ಬ್ರೇಕಿಂಗ್ ನ್ಯೂಸ್

Satish Kumpala, Mangalore: ಉಸ್ತುವಾರಿ ಸಚಿವರು ಎಲ್ಲಿ ನಿದ್ದೆ ಮಾಡುತ್ತಿದ್ದಾರೆ, ಕಿಡಿಗೇಡಿ ಸವಾಲು ಹಾಕಿದ್ದನ್ನು ಪ್ರಶ್ನಿಸಿದರೆ ಎಫ್ಐಆರ್ ದಾಖಲಿಸುತ್ತಾರೆ, ಪ್ಯಾಲೆಸ್ತೀನ್ ಧ್ವಜ ಹಾರಿಸಿದ್ರೆ ಕೇಸು ಮಾಡಲ್ಲ, ಶರಣ್ ಪಂಪ್ವೆಲ್ ಮಾತಾಡಿದ್ದರಲ್ಲಿ ತಪ್ಪೇನಿದೆ ? ಸತೀಶ್ ಕುಂಪಲ ಪ್ರಶ್ನೆ    |    Brijesh Chowta, Msez, JBF: ಎಂಎಸ್ಇಝೆಡ್‌ ಗೆ ಭೂಮಿ ಕೊಟ್ಟಿದ್ದ ಜೆಬಿಎಫ್ ಕಂಪೆನಿ ಕುಟುಂಬಸ್ಥರಿಗೆ ಕೊನೆಗೂ ಜಿಎಂಪಿಎಲ್‌ ನಲ್ಲಿ ಉದ್ಯೋಗ ; ಸಂಸದ ಕ್ಯಾ.ಚೌಟ ಮನವಿಗೆ ತುರ್ತು ಸ್ಪಂದಿಸಿ ಸಮಸ್ಯೆ ಬಗೆಹರಿಸಿದ ಕೇಂದ್ರ ಪೆಟ್ರೋಲಿಯಂ ಸಚಿವ    |    Udupi, Sunil Kumar, Kota srinivas, CM: ರಾಜ್ಯ ಸರ್ಕಾರದಿಂದ ಕರಾವಳಿ ಜಿಲ್ಲೆಗಳ ನಿರ್ಲಕ್ಷ್ಯ ; ಮುಖ್ಯಮಂತ್ರಿ ಮನೆ ಮುಂದೆ ಧರಣಿ ಕೂರುತ್ತೇವೆ, ಎರಡು ಜಿಲ್ಲೆಗಳಲ್ಲಿ ಜನಾಂದೋಲನಕ್ಕೆ ನಿರ್ಧಾರ    |   

Ullal, Mangalore, Suicide: ರಾತ್ರಿ ಊಟ ಮುಗಿಸಿ ಕೋಣೆ ಸೇರಿದ್ದ ಯುವಕ ನೇಣು ಬಿಗಿದು ಆತ್ಮಹತ್ಯೆ ; ಉಳ್ಳಾಲದ ಮಾಡೂರಿನಲ್ಲಿ ಘಟನೆ 

13-09-24 11:20 am       Mangalore Correspondent   ಕರಾವಳಿ

ಯುವಕನೋರ್ವ ರಾತ್ರಿ ಊಟ ಮುಗಿಸಿ ಕೋಣೆ ಸೇರಿದ ನಂತರ ನೇಣು ಬಿಗಿದು ಆತ್ಮಹತ್ಯೆಗೈದ ಘಟನೆ ಕೋಟೆಕಾರು ಪಟ್ಟಣ ಪಂಚಾಯತ್ ವ್ಯಾಪ್ತಿಯ ಮಾಡೂರಿನಲ್ಲಿ ನಡೆದಿದೆ. 

ಉಳ್ಳಾಲ, ಸೆ.13: ಯುವಕನೋರ್ವ ರಾತ್ರಿ ಊಟ ಮುಗಿಸಿ ಕೋಣೆ ಸೇರಿದ ನಂತರ ನೇಣು ಬಿಗಿದು ಆತ್ಮಹತ್ಯೆಗೈದ ಘಟನೆ ಕೋಟೆಕಾರು ಪಟ್ಟಣ ಪಂಚಾಯತ್ ವ್ಯಾಪ್ತಿಯ ಮಾಡೂರಿನಲ್ಲಿ ನಡೆದಿದೆ. 

ತಾರಿಪಡ್ಪು ವೈದ್ಯನಾಥ ದೇವಸ್ಥಾನದ ಬಳಿಯ ನಿವಾಸಿ ಶ್ರವಣ್ ಆಳ್ವ(25) ಆತ್ಮಹತ್ಯೆಗೈದ ಯುವಕ. ಉಮೇಶ್ ಆಳ್ವ ಎಂಬವರ ಕಿರಿಯ ಮಗನಾದ ಶ್ರವಣ್ ಎಲೆಕ್ಟ್ರೀಷಿಯನ್ ವೃತ್ತಿ ಮಾಡುತ್ತಿದ್ದ. ನಿನ್ನೆ  ರಾತ್ರಿ ಸ್ನೇಹಿತರೊಂದಿಗೆ ಹರಟೆ ಹೊಡೆದು ಎಂದಿಗಿಂತ ಬೇಗನೆ ಮನೆ ಸೇರಿದ್ದ ಶ್ರವಣ್ ಗೆ ಅಮ್ಮ ಊಟ ಬಡಿಸಿದ್ದರು. ಊಟ ಮಾಡಿ ಸ್ವಲ್ಪ ಹೊತ್ತು ಟಿ.ವಿ ನೋಡಿದ್ದ ಶ್ರವಣ್ ಬಳಿಕ ಬೆಡ್ ರೂಂ ಸೇರಿದ್ದನಂತೆ. ಮಧ್ಯರಾತ್ರಿ ಶ್ರವಣ್ ನ ಅಣ್ಣ ಕೆಲಸ ಮುಗಿಸಿ ಬಂದಾಗ ಶ್ರವಣ್ ಬೆಡ್ ರೂಮಿನ ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆಗೈದಿರುವುದು ಬೆಳಕಿಗೆ ಬಂದಿದೆ.

ಘಟನಾ ಸ್ಥಳಕ್ಕೆ ಉಳ್ಳಾಲ ಪೊಲೀಸರು ಭೇಟಿ ನೀಡಿದ್ದು ಮೃತದೇಹವನ್ನ ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದಿಲ್ಲ. ಮೃತ ಶರಣ್ ಅವಿವಾಹಿತನಾಗಿದ್ದು ತಾಯಿ, ತಂದೆ, ಸಹೋದರನನ್ನ ಅಗಲಿದ್ದಾನೆ.

25 year old youth commits suicide at Ullal in Mangalore. The deceased has been identified as shravan Alva.