ಬ್ರೇಕಿಂಗ್ ನ್ಯೂಸ್
11-09-24 12:56 pm Mangalore Correspondent ಕರಾವಳಿ
ಉಳ್ಳಾಲ, ಸೆ. 11: ಭಾರಿ ಗಾತ್ರದ ಹಸುವೊಂದು ಏಕಾಏಕಿ ಹುಚ್ಚೆದ್ದು ಮನೆಯೊಂದರ ಆವರಣಕ್ಕೆ ನುಗ್ಗಿ ದಾಂಧಲೆ ನಡೆಸಿದಲ್ಲದೆ, ರಸ್ತೆಯಲ್ಲಿ ತೆರಳುತ್ತಿದ್ದ ಸ್ಕೂಟರ್, ಮಹಿಳೆ ಸೇರಿದಂತೆ ಅನೇಕರಿಗೆ ತಿವಿದು ಗಾಯಗೊಳಿಸಿರುವ ಘಟನೆ ಸೋಮೇಶ್ವರ ಬಳಿ ನಡೆದಿದೆ. ಸ್ಥಳೀಯರು ಬಳಿಕ ಹರಸಾಹಸ ಪಟ್ಟು ಹಸುವನ್ನ ಹಿಡಿದಿದ್ದು, ಪಶು ವೈದ್ಯರು ಅರಿವಳಿಕೆ ನೀಡಿದ ಕೆಲವೇ ಹೊತ್ತಿನಲ್ಲಿ ಹಸು ಮೃತಪಟ್ಟಿದ್ದರಿಂದ ರೇಬೀಸ್ ಸೋಂಕಿನ ಬಗ್ಗೆ ಶಂಕೆ ವ್ಯಕ್ತವಾಗಿದೆ.
ಸೋಮೇಶ್ವರ ದ್ವಾರದ ಬಳಿಯ ನಿವಾಸಿಯೋರ್ವರಿಗೆ ಸೇರಿದ ಹಸು ಏಕಾಏಕಿ ಹುಚ್ಚೆದ್ದ ರೀತಿ ವರ್ತಿಸಿದ್ದು ಸ್ಥಳೀಯರನ್ನು ಭಯಭೀತಗೊಳಿಸಿದೆ. ಮೇಯಲು ಬಿಟ್ಟಿದ್ದ ಹಸು ನಿನ್ನೆ ಸಂಜೆ ಏಕಾಏಕಿ ಹುಚ್ಚೆದ್ದು ಮಹಿಳೆಯೋರ್ವರಿಗೆ ತಿವಿದಿದೆ. ಅಲ್ಲಿಂದ ಮುಂದಕ್ಕೆ ಓಡಿದ ಹಸುವು ಕೊಲ್ಯ ಮೂಕಾಂಬಿಕಾ ದೇವಸ್ಥಾನದ ಬಳಿಗೆ ಸಾಗಿ ಸ್ಕೂಟರ್ ಒಂದಕ್ಕೆ ತಿವಿದಿದ್ದು , ಸಿಕ್ಕ, ಸಿಕ್ಕವರ ಮೇಲೆ ದಾಳಿ ನಡೆಸಿದೆ. ಅಲ್ಲಿದ್ದ ಮನೆಯ ಆವರಣ ಗೋಡೆಯೊಳಕ್ಕೆ ನುಗ್ಗಿ ಧಾಂದಲೆ ನಡೆಸಿದೆ.


ಭಯಗೊಂಡ ಸ್ಥಳೀಯರು ಸೋಮೇಶ್ವರ ಪುರಸಭಾ ಉಪಾಧ್ಯಕ್ಷ ರವಿಶಂಕರ್ ಅವರಲ್ಲಿ ವಿಚಾರ ತಿಳಿಸಿದ್ದಾರೆ. ರವಿಶಂಕರ್ ಅವರು ಅರಣ್ಯ ಇಲಾಖೆ ಅಧಿಕಾರಿಗಳನ್ನು ಬರಲು ತಿಳಿಸಿದ್ದು ಅಧಿಕಾರಿಗಳು ಅದು ನಮ್ಮ ಕೆಲಸವಲ್ಲ ಅಂತ ಹೇಳಿ ಜಾರಿಕೊಂಡಿದ್ದಾರೆ. ವಿಧಿಯಿಲ್ಲದೆ ರವಿಶಂಕರ್ ಅವರೇ ಸ್ಥಳೀಯರ ಜತೆ ಸೇರಿ ಬಹಳ ಹರಸಾಹಸ ಪಟ್ಟು ಹಗ್ಗದಿಂದ ಧಾಂದಲೆ ನಡೆಸುತ್ತಿದ್ದ ಹಸುವನ್ನ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ಹಸುವಿನ ವಿಚಾರ ಸ್ಥಳೀಯ ಶಾಸಕ ಯು.ಟಿ.ಖಾದರ್ ಗಮನಕ್ಕೂ ಬಂದಿದ್ದು ಕೂಡಲೇ ಸ್ಥಳಕ್ಕೆ ಪಶು ವೈದ್ಯಾಧಿಕಾರಿಗಳ ತಂಡವನ್ನ ರವಾನಿಸಿದ್ದಾರೆ. ಸ್ಥಳೀಯರು ಹಿಡಿದ ಹಸುವಿಗೆ ಪಶು ವೈದ್ಯರು ಅರಿವಳಿಕೆ ಚುಚ್ಚುಮದ್ದು ನೀಡಿದ್ದು ಕೆಲ ಹೊತ್ತಲ್ಲೇ ಹಸು ಸಾವನ್ನಪ್ಪಿದೆ.
ಬಹುತೇಕ ರೇಬೀಸ್ ಕಾಯಿಲೆಯಿಂದಲೇ ಹುಚ್ಚೆದ್ದು ಧಾಂದಲೆ ನಡೆಸಿರುವುದಾಗಿ ಕೋಟೆಕಾರು ಸರಕಾರಿ ಪಶು ಆಸ್ಪತ್ರೆಯ ಪಶು ವೈಧ್ಯಾಧಿಕಾರಿ ಡಾ.ಗಜೇಂದ್ರ ಕುಮಾರ್ ಶಂಕೆ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಅಧಿಕೃತವಾಗಿ ಧೃಢೀಕರಿಸಲು ದನದ ಮೆದುಳನ್ನ ಪ್ರಯೋಗಾಲಯಕ್ಕೆ ಕಳುಹಿಸ ಬೇಕಾಗುತ್ತದೆ. ಆದರೆ ಅದಕ್ಕೆ ಹಸುವಿನ ಮಾಲಕರು ಒಪ್ಪಿಗೆ ನೀಡಬೇಕು. ಹುಚ್ಚು ನಾಯಿಯ ಕಡಿತದಿಂದ ರೇಬೀಸ್ ಆವರಿಸಿರಬಹುದು. ರೇಬೀಸ್ ಆವರಿಸಿದರೆ ಹಸು ಹೆಚ್ಚು ಕಾಲ ಬದುಕಲು ಸಾಧ್ಯವಿಲ್ಲ. ಹಸುವಿನಿಂದ ನೇರವಾಗಿ ರೇಬಿಸ್ ಹರಡುವುದು ಕಡಿಮೆ. ಆದರೆ, ಅದರ ಜೊಲ್ಲು ತೆರೆದ ಗಾಯಕ್ಕೆ ತಗುಲಿದರೆ ಮಾತ್ರ ರೇಬೀಸ್ ಹರಡಲು ಸಾಧ್ಯವಿದೆ ಎಂದು ಗಜೇಂದ್ರ ಕುಮಾರ್ ಹೇಳಿದ್ದಾರೆ.
Mangalore Rabies attack on cow, attacks residents in Someshwara, forest officals trap cow after long rescue operation but the cow was later found dead.
15-01-26 05:56 pm
HK News Desk
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
15-01-26 10:24 pm
Mangalore Correspondent
ಗೋ ಸೇವೆಗೆ ಜನಸಾಮಾನ್ಯರು ಕೊಡುಗೆ ನೀಡಲು ವೇದಿಕೆ ; ಕ...
15-01-26 10:07 pm
ದಕ್ಷಿಣ ಕನ್ನಡದ ಸರ್ಕಾರಿ ಶಾಲೆಗಳಿಗೆ ಇಸ್ರೇಲ್ ಡಿಜಿ...
15-01-26 09:04 pm
ಮನರೇಗಾ ಜಾರಿಗೆ ಒತ್ತಾಯಿಸಿ ಸುಳ್ಯದಿಂದ ಮುಲ್ಕಿಗೆ ಪಾ...
15-01-26 08:12 pm
ಜ.18ರಂದು ಮಂಗಳೂರಿನಲ್ಲಿ ಪ್ರಪ್ರಥಮ ಜಾಗತಿಕ ಬಿಲ್ಲವರ...
15-01-26 04:01 pm
15-01-26 11:07 pm
Bangalore Correspondent
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm