ಬ್ರೇಕಿಂಗ್ ನ್ಯೂಸ್
06-09-24 10:28 pm Mangalore Correspondent ಕರಾವಳಿ
ಮಂಗಳೂರು, ಸೆ.6: ಮಂಗಳೂರು, ಬೆಂಗಳೂರು, ಮೈಸೂರು ನಗರದಲ್ಲಿ ವಾತಾವರಣದ ಗಾಳಿಯ ಗುಣಮಟ್ಟ ತೀವ್ರವಾಗಿ ಕುಸಿದಿದೆ ಎನ್ನುವ ಎಚ್ಚರಿಕೆ ಸಂದೇಶವನ್ನು ಗ್ರೀನ್ ಪೀಸ್ ಸಂಶೋಧನಾ ವರದಿ ನೀಡಿದೆ. ಕರ್ನಾಟಕದ ಬೆಂಗಳೂರು, ಮೈಸೂರು ಹಾಗು ಮಂಗಳೂರಿನಲ್ಲಿ ನಾವು ಉಸಿರಾಡುವ ಗಾಳಿಯ ಗುಣಮಟ್ಟ ತೀವ್ರವಾಗಿ ಕುಸಿದಿದ್ದು, ಮಾಲಿನ್ಯದ ಪ್ರಮಾಣ ಅಪಾಯಕಾರಿ ಮಟ್ಟಕ್ಕೆ ತಲುಪಿದೆ. ಮಾಲಿನ್ಯ ತಗ್ಗಿಸಲು ಕ್ರಮ ಕೈಗೊಳ್ಳದಿದ್ದರೆ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರಲಿದೆ ಎಂದು ಎಚ್ಚರಿಕೆ ನೀಡಿದೆ.
ದಕ್ಷಿಣ ಭಾರತದ 10 ಪ್ರಮುಖ ನಗರಗಳ ಗಾಳಿಯಲ್ಲಿ ಮಾಲಿನ್ಯಕಾರಕ ಕಣಗಳಾದ ಪಿಎಂ 2.5 (ಸೂಕ್ಷ್ಮ) ಮತ್ತು ಪಿಎಂ 10 (ಅತಿಸೂಕ್ಷ್ಮ) ಕಣಗಳ ಪ್ರಮಾಣವು ಡಬ್ಲ್ಯುಎಚ್ಒ ಸೂಚಿತ ಸರಾಸರಿ ಮಟ್ಟ ಮೀರಿದ್ದು ಇದು ಗಂಭೀರ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ಗ್ರೀನ್ಪೀಸ್ ಇಂಡಿಯಾದ ವರದಿ ಎಚ್ಚರಿಸಿದೆ. ಬೆಂಗಳೂರು, ಮಂಗಳೂರು, ಮೈಸೂರು, ಹೈದರಾಬಾದ್, ಚೆನ್ನೈ, ವಿಶಾಖಪಟ್ಟಣ, ಕೊಚ್ಚಿ, ಅಮರಾವತಿ, ವಿಜಯವಾಡ ಮತ್ತು ಪುದುಚೇರಿ ನಗರಗಳಲ್ಲಿ ಗಾಳಿಯ ಗುಣಮಟ್ಟವನ್ನು ವಿಶ್ಲೇಷಿಸಲಾಗಿತ್ತು. ಹತ್ತು ನಗರಗಳ ಪೈಕಿ ವಿಶಾಖಪಟ್ಟಣಂ ನಗರದಲ್ಲಿ ಗಾಳಿ ಗುಣಮಟ್ಟ ತೀವ್ರ ಕುಸಿತ ಕಂಡಿದೆ. ಅಲ್ಲಿನ ವಾತಾವರಣ ನಿಗದಿತ ಮಾನದಂಡಕ್ಕಿಂತ ಗುಣಮಟ್ಟದ ಅಂಶ 10 ಪಟ್ಟು ಕುಸಿದಿರುವುದು ದೃಢಪಟ್ಟಿದೆ.
ಅಲ್ಲದೆ ಇದು ಗಾಳಿಯ ಗುಣಮಟ್ಟ ನಿರ್ಧರಿಸುವ ನ್ಯಾಶನಲ್ ಎಂಬಿಯಂಟ್ ಏರ್ ಕ್ವಾಲಿಟಿ ಸ್ಟಾಂಡರ್ಡ್ ನಿಗದಿಪಡಿಸಿದ ಮಿತಿಗಳನ್ನೂ ಮೀರಿದೆ ಎಂದು ಅಧ್ಯಯನವು ಸ್ಪಷ್ಟಪಡಿಸಿದೆ. ಡಬ್ಲ್ಯುಎಚ್ಒ ಮಾರ್ಗಸೂಚಿಗಳೊಂದಿಗೆ ಹೋಲಿಸಿದಾಗ, ಗಾಳಿಯಲ್ಲಿ ಪಿಎಂ 2.5 ಕಣಗಳ ಮಟ್ಟವು ಮಂಗಳೂರು, ಹೈದರಾಬಾದ್, ವಿಜಯವಾಡ, ಕೊಚ್ಚಿ, ಅಮರಾವತಿ ಮತ್ತು ಚೆನ್ನೈನಲ್ಲಿ 6ರಿಂದ 7 ಪಟ್ಟು ಹೆಚ್ಚಾಗಿದೆ. ಅದೇ ರೀತಿ, ಪಿಎಂ 10 ಕಣಗಳ ಮಟ್ಟವು ಬೆಂಗಳೂರು, ಮೈಸೂರು ಮತ್ತು ಪುದುಚೇರಿ ನಗರಗಳಲ್ಲಿ 4ರಿಂದ 5 ಪಟ್ಟು ಹೆಚ್ಚಾಗಿದೆ ಎಂಬುದಾಗಿ ವರದಿ ಹೇಳಿದೆ.
Greenpeace India warns of bad air quality in Mangalore Bangalore and Mysuru.
27-05-26 06:26 pm
HK News Staffer
ನಾಗಲಕ್ಷ್ಮಿಗೆ ಸುತ್ತಿಕೊಂಡ ಮತ್ತೊಂದು ವಿವಾದ ; ಉಡುಪ...
27-05-26 04:58 pm
ಡಿಕೆಗೆ ಪಟ್ಟ ; ಬಹುತೇಕ ಸಚಿವರಿಗೆ ಕೊಕ್- ಹೊಸಬರಿಗೆ...
27-05-26 01:41 pm
ರಾಜ್ಯ ರಾಜಕೀಯದಲ್ಲಿ ಭಾರೀ ಕ್ಲೈಮ್ಯಾಕ್ಸ್ ; ಸಿಎಂ ಸಿ...
26-05-26 11:03 pm
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
27-05-26 12:29 pm
HK News Desk
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
27-05-26 08:34 pm
HK News Staffer
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm
ಪ್ರಿಯಕರನ ಕಿರುಕುಳ ; ಮುಂಬೈನಲ್ಲಿ ರೇಡಿಯೋ ಜಾಕಿಯಾಗಿ...
27-05-26 12:42 pm
ಇಸ್ರೇಲ್ನಿಂದ ರಜೆ ಮೇಲೆ ಊರಿಗೆ ಬಂದವನ ದುರಂತ ಅಂತ್ಯ...
26-05-26 02:43 pm