ಬ್ರೇಕಿಂಗ್ ನ್ಯೂಸ್
19-09-24 10:38 pm Mangalore Correspondent ಕರಾವಳಿ
ಮಂಗಳೂರು, ಸೆ.19: ಗುತ್ತಿಗೆದಾರರ ಬಳಿ ಲಂಚ ಕೇಳಿ ಹಣವನ್ನು ಪಡೆಯುತ್ತಿದ್ದಾಗಲೇ ಕಿನ್ನಿಗೋಳಿ ಪಟ್ಟಣ ಪಂಚಾಯತ್ ಜೂನಿಯರ್ ಇಂಜಿನಿಯರ್ ನಾಗರಾಜು ಮತ್ತು ಕಿನ್ನಿಗೋಳಿ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಎಂ.ಆರ್ ಸ್ವಾಮಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ದೂರುದಾರರು ಪಿಡಬ್ಲ್ಯೂಡಿ ಕ್ಲಾಸ್-1 ಗುತ್ತಿಗೆದಾರರರಾಗಿದ್ದು, 2022-23ನೇ ಸಾಲಿನ 5ನೇ ಹಣಕಾಸು ಯೋಜನೆಯಲ್ಲಿ ಕಿನ್ನಿಗೋಳಿ ಪಟ್ಟಣ ಪಂಚಾಯತ್ ವ್ಯಾಪ್ತಿಯ ಎಸ್ ಕೋಡಿ ಸರಕಾರಿ ಕೆರೆ ಅಭಿವೃದ್ಧಿಪಡಿಸುವ ಕಾಮಗಾರಿ ಕಾಂಟ್ರಾಕ್ಟ್ ಕೆಲಸವನ್ನು ನಿರ್ವಹಿಸಿದ್ದರು. ಕಾಮಗಾರಿಯ ರೂ. 9,77,154 ಮೊತ್ತದ ಬಿಲ್ ಮಂಜೂರಾತಿಯ ಬಗ್ಗೆ ಕಿನ್ನಿಗೊಳಿ ಪಟ್ಟಣ ಪಂಚಾಯತ್ನ ಜೂನಿಯರ್ ಇಂಜಿನಿಯರ್ ನಾಗರಾಜು ಅವರಲ್ಲಿ ವಿಚಾರಿಸಿದಾಗ ಬಿಲ್ಲು ಪಾಸ್ ಮಾಡಲು ತನಗೆ ರೂ. 37,000 ಲಂಚ ನೀಡುವಂತೆ ಮತ್ತು ಕಿನ್ನಿಗೋಳಿ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಎಂ.ಆರ್ ಸ್ವಾಮಿಯವರಿಗೆ ರೂ. 15,000 ಲಂಚ ನೀಡಬೇಕೆಂದು ಬೇಡಿಕೆ ಇಟ್ಟಿದ್ದರು.
ಜೂನಿಯರ್ ಇಂಜಿನಿಯರ್ ನಾಗರಾಜು ಅವರು ಮುಂಚಿತವಾಗಿ ರೂ 7,000/- ಹಣವನ್ನು ದೂರುದಾರರಿಂದ ಪಡೆದಿದ್ದರು. ಈ ಬಗ್ಗೆ ಲೋಕಾಯುಕ್ತಕ್ಕೆ ದೂರು ನೀಡಲಾಗಿತ್ತು. ದೂರಿನ ಮೇರೆಗೆ ಕಾರ್ಯಾಚರಣೆ ನಡೆಸಿದ ಲೋಕಾಯುಕ್ತ ಪೊಲೀಸರು ಕಿನ್ನಿಗೋಳಿ ಪಟ್ಟಣ ಪಂಚಾಯತ್ನ ಜೂನಿಯರ್ ಇಂಜಿನಿಯರ್ ನಾಗರಾಜು ಅವರು ರೂ.30,000 ಮತ್ತು ಕಿನ್ನಿಗೋಳಿ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಸ್ವಾಮಿ ರೂ.15,000 ಲಂಚದ ಹಣ ಸ್ವೀಕರಿಸುವಾಗಲೇ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ.
Mangalore Kinnigoli Engineer and Superintendent caught asking for bribe from contractor, arrested by lokayukta. The arrested have been identified as M R Swami and Panchyath Junior engineer Nagaraju.
15-01-26 05:56 pm
HK News Desk
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
15-01-26 10:24 pm
Mangalore Correspondent
ಗೋ ಸೇವೆಗೆ ಜನಸಾಮಾನ್ಯರು ಕೊಡುಗೆ ನೀಡಲು ವೇದಿಕೆ ; ಕ...
15-01-26 10:07 pm
ದಕ್ಷಿಣ ಕನ್ನಡದ ಸರ್ಕಾರಿ ಶಾಲೆಗಳಿಗೆ ಇಸ್ರೇಲ್ ಡಿಜಿ...
15-01-26 09:04 pm
ಮನರೇಗಾ ಜಾರಿಗೆ ಒತ್ತಾಯಿಸಿ ಸುಳ್ಯದಿಂದ ಮುಲ್ಕಿಗೆ ಪಾ...
15-01-26 08:12 pm
ಜ.18ರಂದು ಮಂಗಳೂರಿನಲ್ಲಿ ಪ್ರಪ್ರಥಮ ಜಾಗತಿಕ ಬಿಲ್ಲವರ...
15-01-26 04:01 pm
15-01-26 11:07 pm
Bangalore Correspondent
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm