ಬ್ರೇಕಿಂಗ್ ನ್ಯೂಸ್
11-09-24 06:10 pm Mangalore Correspondent ಕರಾವಳಿ
ಮಂಗಳೂರು, ಸೆ.11: ನಗರದ ಹಂಪನಕಟ್ಟೆ ಬಸ್ ನಿಲ್ದಾಣವನ್ನು ಏಕಾಏಕಿ ತೆರವುಗೊಳಿಸಿದ್ದನ್ನು ವಿರೋಧಿಸಿ ಎಬಿವಿಪಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿ, ಘೆರಾವ್ ಹಾಕಿದ್ದಾರೆ. ಈ ವೇಳೆ ರಸ್ತೆ ತಡೆಗೆ ಯತ್ನಿಸಿದ ವಿದ್ಯಾರ್ಥಿಗಳನ್ನು ಪೊಲೀಸರು ಲಾಠಿ ಬೀಸಿ ಚದುರಿಸಿದ್ದಾರೆ.
ಹಂಪನಕಟ್ಟೆಯ ಬಸ್ಸು ತಂಗುದಾಣವನ್ನು ಏಕಾಏಕಿ ತೆರವುಗೊಳಿಸಿ ವಿದ್ಯಾರ್ಥಿ ಸಮುದಾಯಕ್ಕೆ ಆಗಿರುವ ಸಮಸ್ಯೆ ಕುರಿತು ಈ ಹಿಂದೆ ಜಿಲ್ಲಾಧಿಕಾರಿ ಹಾಗೂ ಮಹಾನಗರ ಪಾಲಿಕೆಯ ಆಯುಕ್ತರಿಗೆ ಮನವಿ ನೀಡಲಾಗಿತ್ತು. ಆದರೂ ಸಮಸ್ಯೆ ಬಗೆಹರಿಯದ್ದನ್ನು ಖಂಡಿಸಿ ಕ್ಲಾಕ್ ಟವರ್ ಬಳಿ ವಿದ್ಯಾರ್ಥಿಗಳು ಧರಣಿ ಕುಳಿತು ಪ್ರತಿಭಟನೆ ನಡೆಸಿದರು.
ಹಂಪನಕಟ್ಟೆಯಲ್ಲಿ ತೆರವುಗೊಳಿಸಿದ ಪ್ರಯಾಣಿಕರ ತಂಗುದಾಣವನ್ನು ಮತ್ತೆ ನಿರ್ಮಿಸಬೇಕು. ಈ ಬಗ್ಗೆ ಜಿಲ್ಲಾಧಿಕಾರಿ ಹಾಗೂ ಪಾಲಿಕೆ ಆಯುಕ್ತರು ಸ್ಥಳಕ್ಕೆ ಬಂದು ಭರವಸೆ ನೀಡಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು. ಸುಮಾರು ಅರ್ಧ ಗಂಟೆ ಕಳೆದ ಬಳಿಕವೂ ಸ್ಥಳಕ್ಕೆ ಯಾವ ಅಧಿಕಾರಿಗಳೂ ಬರದೇ ಇದ್ದುದನ್ನು ಕಂಡು ಸಿಟ್ಟಿಗೆದ್ದ ಪ್ರತಿಭಟನಕಾರರು ಏಕಾಏಕಿ ರಸ್ತೆಗೆ ನುಗ್ಗಿ ವಾಹನ ಸಂಚಾರಕ್ಕೆ ಅಡ್ಡಿಪಡಿಸಲು ಯತ್ನಿಸಿದರು. ಸ್ಥಳದಲ್ಲಿದ್ದ ಪೊಲೀಸರು ಇದಕ್ಕೆ ಅವಕಾಶ ಕಲ್ಪಿಸಲಿಲ್ಲ. ರಸ್ತೆಗಿಳಿದ ವಿದ್ಯಾರ್ಥಿಗಳ ಮೇಲೆ ಲಘು ಲಾಠಿ ಪ್ರಹಾರ ನಡೆಸಿ ಚದುರಿಸಿದರು.
ಕೊನೆಗೆ, ವಿದ್ಯಾರ್ಥಿಗಳ ಆಗ್ರಹಕ್ಕೆ ಮಣಿದು ಮಂಗಳೂರು ತಹಸೀಲ್ದಾರ್ ಸ್ಥಳಕ್ಕೆ ಆಗಮಿಸಿದ್ದು ಬಸ್ ತಂಗುದಾಣ ಸಮಸ್ಯೆಯನ್ನ ಕೂಡಲೇ ಬಗೆಹರಿಸುವುದಾಗಿ ಭರವಸೆ ನೀಡಿದರು. ಎಬಿವಿಪಿ ಜಿಲ್ಲಾ ಸಂಚಾಲಕ ಸುವಿತ್ ಶೆಟ್ಟಿ, ತಾಲೂಕು ಸಂಚಾಲಕ ಶ್ರೇಯಸ್, ಮೋನಿಶ್, ಪ್ರತೀಕ್, ಶಶಾಂಕ್, ನಿಖಿತ್, ಸಾತ್ವಿಕ್ ಇನ್ನಿತರರು ನೇತೃತ್ವ ವಹಿಸಿದ್ದರು.
Mangalore Abvp protests over removal of bus stand near hampanakatta, police resorted to lati charge.
22-04-25 10:15 pm
Bangalore Correspondent
30 ವರ್ಷಗಳಲ್ಲಿ ಮುಸ್ಲಿಮರು, ಪರಿಶಿಷ್ಟರ ಸಂಖ್ಯೆ ದುಪ...
22-04-25 10:13 pm
Bidar SSLC Student, Blackmail: ಫುಲ್ ಮಾರ್ಕ್ ಕೊ...
22-04-25 02:37 pm
ಜನಿವಾರ ತೆಗೆಸಿರುವ ಕ್ರಮ ನಿಯಮಬಾಹಿರ, ಧಾರ್ಮಿಕ ನಂಬಿ...
22-04-25 01:00 pm
R Ashok, Census Probe: ಜಾತಿಗಣತಿ ವರದಿಯೇ ನಕಲಿ,...
21-04-25 07:27 pm
22-04-25 10:33 pm
HK News Desk
Rahul Gandhi, BJP : ಅಮೆರಿಕದಲ್ಲಿ ನಿಂತು ಭಾರತದ ಚ...
22-04-25 07:13 pm
Next Pope: ರೋಮನ್ ಕ್ಯಾಥೋಲಿಕ್ ಚರ್ಚ್ನ 266ನೇ ಪೋಪ...
21-04-25 07:46 pm
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
22-04-25 07:37 pm
Bangalore Correspondent
IPS Om Prakash Murder, Update: ನಿವೃತ್ತ ಡಿಜಿಪಿ...
22-04-25 03:26 pm
Om Prakash IPS Murder, Wife arrest: ನಿವೃತ್ತ ಡ...
21-04-25 01:03 pm
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm