ಬ್ರೇಕಿಂಗ್ ನ್ಯೂಸ್
10-12-20 12:07 pm Mangalore Correspondent ಕರಾವಳಿ
ಬೆಳ್ತಂಗಡಿ, ಡಿ.10: ಧರ್ಮಸ್ಥಳದಲ್ಲಿ ಕಾರ್ತಿಕ ಮಾಸದಲ್ಲಿ ನಡೆಯುವ ಶ್ರೀ ಮಂಜುನಾಥ ಸ್ವಾಮಿಯ ಲಕ್ಷ ದೀಪೋತ್ಸವ ಇಂದಿನಿಂದ ಡಿ.14 ರ ವರೆಗೆ ನಡೆಯಲಿದೆ. 13 ಮತ್ತು 14 ರಂದು 88ನೇ ವರ್ಷದ ಸರ್ವಧರ್ಮ ಸಮ್ಮೇಳನ ಹಾಗೂ ಸಾಹಿತ್ಯ ಸಮ್ಮೇಳನ ನಡೆಯಲಿದೆ.
ಕೋವಿಡ್ ಹಿನ್ನೆಲೆಯಲ್ಲಿ ಸರಕಾರದ ನಿಯಮಗಳನ್ನು ಪಾಲಿಸಿಕೊಂಡು ಸರಳವಾಗಿ ಲಕ್ಷದೀಪೋತ್ಸವ ಕಾರ್ಯಕ್ರಮ ನಡೆಯಲಿದ್ದು, ಡಿ.10ರಂದು ಶ್ರೀ ಮಂಜುನಾಥ ಸ್ವಾಮಿಯ ಹೊಸಕಟ್ಟೆ ಉತ್ಸವ, ಡಿ.14ರಂದು ಗೌರಿಮಾರುಕಟ್ಟೆ ಉತ್ಸವದೊಂದಿಗೆ ಸಂಪನ್ನಗೊಳ್ಳಲಿದೆ.


ಲಕ್ಷ ದೀಪೋತ್ಸವದ ಯಶಸ್ವಿಗಾಗಿ ಕ್ಷೇತ್ರದಿಂದ ಸಮಿತಿಗಳನ್ನು ರಚಿಸಲಾಗಿದ್ದು, ಸಕಲ ಸಿದ್ದತೆಗಳನ್ನು ನಡೆಸಲಾಗಿದೆ. ದೇವರು ಸವಾರಿ ಮಾಡುವ ರಥಬೀದಿ, ರಾಜ ಬೀದಿಗಳನ್ನು, ದೇವಸ್ಥಾನ, ಬೀಡು, ಅನ್ನಪೂರ್ಣ ಸೇರಿದಂತೆ ಕ್ಷೇತ್ರದಲ್ಲಿ ವಿದ್ಯುದ್ದೀಪಗಳಿಂದ ಅಲಂಕೃತಗೊಳಿಸಲಾಗಿದೆ.
ಭಕ್ತರ ಸುರಕ್ಷತೆಯ ನಿಟ್ಟಿನಲ್ಲಿ ಸ್ಯಾನಿಟೈಸರ್ ಸಿಂಪಡಣೆ ಮಾಡಲಾಗುತ್ತಿದೆ. ಕ್ಷೇತ್ರಕ್ಕೆ ಬರುವ ಭಕ್ತರು ಮಾಸ್ಕ್ ಕಡ್ಡಾಯ ಧಾರಣೆ ಮಾಡಬೇಕು. ವಸ್ತು ಪ್ರದರ್ಶನ ಹಾಗೂ ಬೀದಿ ಬದಿಯ ಅಂಗಡಿಗಳು ಇರುವುದಿಲ್ಲ. ಸರಕಾರದ ನಿಯಮದಂತೆ ಅಗತ್ಯ ಕ್ರಮಗಳೊಂದಿಗೆ ದೀಪೋತ್ಸವ ಸರಳವಾಗಿ ಆಚರಣೆಗೊಳ್ಳಲಿದೆ. ಈ ಪ್ರಯುಕ್ತ ಶ್ರೀ ಕ್ಷೇತ್ರದಲ್ಲಿ ನಡೆಯುವ ಎಲ್ಲಾ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ಗಳನ್ನು ಮನೆಯಲ್ಲೇ ಕುಳಿತು ವೀಕ್ಷಣೆ ಮಾಡಲು ಅವಕಾಶ ಮಾಡಲಾಗಿದೆ. ’ಶ್ರೀ ಕ್ಷೇತ್ರ ಧರ್ಮಸ್ಥಳ’ ಹೆಸರಿನ ಯೂಟ್ಯೂಬ್, ಫೇಸ್ಬುಕ್ ಹಾಗೂ ನಮ್ಮ ಕುಡ್ಲ, ಶ್ರೀಶಂಕರ ಟಿವಿಯಲ್ಲಿ ನೇರ ವೀಕ್ಷಣೆಗೆ ಕ್ಷೇತ್ರದಿಂದ ಅವಕಾಶ ಮಾಡಲಾಗಿದೆ ಎಂದು ಕ್ಷೇತ್ರದ ಪ್ರಕಟಣೆ ತಿಳಿಸಿದೆ.
A Laksha Deepotsava will be held at Dharmasthala for four days from December 10, 2020.
18-04-26 10:20 am
HK News Staffer
ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ...
17-04-26 07:27 pm
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
17-04-26 08:08 pm
HK News Staffer
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
17-04-26 10:32 pm
Mangalore Correspondent
ಬಿ.ಸಿ.ರೋಡ್ - ಪುಂಜಾಲಕಟ್ಟೆ ಸೇರಿ ರಾಷ್ಟ್ರೀಯ ಹೆದ್...
17-04-26 08:56 pm
ಬುರುಡೆ ಗ್ಯಾಂಗ್ ಹೆಸರಿನಲ್ಲಿ ಹಾಸ್ಯ ; ಕಲಾವಿದರಿಗೆ...
17-04-26 03:02 pm
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
17-04-26 06:48 pm
HK News Staffer
ದೂರವಾಣಿ ಮೂಲಕ ಕರೆ, ಬಾಡಿಗೆ ಮನೆಗಳಲ್ಲಿ ಮೀಟಿಂಗ್ ;...
16-04-26 10:36 pm
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am