ಬ್ರೇಕಿಂಗ್ ನ್ಯೂಸ್
10-09-24 07:41 pm Mangalore Correspondent ಕರಾವಳಿ
ಪುತ್ತೂರು, ಸೆ.10: ಪುತ್ತೂರಿನ ಬಿಜೆಪಿ ಮುಖಂಡ ಅರುಣ್ ಕುಮಾರ್ ಪುತ್ತಿಲ ಅವರ ವಿರುದ್ಧ ಪುತ್ತೂರು ನಗರ ಠಾಣೆಯಲ್ಲಿ ದಾಖಲಾಗಿದ್ದ ಲೈಂಗಿಕ ದೌರ್ಜನ್ಯ ಪ್ರಕರಣದ ಎಫ್.ಐ.ಆರ್ ಮತ್ತು ತನಿಖೆಗೆ ಹೈಕೋರ್ಟ್ ತಾತ್ಕಾಲಿಕ ತಡೆ ನೀಡಿದೆ.
14 ತಿಂಗಳ ಹಿಂದೆ ಅರುಣ್ ಕುಮಾರ್ ಪುತ್ತಿಲ ಅವರು ಬೆಂಗಳೂರಿನ ಹೊಟೇಲೊಂದರಲ್ಲಿ ತನಗೆ ಲೈಂಗಿಕ ಕಿರುಕುಳ ನೀಡಿರುವುದಾಗಿ 47ರ ಹರೆಯದ ಮಹಿಳೆಯೋರ್ವರು ನೀಡಿದ ದೂರಿನಂತೆ ವಾರದ ಹಿಂದೆ ಪುತ್ತೂರಿನಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣವನ್ನು ಪ್ರಶ್ನಿಸಿ ಅರುಣ್ ಪುತ್ತಿಲ ಹೈಕೋರ್ಟ್ ಮೆಟ್ಟಿಲೇರಿದ್ದರು. ಅರುಣ್ ಪುತ್ತಿಲ ಪರ ವಾದ ಮಂಡಿಸಿದ ನ್ಯಾಯವಾದಿ ಪಿ.ಪಿ. ಹೆಗ್ಡೆ ಅವರು ಮಹಿಳೆಯ ದೂರು ರಾಜಕೀಯ ಷಡ್ಯಂತ್ರದಿಂದ ಕೂಡಿದೆ. ಸುಳ್ಳು ಆರೋಪ ಹೊರಿಸಲಾಗಿದೆ. 47 ವರ್ಷದ ಮಹಿಳೆ ತನ್ನ ಮೇಲೆ ಲೈಂಗಿಕ ದೌರ್ಜನ್ಯ ಮಾಡಲಾಗಿದೆ, ಅತ್ಯಾಚಾರ ಎಸಗಲಾಗಿದೆ ಎಂದು ಸುಳ್ಳು ದೂರು ನೀಡಿರುವುದಾಗಿ ವಾದಿಸಿದರು.
ಅರುಣ್ ಪುತ್ತಿಲ ಅವರೊಂದಿಗೆ ಮಹಿಳೆ ಮಾತನಾಡಿದ ಆಡಿಯೋ ಒಂದು ತಿಂಗಳ ಹಿಂದೆ ವೈರಲ್ ಆಗಿತ್ತು. ಇದರ ಬಳಿಕ ಪುತ್ತಿಲ, ಬೆಂಗಳೂರಿನ ಸಿಟಿ ನ್ಯಾಯಾಲಯದಲ್ಲಿ ಮಾನಹಾನಿಯಾಗುವ ವರದಿಗಳನ್ನು ಪ್ರಸಾರಿಸದಂತೆ ಪ್ರತಿಬಂಧಕಾಜ್ಞೆ ಪಡೆದುಕೊಂಡಿದ್ದರು. ಆನಂತರ, ಮಹಿಳೆ ಠಾಣೆಗೆ ತೆರಳಿ ದೂರು ನೀಡಿದ್ದು, ಇದೊಂದು ಸುಳ್ಳು ಆರೋಪವಾಗಿದೆ. ಪುತ್ತಿಲರ ರಾಜಕೀಯ ವಿರೋಧಿಗಳು ಈ ಕೃತ್ಯದ ಹಿಂದಿದ್ದಾರೆ ಎಂದು ಪಿ.ಪಿ.ಹೆಗ್ಡೆ ನ್ಯಾಯಪೀಠದ ಗಮನ ಸೆಳೆದಿದ್ದರು.
ಈ ಕುರಿತು ದಾಖಲಾಗಿರುವ ಎಫ್.ಐ.ಆರ್. ಮತ್ತು ನ್ಯಾಯಾಲಯದ ಮುಂದಿನ ತನಿಖೆಗೆ ತಡೆ ನೀಡಬೇಕು ಎಂದು ಪುತ್ತಿಲ ಪರ ವಕೀಲರು ಕೋರಿದ್ದು ಇದನ್ನು ಮಾನ್ಯ ಮಾಡಿ ಉಚ್ಛ ನ್ಯಾಯಾಲಯ ತಡೆಯಾಜ್ಞೆ ನೀಡಿದೆ.
High court holds Arun puthila sexual harassment case, lawyer argues as fake case. Puttila Parivara founder and BJP leader Arun Kumar Puthila obtained bail from a Magistrate Court in Puttur on Monday, September 2, in connection with a case of sexual harassment registered against him by the Dakshina Kannada Women Police in Puttur on Sunday, September 1.
19-09-25 10:04 pm
Bangalore Correspondent
Caste survey: ಜಾತಿ ಸಮೀಕ್ಷೆಗೆ ಸರ್ಕಾರದ ಸಚಿವರಿಂದ...
19-09-25 02:16 pm
ಮೋಸದಿಂದಲೇ ಕಣ್ರೀ ಬಿಜೆಪಿ ಚುನಾವಣೆ ಗೆದ್ದಿದೆ! ರಾಹು...
19-09-25 09:45 am
ಬೆಂಗಳೂರು ಗಬ್ಬೆದ್ದು ನಾರುತ್ತಿದೆ, ರಾಜಧಾನಿ ಈಗ ಗುಂ...
19-09-25 09:42 am
Traffic Violation, Bangalore: ರಾಜ್ಯದಲ್ಲಿ ಸಂಚಾ...
18-09-25 05:34 pm
20-09-25 11:42 am
HK News Desk
ಸಿಂಗಾಪುರದಲ್ಲಿ ಸ್ಕ್ಯೂಬಾ ಡೈವಿಂಗ್ ಅವಘಡ: ಬಾಲಿವುಡ್...
19-09-25 05:45 pm
Yasin Malik: ಲಷ್ಕರ್ ಮುಖ್ಯಸ್ಥ ಹಫೀಜ್ ಸಯೀದ್ ಭೇ...
19-09-25 02:24 pm
ಕೇಂದ್ರೀಕೃತ ಸಾಫ್ಟ್ವೇರ್ ಬಳಸಿ ಬೂತ್ಗಳಿಂದಲೇ ಮತದಾ...
18-09-25 08:14 pm
ಎರಡು ಬಾರಿ ಕಚ್ಚಿದ್ರೆ ಬೀದಿ ನಾಯಿಗೆ ಜೀವಾವಧಿ ಶಿಕ್ಷ...
16-09-25 10:11 pm
19-09-25 10:46 pm
Mangalore Correspondent
ಕಟೀಲು ದೇಗುಲದಲ್ಲಿ ಸೇವಾ ದರ ಏಕಾಏಕಿ ದುಪ್ಪಟ್ಟು ; ಬ...
19-09-25 10:21 pm
ಧರ್ಮಸ್ಥಳ ಕೇಸ್ ; ಅನೇಕ ಶವಗಳನ್ನು ಹೂತಿದ್ದೆವು ಎಂದಿ...
19-09-25 09:59 pm
Kadri, Mangalore, Smart City: ‘ಸ್ಮಾರ್ಟ್ ಸಿಟಿ’...
19-09-25 07:53 pm
ಇನ್ಸ್ಟಾ ಗ್ರಾಂನಲ್ಲಿ ಪ್ರಚೋದನಕಾರಿ ಪೋಸ್ಟ್ ; ಆರೋಪಿ...
19-09-25 04:58 pm
18-09-25 11:44 am
HK News Desk
Vijayapura Bank Robbery: SBI ಬ್ಯಾಂಕ್ ದರೋಡೆ ;...
17-09-25 09:44 pm
Mangalore Crime, Cattle Theft: ಅಡ್ಯಾರ್ ನಲ್ಲಿ...
17-09-25 06:04 pm
Udupi, Job Fraud, Scam: ವಿದೇಶದಲ್ಲಿ ಕೆಲಸ ಕೊಡಿಸ...
17-09-25 02:46 pm
ಫುಡ್ ಡೆಲಿವರಿ ನೆಪದಲ್ಲಿ ಬಾಗಿಲು ತಟ್ಟಿದ ಕಳ್ಳ ; ವೃ...
17-09-25 12:25 pm