ಬ್ರೇಕಿಂಗ್ ನ್ಯೂಸ್
10-12-20 12:38 pm Mangalore Correspondent ಕರಾವಳಿ
ಮಂಗಳೂರು, ಡಿ.10 : ಕೋವಿಡ್ ಕಾರಣದಿಂದ ಆತಂಕ ಮನೆಮಾಡಿದ್ದ ಕರಾವಳಿಯ ಗಂಡುಕಲೆ ಯಕ್ಷಗಾನಕ್ಕೆ ಕೊನೆಗೂ ರಂಗಸ್ಥಳ ಸಿದ್ಧಗೊಂಡಿದೆ. ಕಟೀಲು ದುರ್ಗಾಪರಮೇಶ್ವರಿ ದೇವಳದ ಯಕ್ಷಗಾನ ಮಂಡಳಿಯ ಆರು ಮೇಳಗಳ ತಿರುಗಾಟಕ್ಕೆ ವೇದಿಕೆ ರೆಡಿಯಾಗಿದ್ದು ಕಲಾವಿದರು ಗೆಜ್ಜೆ ಕಟ್ಟಿದ್ದಾರೆ. ಸಂಪ್ರದಾಯದಂತೆ ದೇವಳದ ಅರ್ಚಕರು ಗೆಜ್ಜೆಗಳನ್ನು ನೀಡುವ ಮೂಲಕ ಆರು ಮೇಳಗಳ ಆಟಕ್ಕೆ ಬುಧವಾರ ರಾತ್ರಿ ಚಾಲನೆ ನೀಡಲಾಗಿದೆ.
ಪ್ರತಿಬಾರಿ ನವೆಂಬರ್ ತಿಂಗಳ ಮಧ್ಯದಲ್ಲಿ ಕಟೀಲು ಮೇಳದ ತಿರುಗಾಟ ಆರಂಭಗೊಳ್ಳುತ್ತದೆ. ಆರಂಭದಲ್ಲಿ ದೇಗುಲದ ವಠಾರದಲ್ಲಿ ಆರೂ ಮೇಳಗಳ ಕಲಾವಿದರು ಪ್ರತ್ಯೇಕ ರಂಗಸ್ಥಳ ನಿರ್ಮಿಸಿ, ಯಕ್ಷಗಾನ ಆಡುತ್ತಾರೆ. ಆರು ಮೇಳದ ಅದ್ಭುತ ಪ್ರದರ್ಶನ ಅಷ್ಟೇ ಅದ್ಧೂರಿಯಾಗಿರುತ್ತದೆ. ಈ ಬಾರಿ ಕೊರೊನಾ ಕಾರಣದಿಂದಾಗಿ ಹಿಂದಿನ ರೀತಿಯ ಅಬ್ಬರ ಇರಲಿಲ್ಲ. ಸಂಪ್ರದಾಯಕ್ಕೆ ಚ್ಯುತಿಯಾಗದಂತೆ ಆಟ ಆಡಿಸಲಾಗಿದೆ. ಕಟೀಲು ದೇವರಿಗೆ ನಮಿಸಿ ಕಲಾವಿದರು ಕ್ಷೇತ್ರದಲ್ಲಿ ಮೊದಲ ಬಾರಿಗೆ ಗೆಜ್ಜೆ ಕಟ್ಟಿ ಕುಣಿದಿದ್ದಾರೆ. ಈ ಬಾರಿಯ ತಿರುಗಾಟಕ್ಕೆ ಯಾವುದೇ ವಿಘ್ನ ಬಾರದಿರಲೆಂದು ದೇವರಲ್ಲಿ ಬೇಡಿಕೊಂಡು ಮುಂದಿನ ಹೆಜ್ಜೆ ಇಟ್ಟಿದ್ದಾರೆ.
\


ಈಗ ಶುರುವಾದ ತಿರುಗಾಟ ಮೇ ತಿಂಗಳ 25 ವರೆಗೂ ಯಕ್ಷಗಾನ ಸೇವೆ ನಡೆಯುತ್ತದೆ. ಪತ್ತನಾಜೆಗೆ ಮತ್ತೆ ಗೆಜ್ಜೆ ಒಳಗಿಟ್ಟು ಕಲಾವಿದರಿಗೆ ಮಳೆಗಾಲದ ರಜೆ ಸಿಗುತ್ತದೆ. ಆರು ಮೇಳಗಳಿದ್ರೂ ಯಕ್ಷಗಾನ ಆಡಿಸುವುದಕ್ಕೆ ಕೊರತೆ ಇಲ್ಲ. ಸಾಧಾರಣವಾಗಿ ಪ್ರತಿ ವರ್ಷದ ಆಟ ಆಡಿಸುವ ಮಂದಿಯೇ ಹೆಚ್ಚಿದ್ದಾರೆ. ಹೀಗಿದ್ದರೂ, 20 ವರ್ಷಗಳ ಕಾಲ ಯಕ್ಷಗಾನ ಸೇವೆ ಬುಕ್ಕಿಂಗ್ ಇರುವುದು ವಿಶೇಷ.
ಕಟೀಲು ಮೇಳದಲ್ಲಿ ಈ ಬಾರಿ ಕೆಲವು ಬದಲಾವಣೆಗಳೂ ಆಗಿವೆ. ಭಾಗವತ ಪಟ್ಲ ಸತೀಶ ಶೆಟ್ಟಿ ಮೇಳದಿಂದ ಹೊರಬಂದು ಈ ಬಾರಿ ಪಾವಂಜೆ ಹೆಸರಲ್ಲಿ ಹೊಸ ಮೇಳ ಕಟ್ಟಿದ್ದಾರೆ. ಕಟೀಲಿನಲ್ಲಿದ್ದ ಕೆಲವು ಕಲಾವಿದರು ಇತ್ತ ಪಟ್ಲರ ಜೊತೆ ಪಾವಂಜೆ ಮೇಳಕ್ಕೆ ಸೇರಿದ್ದಾರೆ. ಹೀಗಾಗಿ ಕಟೀಲು ಮೇಳದಲ್ಲಿ ಹಳಬರು ಮತ್ತು ಹೊಸಬರ ಸಮ್ಮಿಲನದ ಜೊತೆ ಕಟೀಲು ಕ್ಷೇತ್ರ ಮಹಾತ್ಮೆಯ ಸಿಂಹನಾದಕ್ಕೆ ಕಲಾವಿದರು ರೆಡಿಯಾಗಿದ್ದಾರೆ. ಇಂದಿನಿಂದಲೇ ಕಟೀಲು ಮೇಳದ ಚೆಂಡೆಯ ಅಬ್ಬರ ಕರಾವಳಿಯ ಮೂರು ಜಿಲ್ಲೆಗಳ ವ್ಯಾಪ್ತಿಯಲ್ಲಿ ಅನುರಣಿಸಲಿದೆ.
Photo Credit: Ravi Posavanike - Times of India
25-06-26 09:10 pm
HK News Staffer
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 10:56 pm
HK News Staffer
Mangalore Drugs, Police: ಒಂದು ವರ್ಷದಲ್ಲಿ 400 ಡ...
25-06-26 10:48 pm
ಸಂಪುಟ ವಿಸ್ತರಣೆ ವಿಳಂಬ ; ಪ್ರಕೃತಿ ವಿಕೋಪ ಮೇಲುಸ್ತು...
25-06-26 02:39 pm
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
25-06-26 09:40 pm
HK News Staffer
ಮಂಡ್ಯದಲ್ಲಿ ಸೆಲ್ಫಿ ಹುಚ್ಚಿಗೆ ಐವರ ಬಲಿ ; ಕಾವೇರಿ ನ...
25-06-26 01:00 pm
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm