ಬ್ರೇಕಿಂಗ್ ನ್ಯೂಸ್
10-09-24 07:41 pm Mangalore Correspondent ಕರಾವಳಿ
ಪುತ್ತೂರು, ಸೆ.10: ಪುತ್ತೂರಿನ ಬಿಜೆಪಿ ಮುಖಂಡ ಅರುಣ್ ಕುಮಾರ್ ಪುತ್ತಿಲ ಅವರ ವಿರುದ್ಧ ಪುತ್ತೂರು ನಗರ ಠಾಣೆಯಲ್ಲಿ ದಾಖಲಾಗಿದ್ದ ಲೈಂಗಿಕ ದೌರ್ಜನ್ಯ ಪ್ರಕರಣದ ಎಫ್.ಐ.ಆರ್ ಮತ್ತು ತನಿಖೆಗೆ ಹೈಕೋರ್ಟ್ ತಾತ್ಕಾಲಿಕ ತಡೆ ನೀಡಿದೆ.
14 ತಿಂಗಳ ಹಿಂದೆ ಅರುಣ್ ಕುಮಾರ್ ಪುತ್ತಿಲ ಅವರು ಬೆಂಗಳೂರಿನ ಹೊಟೇಲೊಂದರಲ್ಲಿ ತನಗೆ ಲೈಂಗಿಕ ಕಿರುಕುಳ ನೀಡಿರುವುದಾಗಿ 47ರ ಹರೆಯದ ಮಹಿಳೆಯೋರ್ವರು ನೀಡಿದ ದೂರಿನಂತೆ ವಾರದ ಹಿಂದೆ ಪುತ್ತೂರಿನಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣವನ್ನು ಪ್ರಶ್ನಿಸಿ ಅರುಣ್ ಪುತ್ತಿಲ ಹೈಕೋರ್ಟ್ ಮೆಟ್ಟಿಲೇರಿದ್ದರು. ಅರುಣ್ ಪುತ್ತಿಲ ಪರ ವಾದ ಮಂಡಿಸಿದ ನ್ಯಾಯವಾದಿ ಪಿ.ಪಿ. ಹೆಗ್ಡೆ ಅವರು ಮಹಿಳೆಯ ದೂರು ರಾಜಕೀಯ ಷಡ್ಯಂತ್ರದಿಂದ ಕೂಡಿದೆ. ಸುಳ್ಳು ಆರೋಪ ಹೊರಿಸಲಾಗಿದೆ. 47 ವರ್ಷದ ಮಹಿಳೆ ತನ್ನ ಮೇಲೆ ಲೈಂಗಿಕ ದೌರ್ಜನ್ಯ ಮಾಡಲಾಗಿದೆ, ಅತ್ಯಾಚಾರ ಎಸಗಲಾಗಿದೆ ಎಂದು ಸುಳ್ಳು ದೂರು ನೀಡಿರುವುದಾಗಿ ವಾದಿಸಿದರು.
ಅರುಣ್ ಪುತ್ತಿಲ ಅವರೊಂದಿಗೆ ಮಹಿಳೆ ಮಾತನಾಡಿದ ಆಡಿಯೋ ಒಂದು ತಿಂಗಳ ಹಿಂದೆ ವೈರಲ್ ಆಗಿತ್ತು. ಇದರ ಬಳಿಕ ಪುತ್ತಿಲ, ಬೆಂಗಳೂರಿನ ಸಿಟಿ ನ್ಯಾಯಾಲಯದಲ್ಲಿ ಮಾನಹಾನಿಯಾಗುವ ವರದಿಗಳನ್ನು ಪ್ರಸಾರಿಸದಂತೆ ಪ್ರತಿಬಂಧಕಾಜ್ಞೆ ಪಡೆದುಕೊಂಡಿದ್ದರು. ಆನಂತರ, ಮಹಿಳೆ ಠಾಣೆಗೆ ತೆರಳಿ ದೂರು ನೀಡಿದ್ದು, ಇದೊಂದು ಸುಳ್ಳು ಆರೋಪವಾಗಿದೆ. ಪುತ್ತಿಲರ ರಾಜಕೀಯ ವಿರೋಧಿಗಳು ಈ ಕೃತ್ಯದ ಹಿಂದಿದ್ದಾರೆ ಎಂದು ಪಿ.ಪಿ.ಹೆಗ್ಡೆ ನ್ಯಾಯಪೀಠದ ಗಮನ ಸೆಳೆದಿದ್ದರು.
ಈ ಕುರಿತು ದಾಖಲಾಗಿರುವ ಎಫ್.ಐ.ಆರ್. ಮತ್ತು ನ್ಯಾಯಾಲಯದ ಮುಂದಿನ ತನಿಖೆಗೆ ತಡೆ ನೀಡಬೇಕು ಎಂದು ಪುತ್ತಿಲ ಪರ ವಕೀಲರು ಕೋರಿದ್ದು ಇದನ್ನು ಮಾನ್ಯ ಮಾಡಿ ಉಚ್ಛ ನ್ಯಾಯಾಲಯ ತಡೆಯಾಜ್ಞೆ ನೀಡಿದೆ.
High court holds Arun puthila sexual harassment case, lawyer argues as fake case. Puttila Parivara founder and BJP leader Arun Kumar Puthila obtained bail from a Magistrate Court in Puttur on Monday, September 2, in connection with a case of sexual harassment registered against him by the Dakshina Kannada Women Police in Puttur on Sunday, September 1.
09-02-26 07:20 pm
Bangalore Correspondent
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರ...
09-02-26 12:29 pm
Gadag, No phone, Tv: ಎಸ್ಸೆಸ್ಸೆಲ್ಸಿ ಮಕ್ಕಳ ಭವಿಷ...
07-02-26 05:09 pm
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
10-02-26 07:31 pm
HK News Desk
ಅಡೂರು ಮೂಲದ ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು...
10-02-26 02:15 pm
ರಾಮ ಮಂದಿರ ಸ್ಫೋಟಕ್ಕೆ ಸಂಚು ರೂಪಿಸಿದ್ದ ಕೈದಿ ಫರೀದಾ...
10-02-26 11:44 am
ಕೆನಡಾದಲ್ಲಿ ಗುಂಡಿಟ್ಟು ಕನ್ನಡಿಗ ಸಾಫ್ಟ್ವೇರ್ ಇಂಜಿ...
09-02-26 10:25 pm
ಜಾಗತಿಕ ಷೇರು ಮಾರುಕಟ್ಟೆಯಲ್ಲಿ 'ಆಂಥ್ರೋಪಿಕ್' AI ಬಿ...
09-02-26 12:27 pm
10-02-26 08:27 pm
Mangalore Correspondent
Oman Accident: ಒಮಾನ್ ನಲ್ಲಿ ಭೀಕರ ಅಪಘಾತ ; ಕಾಪು...
09-02-26 11:20 pm
Mangalore Accident, Bus: ನಂತೂರಿನಲ್ಲಿ ಅಪಘಾತಕ್ಕ...
09-02-26 08:02 pm
ಕೆಪಿಟಿ ಜಂಕ್ಷನ್ ಬಳಿಯ ಹೆದ್ದಾರಿ ಡಿವೈಡರ್ ಮುಚ್ಚಿದ್...
09-02-26 02:50 pm
ಸೌಜನ್ಯಾ ಕೊಲೆ ಪ್ರಕರಣ ; ದೋಷಪೂರಿತ ತನಿಖೆ ನಡೆಸಿದ ಅ...
08-02-26 11:17 pm
10-02-26 09:05 pm
Bangalore Correspondent
Peter Caddy, Arrest: ಉದ್ಯಮಿಗಳಿಗೆ ಸಾಲ ಕೊಡಿಸುವು...
10-02-26 04:38 pm
Belthangady Fake Kidnap: ಕಾಲೇಜು ವಿದ್ಯಾರ್ಥಿನಿ...
10-02-26 10:59 am
ಜಾಲತಾಣದಲ್ಲೇ ಪಡ್ಡೆ ಹುಡುಗರಿಗೆ ಬಲೆ, ಖತರ್ನಾಕ್ ಪ್...
09-02-26 02:04 pm
ಬೆಳ್ತಂಗಡಿ ; ಕಾಲೇಜು ತೆರಳುತ್ತಿದ್ದ ಅಪ್ರಾಪ್ತ ಯುವತ...
09-02-26 11:26 am