ಬ್ರೇಕಿಂಗ್ ನ್ಯೂಸ್
07-09-24 09:17 pm Mangalore Correspondent ಕರಾವಳಿ
ಬಂಟ್ವಾಳ, ಸೆ.7: ನವದಂಪತಿ ಪ್ರಯಾಣಿಸುತ್ತಿದ್ದ ಆಲ್ಟೋ ಕಾರು ನಿಯಂತ್ರಣ ತಪ್ಪಿ ಡಿವೈಡರ್ ಡಿಕ್ಕಿಯಾಗಿ ಬಳಿಕ ಇನ್ನೊಂದು ಬದಿಯಲ್ಲಿ ಬರುತ್ತಿದ್ದ ಕೆಎಸ್ಆರ್ ಟಿಸಿ ಬಸ್ಸಿಗೆ ಡಿಕ್ಕಿ ಹೊಡೆದ ಘಟನೆ ಬಿಸಿ ರೋಡ್ ಬಳಿಯ ತಲಪಾಡಿಯಲ್ಲಿ ನಡೆದಿದೆ. ಅಪಘಾತದಲ್ಲಿ ಪತ್ನಿ ಸ್ಥಳದಲ್ಲೇ ದಾರುಣ ಸಾವನ್ನಪ್ಪಿದ್ದು ಪತಿ ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಪೆರ್ನೆ ಸಮೀಪದ ಒಡ್ಯದಗಯ ನಿವಾಸಿ ಅನೀಶ್ ಕೃಷ್ಣ ಎಂಬವರ ಪತ್ನಿ ಮಾನಸ ಸಾವನ್ನಪ್ಪಿದ ನವವಿವಾಹಿತ ಯುವತಿ. ಘಟನೆಯಿಂದ ಗಂಭೀರ ಗಾಯಗೊಂಡ ಅನೀಶ್ ಕೃಷ್ಣ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಸೆಪ್ಟೆಂಬರ್ 5 ರಂದು ಬಂಟ್ವಾಳ ತಾಲೂಕಿನ ದೇಂತಡ್ಕ ದೇವಸ್ಥಾನದಲ್ಲಿ ಇವರ ಮದುವೆ ನಡೆದಿತ್ತು. ಮದುವೆ ಕಾರ್ಯಕ್ರಮ ಸಂಬಂಧಿಸಿ ದೇಂತಡ್ಕ ದೇವಸ್ಥಾನಕ್ಕೆ ಬಂದು ಹಿಂತಿರುಗುವಾಗ ಪತ್ನಿ ಮನೆಗೆ ತೆರಳುತ್ತಿದ್ದಾಗ ಭೀಕರ ಅಪಘಾತ ನಡೆದಿದೆ
ಆಲ್ಟೋ ಕಾರನ್ನು ಚಲಾಯಿಸುತ್ತಿದ್ದ ಅನೀಶ್ ವೇಗವಾಗಿದ್ದಾಗಲೇ ನಿಯಂತ್ರಣ ತಪ್ಪಿದ್ದು ಏಕಮುಖ ರಸ್ತೆಯಿಂದ ಡಿವೈಡರ್ ಮೇಲೆ ಹಾರಿ ವಿರುದ್ಧ ದಿಕ್ಕಿನಿಂದ ಮಂಗಳೂರು ಕಡೆಯಿಂದ ಬಿ.ಸಿ ರೋಡಿನ ಕಡೆಗೆ ಬರುತ್ತಿದ್ದ ಕೆ.ಎಸ್.ಆರ್ಟಿ.ಸಿ ಬಸ್ಸಿಗೆ ಡಿಕ್ಕಿ ಹೊಡೆದಿದೆ.
ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ಜಖಂಗೊಂಡಿದ್ದು ಸಹಪ್ರಯಾಣಿಕೆಯಾಗಿದ್ದ ಪತ್ನಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾಳೆ. ಘಟನೆಯಿಂದ ಹೆದ್ದಾರಿಯಲ್ಲಿ ಕೆಲ ಹೊತ್ತು ಸಂಚಾರಕ್ಕೆ ಅಡಚಣೆ ಉಂಟಾಗಿತ್ತು. ಸ್ಥಳಕ್ಕೆ ಮೆಲ್ಕಾರ್ ಟ್ರಾಫಿಕ್ ಪೋಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ
Mangalore Bantwal newly wedded couple meet with Accident, wife killed on spot. The deceased has been identified as Manasa. The accident occured just in two days of their marriage.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
14-07-26 01:37 pm
HK News Staffer
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
14-07-26 02:43 pm
HK News Staffer
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm