ಬ್ರೇಕಿಂಗ್ ನ್ಯೂಸ್
10-09-24 07:41 pm Mangalore Correspondent ಕರಾವಳಿ
ಪುತ್ತೂರು, ಸೆ.10: ಪುತ್ತೂರಿನ ಬಿಜೆಪಿ ಮುಖಂಡ ಅರುಣ್ ಕುಮಾರ್ ಪುತ್ತಿಲ ಅವರ ವಿರುದ್ಧ ಪುತ್ತೂರು ನಗರ ಠಾಣೆಯಲ್ಲಿ ದಾಖಲಾಗಿದ್ದ ಲೈಂಗಿಕ ದೌರ್ಜನ್ಯ ಪ್ರಕರಣದ ಎಫ್.ಐ.ಆರ್ ಮತ್ತು ತನಿಖೆಗೆ ಹೈಕೋರ್ಟ್ ತಾತ್ಕಾಲಿಕ ತಡೆ ನೀಡಿದೆ.
14 ತಿಂಗಳ ಹಿಂದೆ ಅರುಣ್ ಕುಮಾರ್ ಪುತ್ತಿಲ ಅವರು ಬೆಂಗಳೂರಿನ ಹೊಟೇಲೊಂದರಲ್ಲಿ ತನಗೆ ಲೈಂಗಿಕ ಕಿರುಕುಳ ನೀಡಿರುವುದಾಗಿ 47ರ ಹರೆಯದ ಮಹಿಳೆಯೋರ್ವರು ನೀಡಿದ ದೂರಿನಂತೆ ವಾರದ ಹಿಂದೆ ಪುತ್ತೂರಿನಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣವನ್ನು ಪ್ರಶ್ನಿಸಿ ಅರುಣ್ ಪುತ್ತಿಲ ಹೈಕೋರ್ಟ್ ಮೆಟ್ಟಿಲೇರಿದ್ದರು. ಅರುಣ್ ಪುತ್ತಿಲ ಪರ ವಾದ ಮಂಡಿಸಿದ ನ್ಯಾಯವಾದಿ ಪಿ.ಪಿ. ಹೆಗ್ಡೆ ಅವರು ಮಹಿಳೆಯ ದೂರು ರಾಜಕೀಯ ಷಡ್ಯಂತ್ರದಿಂದ ಕೂಡಿದೆ. ಸುಳ್ಳು ಆರೋಪ ಹೊರಿಸಲಾಗಿದೆ. 47 ವರ್ಷದ ಮಹಿಳೆ ತನ್ನ ಮೇಲೆ ಲೈಂಗಿಕ ದೌರ್ಜನ್ಯ ಮಾಡಲಾಗಿದೆ, ಅತ್ಯಾಚಾರ ಎಸಗಲಾಗಿದೆ ಎಂದು ಸುಳ್ಳು ದೂರು ನೀಡಿರುವುದಾಗಿ ವಾದಿಸಿದರು.
ಅರುಣ್ ಪುತ್ತಿಲ ಅವರೊಂದಿಗೆ ಮಹಿಳೆ ಮಾತನಾಡಿದ ಆಡಿಯೋ ಒಂದು ತಿಂಗಳ ಹಿಂದೆ ವೈರಲ್ ಆಗಿತ್ತು. ಇದರ ಬಳಿಕ ಪುತ್ತಿಲ, ಬೆಂಗಳೂರಿನ ಸಿಟಿ ನ್ಯಾಯಾಲಯದಲ್ಲಿ ಮಾನಹಾನಿಯಾಗುವ ವರದಿಗಳನ್ನು ಪ್ರಸಾರಿಸದಂತೆ ಪ್ರತಿಬಂಧಕಾಜ್ಞೆ ಪಡೆದುಕೊಂಡಿದ್ದರು. ಆನಂತರ, ಮಹಿಳೆ ಠಾಣೆಗೆ ತೆರಳಿ ದೂರು ನೀಡಿದ್ದು, ಇದೊಂದು ಸುಳ್ಳು ಆರೋಪವಾಗಿದೆ. ಪುತ್ತಿಲರ ರಾಜಕೀಯ ವಿರೋಧಿಗಳು ಈ ಕೃತ್ಯದ ಹಿಂದಿದ್ದಾರೆ ಎಂದು ಪಿ.ಪಿ.ಹೆಗ್ಡೆ ನ್ಯಾಯಪೀಠದ ಗಮನ ಸೆಳೆದಿದ್ದರು.
ಈ ಕುರಿತು ದಾಖಲಾಗಿರುವ ಎಫ್.ಐ.ಆರ್. ಮತ್ತು ನ್ಯಾಯಾಲಯದ ಮುಂದಿನ ತನಿಖೆಗೆ ತಡೆ ನೀಡಬೇಕು ಎಂದು ಪುತ್ತಿಲ ಪರ ವಕೀಲರು ಕೋರಿದ್ದು ಇದನ್ನು ಮಾನ್ಯ ಮಾಡಿ ಉಚ್ಛ ನ್ಯಾಯಾಲಯ ತಡೆಯಾಜ್ಞೆ ನೀಡಿದೆ.
High court holds Arun puthila sexual harassment case, lawyer argues as fake case. Puttila Parivara founder and BJP leader Arun Kumar Puthila obtained bail from a Magistrate Court in Puttur on Monday, September 2, in connection with a case of sexual harassment registered against him by the Dakshina Kannada Women Police in Puttur on Sunday, September 1.
16-09-24 07:49 pm
HK News Desk
P Murthy, Ambedkar Sena, MLA Munirathna: ದಲಿತ...
15-09-24 05:33 pm
BJP, RSS: ರಾಜ್ಯ ಬಿಜೆಪಿಗೆ ಮತ್ತೆ ಸಂಘಟನಾ ಕಾರ್ಯದರ...
15-09-24 01:53 pm
Munirathan: ಗುತ್ತಿಗೆದಾರನಿಗೆ ಜಾತಿ ನಿಂದನೆ, ಲಂಚಕ...
15-09-24 12:47 pm
Nagamangala violence, Hemant Nimbalkar IPS: ನ...
13-09-24 09:10 pm
17-09-24 07:28 pm
HK News Desk
Arvind Kejriwal, Atishi New CM Delhi; ದೆಹಲಿ ಸ...
17-09-24 07:08 pm
ಜಾಲತಾಣದಲ್ಲಿ ಪ್ರವಾದಿ ಬಗ್ಗೆ ಅವಹೇಳನಕಾರಿ ಪೋಸ್ಟ್ ;...
16-09-24 02:04 pm
ಆರು ತಿಂಗಳು ಜೈಲಲ್ಲಿದ್ದರೂ, ಸಿಎಂ ಸ್ಥಾನ ಬಿಟ್ಟುಕೊಡ...
15-09-24 06:55 pm
ಪೋರ್ಟ್ ಬ್ಲೇರ್ ಇನ್ನು ಶ್ರೀವಿಜಯ ಪುರಂ ; ವಸಾಹತು ಶಾ...
14-09-24 09:46 pm
17-09-24 07:25 pm
Mangalore Correspondent
Mangalore, Street Vendors; ಬೀದಿ ಬದಿ ವ್ಯಾಪಾರಿಗ...
17-09-24 03:43 pm
BC Road News, FIR: ಬಿ.ಸಿ ರೋಡ್ ಚಲೋ ಹಿನ್ನೆಲೆ ;...
17-09-24 12:41 pm
ಬಿ.ಸಿ.ರೋಡಿನಲ್ಲಿ ನಾರಾಯಣ ಗುರು ವೃತ್ತ ಮರು ನಿರ್ಮಾಣ...
16-09-24 11:02 pm
ಆ್ಯಪಲ್ ಐಫೋನಲ್ಲಿ ಸಮಸ್ಯೆ ; ಸರ್ವಿಸ್ ಸೆಂಟರ್ ಅಸಡ್...
16-09-24 10:57 pm
15-09-24 01:21 pm
Bangalore Correspondent
MLA Munirathna Arrest: ತಿಂಗಳಿಗೆ 30 ಲಕ್ಷ ಲಂಚಕ್...
14-09-24 06:54 pm
Srimathi Shetty murder case, Mangalore Court...
14-09-24 11:52 am
Kristina Joksimovic, Miss Switzerland finalis...
13-09-24 10:50 pm
Mangalore crime, Bantwal Bank: ಬ್ಯಾಂಕ್ ಕಚೇರಿಯ...
13-09-24 09:08 pm