ಬ್ರೇಕಿಂಗ್ ನ್ಯೂಸ್
16-09-24 10:57 pm Mangalore Correspondent ಕರಾವಳಿ
ಮಂಗಳೂರು, ಸೆ.16: “ನಮ್ಮಲ್ಲಿ ಹಾಗೂ ಬೇರೆ ಕಡೆ ಮೊಬೈಲ್ ಖರೀದಿಸಿದ ಹಲವು ಗ್ರಾಹಕರು ಆಪಲ್ IOS UPDATE ನಂತರ ಮೊಬೈಲ್ ಸ್ಕ್ರೀನ್ ನಲ್ಲಿ ಲೈನ್ ಅಥವಾ ಸ್ಕ್ರೀನ್ ಬ್ಲ್ಯಾಂಕ್ ಆಗುವಂತಹ ಸಮಸ್ಯೆ ಎದುರಾಗಿದೆ. ಈ ಸಮಸ್ಯೆಯಿಂದ ನೊಂದ ಗ್ರಾಹಕರು ಆಪಲ್ ನ ಸರ್ವಿಸ್ ಸೆಂಟರ್ ಮ್ಯಾಪಲ್ ಅನ್ನು ಭೇಟಿ ಮಾಡಿ ಸಮಸ್ಯೆ ಬಗೆಹರಿಸಲು ಕೋರಿದಾಗ ಅವರ ಉಡಾಫೆ ಉತ್ತರ ಗ್ರಾಹಕರಿಗೆ ಆಘಾತ ಉಂಟು ಮಾಡಿದೆ. ಗ್ರಾಹಕರ ಹಿತದೃಷ್ಟಿಯಿಂದ, ಆಪಲ್ ನ ಮ್ಯಾಪಲ್ ಸರ್ವಿಸ್ ಸೆಂಟರ್ ನ ಕಳಪೆ ಸೇವೆಗಳ ವಿರುದ್ಧ ಜ್ಯೋತಿ ಸರ್ಕಲ್ ನಿಂದ ಬೆಳಗ್ಗೆ 11 ಗಂಟೆಗೆ ಹೊರಟು ಆಪಲ್ ಸರ್ವಿಸ್ ಸೆಂಟರ್ ಮ್ಯಾಪಲ್ ನ ಎದುರುಗಡೆಯಿಂದ ಕ್ಲಾಕ್ ಟವರ್ ವರಗೆ ನಮ್ಮ ಪ್ರತಿಭಟನಾ ಮೆರವಣಿಗೆ ನಡೆಸುತ್ತೇವೆ ಎಂದು ದಕ್ಷಿಣ ಕನ್ನಡ ಮತ್ತು ಉಡುಪಿ ಮೊಬೈಲ್ ರಿಟೇಲರ್ಸ್ ಅಸೋಸಿಯೇಷನ್ ಸಂಘಟನೆಯ ರಾಜ್ಯ ಸುದ್ದಿ ಮತ್ತು ಮಾಧ್ಯಮ ನಿರ್ವಾಹಕ ವಿವೇಕ್ ಜಿ ಸುವರ್ಣ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.
”ಇತಿಹಾಸದಲ್ಲಿ ಮೊಟ್ಟಮೊದಲ ಬಾರಿಗೆ ಸ್ಥಳೀಯ ರೀಟೇಲರ್ ಗಳು ತಮ್ಮ ಗ್ರಾಹಕರಿಗೋಸ್ಕರ ಬೀದಿಗೆ ಇಳಿದು ಪ್ರತಿಭಟಿಸುತ್ತಿದ್ದಾರೆ. ಇದರಲ್ಲಿ ಹಲವು ನೊಂದ ಗ್ರಾಹಕರು ಪಾಲ್ಗೊಳ್ಳುತ್ತಿದ್ದಾರೆ. ಅಲ್ಲದೆ, ಸಮಸ್ಯೆಗೊಳಗಾದ ಗ್ರಾಹಕರು ಪ್ರತಿಭಟನಾ ಮೆರವಣಿಗೆಯಲ್ಲಿ ಭಾಗಿಯಾಗಿ ಬೆಂಬಲ ನೀಡಬೇಕಾಗಿ ಕೇಳಿ ಕೊಳ್ಳುತ್ತಿದ್ದೇವೆ. ಮುಂದಿನ ದಿನಗಳಲ್ಲಿ ಈ ರೀತಿಯ ಸಮಸ್ಯೆ ಬಂದರೆ ಫ್ಲಿಪ್ಕಾರ್ಟ್ ಅಥವಾ ಅಮೆಜಾನ್ ನಂತಹ ವಿದೇಶೀ ಕಂಪನಿಗಳು ಗ್ರಾಹಕರ ಹಿತರಕ್ಷಣೆಗೆ ನಿಲ್ಲುವುದಿಲ್ಲ. ಕೇವಲ ಸ್ಥಳೀಯ ಅಂಗಡಿಗಳು ಮಾತ್ರ ಗ್ರಾಹಕರ ಹಿತರಕ್ಷಣೆಗೆ ಹಾಗು ಅವರ ಅನುಕೂಲಕ್ಕೆ ನಿಲ್ಲುತ್ತೇವೆ. ಮುಂದಿನ ಹಬ್ಬದ ಖರೀದಿಯನ್ನು ಗ್ರಾಹಕರು ಆದಷ್ಟು ಸ್ಥಳೀಯ ಅಂಗಡಿಗಳಲ್ಲಿ ವ್ಯಾಪಾರ ನಡೆಸಿ ಸ್ಥಳೀಯರನ್ನು ಬೆಂಬಲಿಸಬೇಕಾಗಿ ವಿನಂತಿಸಿ ಕೊಳ್ಳುತ್ತಿದ್ದೇವೆ ಎಂದರು.
ಪತ್ರಿಕಾಗೋಷ್ಟಿಯಲ್ಲಿ ಸಂಘಟನೆಯ ಚೇರ್ ಮೆನ್ ಗುರುದತ್ ಕಾಮತ್, ಅಧ್ಯಕ್ಷ ರಾಜೇಶ್ ಮಾಬಿಯಾನ್, ಕಾರ್ಯದರ್ಶಿ ಇಮ್ರಾನ್, ಸ್ಥಾಪಕ ಅಧ್ಯಕ್ಷ ಸಲೀಮ್, ಮಾಜಿ ಅಧ್ಯಕ್ಷ ಶೈಲೇಂದ್ರ ಸರಳಾಯ, ಉಪಾಧ್ಯಕ್ಷ ಅಝರ್ ಮೊಹಮದ್ ಮತ್ತಿತರರು ಉಪಸ್ಥಿತರಿದ್ದರು.
iPhone phones issue in phone, retailers to hold protest against company on sep 17.
11-09-26 05:50 pm
HK News Staffer
ಬ್ಯಾಂಕ್ ಸಾಲಕ್ಕೆ ಸೀಜ್ ಆದ ಆಯುರ್ವೇದ ಕಾಲೇಜು ; 4.5...
11-09-26 02:59 pm
ಬರಗಾಲದ ಸಂಕಷ್ಟ ನಡುವೆ ನೂರು ದಿನಗಳ ವೈಭವೀಕರಣ ಬೇಕೇ?...
10-09-26 05:10 pm
ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಗಿರಿ ; ತೀವ್ರ ಲಾಬಿ ನಡೆ...
10-09-26 03:50 pm
ಬೆಳ್ಳಂಬೆಳಗ್ಗೆ ಜಾರಕಿಹೊಳಿಗೆ ಇಡಿ ಶಾಕ್: 18 ಬಾರ್...
09-09-26 10:52 am
12-09-26 01:10 pm
HK News Staffer
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
12-09-26 03:09 pm
HK News Staffer
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
ಅ.1ರಿಂದ ಮಂಗಳೂರು ರೈಲ್ವೇ ಆಡಳಿತ ಬದಲು ; ಪಾಲಕ್ಕಾಡ್...
11-09-26 10:58 pm
ಮಂಗಳೂರಿನಲ್ಲಿ ಡ್ರಗ್ಸ್ ತಪಾಸಣೆ ; ಒಂಬತ್ತು ತಿಂಗಳಲ್...
11-09-26 09:42 pm
ಪುತ್ತೂರು ಬೈಪಾಸ್ ರಸ್ತೆಯಲ್ಲಿ ಎರಡು ಕಾಡುಕೋಣಗಳ ಓಡಾ...
11-09-26 08:24 pm
11-09-26 06:38 pm
HK News Staffer
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm
ಬೈಂದೂರಿನಲ್ಲಿ ತೆರವು ಕಾರ್ಯಾಚರಣೆ ವೇಳೆ ಸರಣಿ ಅಪಘಾತ...
10-09-26 02:18 pm