ಬ್ರೇಕಿಂಗ್ ನ್ಯೂಸ್
12-09-24 10:21 pm Mangalore Correspondent ಕರಾವಳಿ
ಮಂಗಳೂರು, ಸೆ.12: ಖಾಸಗಿ ಸಿಟಿ ಬಸ್ಸಿನಲ್ಲಿ ಪ್ರಯಾಣಿಕರು ತುಂಬಿಕೊಂಡಿದ್ದರಿಂದ ವಿದ್ಯಾರ್ಥಿಗಳು ಫುಟ್ ಬೋರ್ಡಿನಲ್ಲಿ ನೇತಾಡುತ್ತ ತೆರಳುವ ವಿಡಿಯೋ ವೈರಲ್ ಆಗಿತ್ತು. ಈ ಬಗ್ಗೆ ಹೆಡ್ ಲೈನ್ ಕರ್ನಾಟಕ ವಿಡಿಯೋ ಸಹಿತ ಸುದ್ದಿ ಪ್ರಸಾರ ಮಾಡಿತ್ತು. ಇದರಿಂದ ಎಚ್ಚೆತ್ತುಕೊಂಡ ದಕ್ಷಿಣ ಸಂಚಾರಿ ಠಾಣೆ ಪೊಲೀಸರು ಬಸ್ಸಿನ ಚಾಲಕ ಮತ್ತು ನಿರ್ವಾಹಕನ ವಿರುದ್ಧ ಕೇಸು ದಾಖಲಿಸಿದ್ದಾರೆ.
ತಲಪಾಡಿಯಿಂದ ಮಂಗಳೂರಿಗೆ ಬರುತ್ತಿದ್ದ 42 ನಂಬರಿನ ಖಾಸಗಿ ಸಿಟಿ ಬಸ್ ತೊಕ್ಕೊಟ್ಟು ಓವರ್ ಬ್ರಿಡ್ಜ್ ಬಳಿಗೆ ತಲುಪಿದಾಗ, ಬ್ರೇಕ್ ಹಾಕಿ ಬಸ್ಸನ್ನು ನಿಲ್ಲಿಸಿದ್ದು ಈ ವೇಳೆ ಫುಡ್ ಬೋರ್ಡಿನಲ್ಲಿ ನೇತಾಡುತ್ತಿದ್ದ ವಿದ್ಯಾರ್ಥಿಯೊಬ್ಬ ಹೊರಕ್ಕೆಸೆಯಲ್ಪಟ್ಟು ರಸ್ತೆಗೆ ಬಿದ್ದಿದ್ದ. ಇದರ ವಿಡಿಯೋವನ್ನು ಹಿಂದಿನಿಂದ ಬರುತ್ತಿದ್ದ ಆಟೋ ಚಾಲಕರೊಬ್ಬರು ಸೆರೆಹಿಡಿದಿದ್ದು ಅಪಘಾತ ಆದರೆ ಯಾರು ಹೊಣೆಯೆಂದು ಪ್ರಶ್ನಿಸಿ ಜಾಲತಾಣದಲ್ಲಿ ಹರಿಯಬಿಟ್ಟಿದ್ದರು.
ವಿಡಿಯೋ ಆಧರಿಸಿ ಹೆಡ್ ಲೈನ್ ಕರ್ನಾಟಕ ಈ ಬಗ್ಗೆ ಪೊಲೀಸರನ್ನು ಪ್ರಶ್ನಿಸಿ ಸುದ್ದಿ ಪ್ರಕಟಿಸಿದ್ದಲ್ಲದೆ, ಟ್ವಿಟರ್ ನಲ್ಲಿ ವಿಡಿಯೋವನ್ನು ಮಂಗಳೂರು ಪೊಲೀಸ್ ಕಮಿಷನರ್ ಮತ್ತು ಎಡಿಜಿಪಿ ಅಲೋಕ್ ಕುಮಾರ್ ಗೆ ಟ್ಯಾಗ್ ಮಾಡಿತ್ತು. ಇದರಿಂದ ಅಲರ್ಟ್ ಆಗಿರುವ ಮಂಗಳೂರು ಕಮಿಷನರ್ ಅನುಪಮ್ ಅಗರ್ವಾಲ್, ಬಸ್ಸಿನ ಸಿಬಂದಿ ವಿರುದ್ಧ ಪ್ರಕರಣ ದಾಖಲಿಸಲು ಸೂಚಿಸಿದ್ದಾರೆ. ವಿಡಿಯೋ ಆಧರಿಸಿ ಸುಮೊಟೊ ಪ್ರಕರಣ ದಾಖಲಿಸಲು ಅವಕಾಶ ಇದ್ದರೂ, ದಕ್ಷಿಣ ಸಂಚಾರಿ ಠಾಣೆ ಪೊಲೀಸರು ಆಟೋ ಚಾಲಕನಲ್ಲಿಯೇ ದೂರು ಪಡೆದು ಪ್ರಕರಣ ದಾಖಲಿಸಿದ್ದಾರೆ.
ಬಸ್ಸಿನ ಚಾಲಕ ಮಹಮ್ಮದ್ ಫಯಾಜ್ ಮತ್ತು ನಿರ್ವಾಹಕ ಮನೀಶ್ ತೀರಾ ನಿರ್ಲಕ್ಷ್ಯದಿಂದ ಪ್ರಯಾಣಿಕರನ್ನು ತುಂಬಿಸಿಕೊಂಡು ಹೋಗಿದ್ದಾರೆ. ಇದರಿಂದ ಪ್ರಯಾಣಿಕರ ಜೀವಕ್ಕೆ ಅಪಾಯಕ್ಕೀಡು ಮಾಡುವಂತೆ ವರ್ತಿಸಿದ್ದಾರೆ ಎಂದು ಕೇಸು ದಾಖಲಾಗಿದೆ.
We appreciate #AnupamAgarwal, the Commissioner of #Mangalore City #Police, for taking prompt action against the overloading of a bus on footrests on Route No. 42, St. Antony Travels. #Mangalorenews @compolmlr @alokkumar6994 pic.twitter.com/4TrzrE7a6u
— Headline Karnataka (@hknewsonline) September 12, 2024
Mangalore St Antony bus driver and conductor booked by traffic police after Headline Karnataka news video goes viral on overloading.
27-07-25 01:09 pm
HK News Desk
ದಾವಣಗೆರೆ ; ಸರ್ಕಾರಿ ಜಾಗದಲ್ಲಿ ಬೆಳೆದ ಬೆಳೆ ತೆರವು...
26-07-25 02:00 pm
IPS Officer Soumya Latha, Dharmasthala SIT:...
25-07-25 04:07 pm
Jeep Chikkamagaluru Accident: ನಿಯಂತ್ರಣ ತಪ್ಪಿ...
25-07-25 01:22 pm
ಪೊಲೀಸ್ ಠಾಣೆಯಲ್ಲೇ ಲ್ಯಾಂಡ್ ಡಿಲಿಂಗ್ ; ಜಾಗದ ವಿಚಾರ...
25-07-25 12:25 pm
26-07-25 03:31 pm
HK News Desk
ಹದಗೆಟ್ಟ ಸುರತ್ಕಲ್ - ಬಿ.ಸಿ. ರೋಡ್ ಹೆದ್ದಾರಿ ನಿರ...
25-07-25 04:40 pm
Mangalore MP Brijesh Chowta: ಮಂಗಳೂರಿನಲ್ಲಿ ಮೆರ...
24-07-25 09:06 pm
Supreme Court, Actor Darshan, Murder case: ನಟ...
24-07-25 07:54 pm
3,000 ಕೋಟಿ ಸಾಲ ವಂಚನೆ ಕೇಸ್ ; ಅನಿಲ್ ಅಂಬಾನಿ ಮೇಲ...
24-07-25 03:29 pm
27-07-25 09:58 pm
Mangalore Correspondent
Mangalore Police, Ravi Pujari: ಮಂಗಳೂರಿನ ಬಿಲ್ಡ...
27-07-25 08:56 pm
Dharmasthala Case, SIT, ADGP Pranav Mohanty:...
27-07-25 08:14 pm
Dharmasthala Case, Sowjanya case, Mangalore:...
27-07-25 07:49 pm
Mangalore Congress: ದಕ್ಷಿಣ ಕನ್ನಡ ಜಿಲ್ಲಾ ಕಾಂಗ್...
26-07-25 10:41 pm
27-07-25 08:39 pm
Mangalore Correspondent
ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಯುವತಿಯನ್ನ ಆಸ್ಪತ್ರೆಗ...
27-07-25 07:13 pm
Bangalore Murder, Two Children Killed, Crime:...
27-07-25 03:26 pm
ಸೈಬರ್ ವಂಚಕರ ಜಾಲಕ್ಕೆ ನಕಲಿ ಬ್ಯಾಂಕ್ ಖಾತೆ ಪೂರೈಕೆ...
26-07-25 09:35 pm
ಮನೆಗೆ ದಿನಸಿ ತರಲು ಹೋದ ಯುವತಿಗೆ ನಡು ರಸ್ತೆಯಲ್ಲೇ ತ...
24-07-25 10:38 pm