ಬ್ರೇಕಿಂಗ್ ನ್ಯೂಸ್
17-09-24 09:34 pm Udupi Correspondent ಕರಾವಳಿ
ಉಡುಪಿ, ಸೆ.17: ರಾಜ್ಯ ಕಾಂಗ್ರೆಸ್ ಸರ್ಕಾರ ಕರಾವಳಿಯ ಉಡುಪಿ ಜಿಲ್ಲೆಯನ್ನು ನಿರ್ಲಕ್ಷ್ಯ ಮಾಡುತ್ತಿದೆ. ಇದರ ಬಗ್ಗೆ ಹತ್ತು ದಿನದಲ್ಲಿ ಅನುದಾನದ ಭರವಸೆ ನೀಡದಿದ್ದರೆ ಮುಖ್ಯಮಂತ್ರಿಗಳ ಮನೆಯೆದುರು ಧರಣಿ ನಡೆಸಲಾಗುವುದು ಎಂದು ಉಡುಪಿ ಜಿಲ್ಲೆಯ ಶಾಸಕರು ಮತ್ತು ಸಂಸದರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಉಡುಪಿ- ಚಿಕ್ಕಮಗಳೂರು ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ ಪೂಜಾರಿ ಮತ್ತು ಕಾರ್ಕಳ ಶಾಸಕ ಸುನೀಲ್ ಕುಮಾರ್, ಉಡುಪಿ ಶಾಸಕ ಯಶಪಾಲ್ ಸುವರ್ಣ, ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಕುಂದಾಪುರ ಶಾಸಕ ಕಿರಣ್ ಕೊಡ್ಗಿ ಹಾಗೂ ಬೈಂದೂರು ಶಾಸಕ ಗುರುರಾಜ ಗಂಟಿಹೊಳಿ ಅವರು ಉಡುಪಿಯಲ್ಲಿ ಸುದ್ದಿಗೋಷ್ಟಿ ನಡೆಸಿದ್ದಾರೆ.
ಶಾಸಕ ಸುನಿಲ್ ಕುಮಾರ್ ಮಾತನಾಡಿ, ರಾಜ್ಯ ಸರ್ಕಾರ ಎರಡು ಬಜೆಟ್ ನಲ್ಲಿ ಉಡುಪಿಗೆ ಯಾವುದೇ ಯೋಜನೆ ನೀಡಿಲ್ಲ. ಜಿಲ್ಲಾಡಳಿತ ಈ ಬಾರಿ 240 ಕೋಟಿ ಮಳೆಹಾನಿ ಆಗಿದ್ದಾಗಿ ಹೇಳಿದೆ. ಆದರೆ ಚಿಕ್ಕಾಸು ಬಿಡುಗಡೆ ಮಾಡಿಲ್ಲ. ಇದು ಕರಾವಳಿಯ ನಿರ್ಲಕ್ಷ್ಯವಲ್ಲದೆ ಮತ್ತಿನ್ನೇನು?ಉಡುಪಿ ಜಿಲ್ಲೆಯಲ್ಲಿ ಐದು ಜನ ಬಿಜೆಪಿ ಶಾಸಕರಿದ್ದಾರೆ ಎನ್ನುವ ಕಾರಣಕ್ಕೆ ಅನುದಾನ ನೀಡುತ್ತಿಲ್ಲ ಎಂದರು.
ತಾಲೂಕು ಮಟ್ಟದಲ್ಲಿ ಅಧಿಕಾರಿಗಳ ನಿರಂತರ ವರ್ಗಾವಣೆ ಮಾಡಲಾಗುತ್ತಿದೆ. ಶಾಸಕರಿಗೆ ಜಿಲ್ಲಾ ಮಟ್ಟದ ಅಧಿಕಾರಿಗಳು ಅಸಹಕಾರ ನೀಡುತ್ತಿದ್ದಾರೆ. ಕರಾವಳಿಯ ಎಲ್ಲಾ ಬಿಜೆಪಿ ಶಾಸಕರು ನಮ್ಮ ಬೇಡಿಕೆಯನ್ನು ಮುಖ್ಯಮಂತ್ರಿಗೆ ನೀಡಿದ್ದೇವೆ. ಅನುದಾನವನ್ನು ಸರ್ಕಾರ ತಕ್ಷಣ ಬಿಡುಗಡೆ ಮಾಡಬೇಕು. ಸಮಸ್ಯೆಗಳನ್ನು 10 ದಿನದೊಳಗೆ ಸರಿಪಡಿಸದಿದ್ದರೆ ಅನುದಾನಕ್ಕೆ ಆಗ್ರಹಿಸಿ ಮುಖ್ಯಮಂತ್ರಿಗಳ ಮನೆ ಮುಂದೆ ಧರಣಿ ಕೂರುವುದಾಗಿ ಎಚ್ಚರಿಸಿದರು.
ಗ್ರಾಮೀಣ ರಸ್ತೆಗಳಲ್ಲಿ ಡಾಮರು ಕಿತ್ತು ಹೋಗಿ ಓಡಾಡಲಾಗದ ಸ್ಥಿತಿಯಾಗಿದೆ. ರಸ್ತೆಗಳ ಪ್ಯಾಚ್ ವರ್ಕ್ ಗೂ ಸರ್ಕಾರ ಹಣ ನೀಡಿಲ್ಲ. ಹತ್ತು ದಿನದಲ್ಲಿ ಮುಖ್ಯಮಂತ್ರಿಗಳು ಉತ್ತರ ಕೊಡಬೇಕು. ಮೊದಲನೇ ಹಂತದಲ್ಲಿ ಮುಖ್ಯಮಂತ್ರಿಗಳ ಮನೆ ಮುಂದೆ ಧರಣಿ ನಡೆಸುತ್ತೇವೆ. ಎರಡನೇ ಹಂತದಲ್ಲಿ ಎರಡು ಜಿಲ್ಲೆಗಳಲ್ಲಿ ಜನಾಂದೋಲನ ಮಾಡಲಾಗುವುದು ಎಂದು ಸುನಿಲ್ ಕುಮಾರ್ ತಿಳಿಸಿದ್ದಾರೆ.
ರಾಜ್ಯದಲ್ಲಿ ಬೇಕಾಬಿಟ್ಟಿ ಬೆಲೆ ಏರಿಕೆ ಮಾಡಲಾಗುತ್ತಿದೆ. ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ನಿರಂತರ ಬೆಲೆ ಏರಿಕೆ ಮಾಡಲಾಗುತ್ತಿದೆ. ಹಾಲಿಗೆ ಐದು ರು. ಹೆಚ್ಚುಸಲು ಮುಂದಾಗಿದ್ದಾರೆ. ರಾಜ್ಯದಲ್ಲಿ ಸರ್ಕಾರವು 11 ಲಕ್ಷ ಬಿಪಿಎಲ್ ಕಾರ್ಡ್ ರದ್ದತಿಗೆ ಸಿದ್ಧತೆ ನಡೆಸಿದ್ದಾರೆ. ಉಡುಪಿ ಜಿಲ್ಲೆಯಲ್ಲಿ 40,000 ಬಿಪಿಎಲ್ ಕಾರ್ಡ್ ರದ್ದತಿಗೆ ತಯಾರಿ ಮಾಡಿದೆ. ಜನರನ್ನು ಸೌಲಭ್ಯಗಳಿಂದ ವಂಚಿಸುವ ಹುನ್ನಾರವನ್ನು ಖಂಡಿಸಿ ಕ್ಷೇತ್ರವಾರು ಪ್ರತಿಭಟನೆಗೆ ಬಿಜೆಪಿ ನಿರ್ಧಾರ ಮಾಡಿದೆ ಎಂದರು.
The five BJP MLAs of Udupi district and Kota Srinivas Poojary, Udupi-Chikkamagaluru MP, alleged on Monday, September 16, that the State government is ignoring the district in development front.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
14-07-26 07:55 pm
HK News Staffer
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
14-07-26 09:13 pm
HK News Staffer
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm
ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾನ್ನರ ಪತ್ತೆ ; ಮಂಗಳೂರ...
14-07-26 02:43 pm
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm