ಬ್ರೇಕಿಂಗ್ ನ್ಯೂಸ್
12-09-24 08:24 pm Mangalore Correspondent ಕರಾವಳಿ
ಮಂಗಳೂರು, ಸೆ.12: ಮುಂದಿನ ವಾರ ಈದ್ ಮಿಲಾದ್ ಮೆರವಣಿಗೆ ನಡೆಸುವುದಕ್ಕೆ ರಾಜ್ಯದಲ್ಲಿ ಅವಕಾಶ ನೀಡಬಾರದು. ಈದ್ ಮಿಲಾದ್ ಮೆರವಣಿಗೆಯನ್ನು ರಸ್ತೆಯಲ್ಲಿ ಮಾಡುವಾಗ, ಒಂದ್ವೇಳೆ ಹಿಂದುಗಳು ಅವಕಾಶ ನೀಡದಿದ್ದರೆ ಜಿಹಾದಿಗಳ ಮೆರವಣಿಗೆ ನಡೆಯುವುದಕ್ಕೆ ಸಾಧ್ಯವಿಲ್ಲ. ಕಳೆದ ಬಾರಿ ಶಿವಮೊಗ್ಗದ ರಾಗಿಗುಡ್ಡದಲ್ಲಿ ಈದ್ ಮೆರವಣಿಗೆ ವೇಳೆ ಗಲಭೆ ನಡೆಸಿದ್ದರು. ಈ ಬಾರಿಯೂ ರಾಜ್ಯದಲ್ಲಿ ಗಲಭೆ ಮರುಕಳಿಸುವ ಸಾಧ್ಯತೆಯಿದೆ. ಹೀಗಾಗಿ ಈ ಬಾರಿ ಈದ್ ಮೆರವಣಿಗೆ ನಡೆಸುವುದಕ್ಕೆ ರಾಜ್ಯ ಸರಕಾರ ಅವಕಾಶ ನೀಡಬಾರದು ಎಂದು ವಿಶ್ವ ಹಿಂದು ಪರಿಷತ್ ಮುಖಂಡ ಶರಣ್ ಪಂಪ್ವೆಲ್ ಆಗ್ರಹಿಸಿದ್ದಾರೆ.
ಮಂಡ್ಯದ ನಾಗಮಂಗಲದಲ್ಲಿ ಗಣಪತಿ ವಿಸರ್ಜನೆ ವೇಳೆ ಕಲ್ಲು ತೂರಿ ಗಲಭೆ ನಡೆಸಿರುವುದನ್ನು ಖಂಡಿಸಿ ಮಂಗಳೂರಿನ ಮಲ್ಲಿಕಟ್ಟೆ ವೃತ್ತದಲ್ಲಿ ನಡೆದ ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದರು. ಈ ಬಾರಿ ಈದ್ ಮೆರವಣಿಗೆಯ ಮೇಲೆ ನಿರ್ಬಂಧ ಹೇರಬೇಕು, ಒಂದ್ವೇಳೆ ಮೆರವಣಿಗೆಗೆ ಅವಕಾಶ ಕೊಟ್ಟು ಹಿಂದುಗಳ ಮೇಲೆ ಹಲ್ಲೆ ಘಟನೆಗಳಾದಲ್ಲಿ ಅದಕ್ಕೆ ರಾಜ್ಯ ಸರಕಾರವೇ ಕಾರಣವಾಗುತ್ತದೆ ಎಂದು ಹೇಳಿದರು.
ನಾಗಮಂಗಲ ಗಲಭೆಯ ಹಿಂದೆ ಯಾರಿದ್ದಾರೆ, ಪಿಎಫ್ಐ ಸಂಘಟನೆಯ ಕೈವಾಡ ಇದೆಯೇ ಎನ್ನುವ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಯಬೇಕು. ಅಲ್ಲಿ ನೂರಾರು ಹಿಂದುಗಳ ಮೇಲೆ ಹಲ್ಲೆಯಾಗಿದೆ, ಹತ್ತಾರು ಅಂಗಡಿಗಳಿಗೆ ಬೆಂಕಿ ಕೊಟ್ಟಿದ್ದಾರೆ. ಸಾರ್ವಜನಿಕ ಆಸ್ತಿ ಮೇಲೆ ಹಾನಿ ಮಾಡಿದ್ದಾರೆ. ನಷ್ಟ ಆದವರಿಗೆ ಪರಿಹಾರ ನೀಡಬೇಕು. ಯಾರು ಮುಗ್ಧ ಅಮಾಯಕರ ಮೇಲೆ ಕೇಸು ಹಾಕಿದ್ದೀರಿ, ಅವರ ಮೇಲಿನ ಕೇಸನ್ನು ವಾಪಸ್ ಪಡೆಯಬೇಕು ಎಂದು ಆಗ್ರಹಿಸಿದ ಶರಣ್, ನಮಗೆ ರಾಜ್ಯ ಸರಕಾರ, ರಾಜ್ಯದ ಪೊಲೀಸರ ಮೇಲೆ ನಂಬಿಕೆ ಇಲ್ಲ. ಹಾಗಾಗಿ ನಮ್ಮ ಧಾರ್ಮಿಕ ಕಾರ್ಯಕ್ರಮಗಳಿಗೆ ರಕ್ಷಣೆ ನೀಡುವಂತೆ ಕೇಂದ್ರ ಗೃಹ ಸಚಿವರಿಗೆ ಮನವಿ ಮಾಡುತ್ತೇವೆ. ಪೊಲೀಸರ ಬದಲು ಕೇಂದ್ರದ ಮಿಲಿಟರಿಯ ರಕ್ಷಣೆ ನೀಡಬೇಕೆಂದು ಕೇಳಿಕೊಳ್ಳುತ್ತೇವೆ ಎಂದು ಹೇಳಿದ್ದಾರೆ.
Don't give permission for Eid says Sharan Pumpwell, VHP in Mangalore. Says tense situations like Ragi gudda might re appear.
13-07-25 08:37 pm
HK News Desk
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
ಬೀದಿನಾಯಿಗಳಿಗೆ ಬಿರಿಯಾನಿ ಭಾಗ್ಯ ; ಶಾಲೆಗಳಲ್ಲಿ ಮಕ...
12-07-25 07:07 pm
ಧರ್ಮಸ್ಥಳ ಘಟನೆ ; ಒಬ್ಬ ವ್ಯಕ್ತಿಯ ಪರವಾಗಿ ವಕೀಲರು ದ...
11-07-25 06:36 pm
12-07-25 09:25 pm
HK News Desk
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
1500ಕ್ಕೂ ಹೆಚ್ಚು ಹಿಂದು ಮಹಿಳೆಯರನ್ನು ಇಸ್ಲಾಮಿಗೆ ಮ...
10-07-25 11:07 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm