ಬ್ರೇಕಿಂಗ್ ನ್ಯೂಸ್
11-09-24 06:10 pm Mangalore Correspondent ಕರಾವಳಿ
ಮಂಗಳೂರು, ಸೆ.11: ನಗರದ ಹಂಪನಕಟ್ಟೆ ಬಸ್ ನಿಲ್ದಾಣವನ್ನು ಏಕಾಏಕಿ ತೆರವುಗೊಳಿಸಿದ್ದನ್ನು ವಿರೋಧಿಸಿ ಎಬಿವಿಪಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿ, ಘೆರಾವ್ ಹಾಕಿದ್ದಾರೆ. ಈ ವೇಳೆ ರಸ್ತೆ ತಡೆಗೆ ಯತ್ನಿಸಿದ ವಿದ್ಯಾರ್ಥಿಗಳನ್ನು ಪೊಲೀಸರು ಲಾಠಿ ಬೀಸಿ ಚದುರಿಸಿದ್ದಾರೆ.
ಹಂಪನಕಟ್ಟೆಯ ಬಸ್ಸು ತಂಗುದಾಣವನ್ನು ಏಕಾಏಕಿ ತೆರವುಗೊಳಿಸಿ ವಿದ್ಯಾರ್ಥಿ ಸಮುದಾಯಕ್ಕೆ ಆಗಿರುವ ಸಮಸ್ಯೆ ಕುರಿತು ಈ ಹಿಂದೆ ಜಿಲ್ಲಾಧಿಕಾರಿ ಹಾಗೂ ಮಹಾನಗರ ಪಾಲಿಕೆಯ ಆಯುಕ್ತರಿಗೆ ಮನವಿ ನೀಡಲಾಗಿತ್ತು. ಆದರೂ ಸಮಸ್ಯೆ ಬಗೆಹರಿಯದ್ದನ್ನು ಖಂಡಿಸಿ ಕ್ಲಾಕ್ ಟವರ್ ಬಳಿ ವಿದ್ಯಾರ್ಥಿಗಳು ಧರಣಿ ಕುಳಿತು ಪ್ರತಿಭಟನೆ ನಡೆಸಿದರು.




ಹಂಪನಕಟ್ಟೆಯಲ್ಲಿ ತೆರವುಗೊಳಿಸಿದ ಪ್ರಯಾಣಿಕರ ತಂಗುದಾಣವನ್ನು ಮತ್ತೆ ನಿರ್ಮಿಸಬೇಕು. ಈ ಬಗ್ಗೆ ಜಿಲ್ಲಾಧಿಕಾರಿ ಹಾಗೂ ಪಾಲಿಕೆ ಆಯುಕ್ತರು ಸ್ಥಳಕ್ಕೆ ಬಂದು ಭರವಸೆ ನೀಡಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು. ಸುಮಾರು ಅರ್ಧ ಗಂಟೆ ಕಳೆದ ಬಳಿಕವೂ ಸ್ಥಳಕ್ಕೆ ಯಾವ ಅಧಿಕಾರಿಗಳೂ ಬರದೇ ಇದ್ದುದನ್ನು ಕಂಡು ಸಿಟ್ಟಿಗೆದ್ದ ಪ್ರತಿಭಟನಕಾರರು ಏಕಾಏಕಿ ರಸ್ತೆಗೆ ನುಗ್ಗಿ ವಾಹನ ಸಂಚಾರಕ್ಕೆ ಅಡ್ಡಿಪಡಿಸಲು ಯತ್ನಿಸಿದರು. ಸ್ಥಳದಲ್ಲಿದ್ದ ಪೊಲೀಸರು ಇದಕ್ಕೆ ಅವಕಾಶ ಕಲ್ಪಿಸಲಿಲ್ಲ. ರಸ್ತೆಗಿಳಿದ ವಿದ್ಯಾರ್ಥಿಗಳ ಮೇಲೆ ಲಘು ಲಾಠಿ ಪ್ರಹಾರ ನಡೆಸಿ ಚದುರಿಸಿದರು.
ಕೊನೆಗೆ, ವಿದ್ಯಾರ್ಥಿಗಳ ಆಗ್ರಹಕ್ಕೆ ಮಣಿದು ಮಂಗಳೂರು ತಹಸೀಲ್ದಾರ್ ಸ್ಥಳಕ್ಕೆ ಆಗಮಿಸಿದ್ದು ಬಸ್ ತಂಗುದಾಣ ಸಮಸ್ಯೆಯನ್ನ ಕೂಡಲೇ ಬಗೆಹರಿಸುವುದಾಗಿ ಭರವಸೆ ನೀಡಿದರು. ಎಬಿವಿಪಿ ಜಿಲ್ಲಾ ಸಂಚಾಲಕ ಸುವಿತ್ ಶೆಟ್ಟಿ, ತಾಲೂಕು ಸಂಚಾಲಕ ಶ್ರೇಯಸ್, ಮೋನಿಶ್, ಪ್ರತೀಕ್, ಶಶಾಂಕ್, ನಿಖಿತ್, ಸಾತ್ವಿಕ್ ಇನ್ನಿತರರು ನೇತೃತ್ವ ವಹಿಸಿದ್ದರು.
Mangalore Abvp protests over removal of bus stand near hampanakatta, police resorted to lati charge.
27-05-26 06:26 pm
HK News Staffer
ನಾಗಲಕ್ಷ್ಮಿಗೆ ಸುತ್ತಿಕೊಂಡ ಮತ್ತೊಂದು ವಿವಾದ ; ಉಡುಪ...
27-05-26 04:58 pm
ಡಿಕೆಗೆ ಪಟ್ಟ ; ಬಹುತೇಕ ಸಚಿವರಿಗೆ ಕೊಕ್- ಹೊಸಬರಿಗೆ...
27-05-26 01:41 pm
ರಾಜ್ಯ ರಾಜಕೀಯದಲ್ಲಿ ಭಾರೀ ಕ್ಲೈಮ್ಯಾಕ್ಸ್ ; ಸಿಎಂ ಸಿ...
26-05-26 11:03 pm
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
27-05-26 12:29 pm
HK News Desk
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
27-05-26 08:34 pm
HK News Staffer
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm
ಪ್ರಿಯಕರನ ಕಿರುಕುಳ ; ಮುಂಬೈನಲ್ಲಿ ರೇಡಿಯೋ ಜಾಕಿಯಾಗಿ...
27-05-26 12:42 pm
ಇಸ್ರೇಲ್ನಿಂದ ರಜೆ ಮೇಲೆ ಊರಿಗೆ ಬಂದವನ ದುರಂತ ಅಂತ್ಯ...
26-05-26 02:43 pm