, ಸೌದಿಯ ಪ್ರೋಗ್ರಾಂ ವಿರುದ್ಧ ಕೆಲವರು ಆಕ್ರೋಶ ಹೊರಹಾಕಿದ್ದರು. ಸೌದಿಯಲ್ಲಿ ಮಂಗಳೂರು ಮೂಲದ ಮುಸ್ಲಿಮರೇ ಹೆಚ್ಚಿರುವುದರಿಂದ ಅವರೇ ಈ ಪೋಸ್ಟರ್ ಹಂಚಿಕೊಂಡಿದ್ದಾರೆಯೇ ಗೊತ್ತಿಲ್ಲ. ಅಲ್ಲದೆ, ಕಾರ್ಯಕ್ರಮ ಆಯೋಜಕರಲ್ಲಿ ಕೆಲವರು ಸ್ವತಃ ದೇವದಾಸ್ ಕಾಪಿಕಾಡ್ ಅವರಲ್ಲಿ ಸ್ಪಷ್ಟನೆ ಕೇಳಿದ್ದಾರೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ದೇವದಾಸ್ ಕಾಪಿಕಾಡ್ ಸ್ಪಷ್ಟನೆ ನೀಡುವ ರೀತಿ ಆಡಿಯೋ ಬಿಡುಗಡೆ ಮಾಡಿದ್ದಾರೆ. ನಾನು ಯಾವುದೇ ಪಕ್ಷದ ಸದಸ್ಯತ್ವ ಪಡೆದಿಲ್ಲ, ಬಿಜೆಪಿಯವರು ಹಂಚಿಕೊಂಡಿದ್ದಕ್ಕೂ ಅಲ್ಲಿ ಆಗಿದ್ದಕ್ಕೂ ಸಂಬಂಧ ಇಲ್ಲ ಎಂದಿದ್ದಾರೆ.
ಸದಾನಂದ ಗೌಡರು ಮನೆಗೆ ಬರುತ್ತಾರೆ ಎಂದು ಬಿಜೆಪಿ ಕಡೆಯಿಂದ ಹೇಳಿದ್ದರು. ಹಾಗಾಗಿ, ಚಹಾದ ವ್ಯವಸ್ಥೆ ಮಾಡಿದ್ದೆ. ಬಂದವರು ಫೋಟೋ ತೆಗೆಸಿಕೊಂಡಿದ್ದಾರೆ. ಬೇರೇನೂ ಮಾಡಿಲ್ಲ. ನನ್ನ ಜೊತೆಗೆ ಖಾದರ್ ಭಾಯ್, ರಮಾನಾಥ ರೈ, ನಳಿನ್ ಕುಮಾರ್ ಎಲ್ಲರೂ ಚೆನ್ನಾಗಿಯೇ ಇದ್ದಾರೆ. ನನ್ನೊಂದಿಗೆ ಎಲ್ಲ ಪಕ್ಷದವರೂ ಇದ್ದಾರೆ. ಎಲ್ಲ ಮತೀಯರು ನನ್ನ ಆತ್ಮೀಯರಿದ್ದಾರೆ. ಸಾವಿರಾರು ಅಭಿಮಾನಿಗಳಿದ್ದಾರೆ. ಸಿನಿಮಾ ಕಲಾವಿದರಿಗೆ ಯಾವುದೇ ಪಕ್ಷ ಇಲ್ಲ. ನಾಳೆ ಖಾದರ್ ಸರ್ ಮನೆಗೆ ಬಂದರೂ ಸ್ವಾಗತಿಸುತ್ತೇನೆ ಎಂದು ದೇವದಾಸ್ ಕಾಪಿಕಾಡ್ ಸ್ಪಷ್ಟನೆ ರೂಪದಲ್ಲಿ ಆಡಿಯೋ ಹರಿಯಬಿಟ್ಟಿದ್ದಾರೆ. ಸೌದಿ ಪ್ರೋಗ್ರಾಮ್ ಕ್ಯಾನ್ಸಲ್ ಆಗಿದೆಯೇ ಎನ್ನುವ ಬಗ್ಗೆ ಮಾಹಿತಿಯಿಲ್ಲ. ಅಥವಾ ಬಾಯ್ಕಾಟ್ ಎನ್ನುವ ಪೋಸ್ಟರ್ ಕಿಡಿಗೇಡಿಗಳ ಕೃತ್ಯವೇ ಎನ್ನುವುದೂ ಗೊತ್ತಾಗಿಲ್ಲ. ಆದರೆ, ಬಿಜೆಪಿ ಸದಸ್ಯತ್ವ ವಿಚಾರ ವಿವಾದಕ್ಕೆಡೆ ಮಾಡಿದ್ದು ಕಲಾವಿದ ದೇವದಾಸ್ ಕಾಪಿಕಾಡ್ ಅವರಿಗೆ ಇರಿಸು ಮುರಿಸು ತಂದಿದ್ದಂತೂ ಸತ್ಯ.
Mangalore Tulu Actor Devadas Kapikad in trouble after joining BJP, Saudi Tulu prpgram boycott camping goes viral on social media.
11-09-26 05:50 pm
HK News Staffer
ಬ್ಯಾಂಕ್ ಸಾಲಕ್ಕೆ ಸೀಜ್ ಆದ ಆಯುರ್ವೇದ ಕಾಲೇಜು ; 4.5...
11-09-26 02:59 pm
ಬರಗಾಲದ ಸಂಕಷ್ಟ ನಡುವೆ ನೂರು ದಿನಗಳ ವೈಭವೀಕರಣ ಬೇಕೇ?...
10-09-26 05:10 pm
ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಗಿರಿ ; ತೀವ್ರ ಲಾಬಿ ನಡೆ...
10-09-26 03:50 pm
ಬೆಳ್ಳಂಬೆಳಗ್ಗೆ ಜಾರಕಿಹೊಳಿಗೆ ಇಡಿ ಶಾಕ್: 18 ಬಾರ್...
09-09-26 10:52 am
12-09-26 01:10 pm
HK News Staffer
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
12-09-26 03:09 pm
HK News Staffer
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
ಅ.1ರಿಂದ ಮಂಗಳೂರು ರೈಲ್ವೇ ಆಡಳಿತ ಬದಲು ; ಪಾಲಕ್ಕಾಡ್...
11-09-26 10:58 pm
ಮಂಗಳೂರಿನಲ್ಲಿ ಡ್ರಗ್ಸ್ ತಪಾಸಣೆ ; ಒಂಬತ್ತು ತಿಂಗಳಲ್...
11-09-26 09:42 pm
ಪುತ್ತೂರು ಬೈಪಾಸ್ ರಸ್ತೆಯಲ್ಲಿ ಎರಡು ಕಾಡುಕೋಣಗಳ ಓಡಾ...
11-09-26 08:24 pm
11-09-26 06:38 pm
HK News Staffer
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm
ಬೈಂದೂರಿನಲ್ಲಿ ತೆರವು ಕಾರ್ಯಾಚರಣೆ ವೇಳೆ ಸರಣಿ ಅಪಘಾತ...
10-09-26 02:18 pm