ಬ್ರೇಕಿಂಗ್ ನ್ಯೂಸ್
20-09-24 06:56 pm Mangalore Correspondent ಕರಾವಳಿ
ಮಂಗಳೂರು, ಸೆ.20: ಮಂಗಳೂರು ನಗರದ ಹೃದಯಭಾಗ ಎನಿಸಿರುವ ಅಂಬೇಡ್ಕರ್ ವೃತ್ತದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ಅವರ ಪ್ರತಿಮೆ ಮತ್ತು ವೃತ್ತ ನಿರ್ಮಾಣದ ಪ್ರಾಯೋಜಕತ್ವ ವಹಿಸಲು ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಮುಂದೆ ಬಂದಿದೆ. ಬ್ಯಾಂಕಿನ ಸಿಇಓ ಮತ್ತು ಆಡಳಿತ ನಿರ್ದೇಶಕರಾಗಿರುವ ಎ. ಮಣಿಮೇಖಲೈ ಅವರು 75 ಲಕ್ಷ ವೆಚ್ಚದಲ್ಲಿ ಪ್ರತಿಮೆ ನಿರ್ಮಾಣದ ಜವಾಬ್ದಾರಿಯನ್ನು ವಹಿಸಿಕೊಂಡಿದ್ದಾರೆ.
ಮಂಗಳೂರು ಮಹಾನಗರ ಪಾಲಿಕೆಯ ಮೇಯರ್ ಸುಧೀರ್ ಶೆಟ್ಟಿ ಅವರು ಇತ್ತೀಚೆಗೆ ಪ್ರತಿಮೆ ಮತ್ತು ಅಂಬೇಡ್ಕರ್ ವೃತ್ತದ ನೂತನ ನಕ್ಷೆಯನ್ನು ಬ್ಯಾಂಕಿನ ಸಿಇಓ ಮಣಿಮೇಖಲೈ ಅವರಿಗೆ ನೀಡುವ ಮೂಲಕ ಪ್ರತಿಮೆ ನಿರ್ಮಾಣದ ಕಾಮಗಾರಿಗೆ ಶಿಲಾನ್ಯಾಸ ನೆರವೇರಿಸಿದರು. ಇದೇ ವೇಳೆ, ಕಾಮಗಾರಿಯನ್ನು ಅತಿ ಶೀಘ್ರದಲ್ಲಿ ನಿರ್ವಹಿಸುವ ಮೂಲಕ ಮುಂದಿನ ಡಿಸೆಂಬರ್ ಒಳಗಡೆ ಉದ್ಘಾಟನೆ ಮಾಡಲು ಅವಕಾಶ ಮಾಡುವಂತೆ ಮೇಯರ್, ಬ್ಯಾಂಕಿನ ಸಿಇಓ ಅವರಲ್ಲಿ ಕೇಳಿಕೊಂಡಿದ್ದಾರೆ.
ಕಾರ್ಯಕ್ರಮದಲ್ಲಿ ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್, ಉಪ ಮೇಯರ್ ಸುನೀತಾ, ಪ್ರತಿಪಕ್ಷ ನಾಯಕ ಪ್ರವೀಣಚಂದ್ರ ಆಳ್ವ, ಕಾರ್ಪೊರೇಟರ್ ವಿನಯರಾಜ್, ಮಾಜಿ ಶಾಸಕ ಜೆ.ಆರ್ ಲೋಬೊ, ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದ ವಲಯ ಮುಖ್ಯಸ್ಥೆ ರೇಣು ನಾಯರ್, ಡಿಜಿಎಂ ರಾಜಮಣಿ, ಎಜಿಎಂ ಎನ್. ಗೋಪಿನಾಥ್, ಅಂಬೇಡ್ಕರ್ ವೃತ್ತದ ನಕ್ಷೆ- ವಿನ್ಯಾಸ ಸಿದ್ಧಪಡಿಸಿದ ಪರಿಶಿಷ್ಟ ಜಾತಿಗಳು ಮತ್ತು ಬುಡಕಟ್ಟುಗಳ ಸಂಘ- ಸಂಸ್ಥೆಗಳ ಮಹಾ ಒಕ್ಕೂಟದ ಅಧ್ಯಕ್ಷ ಲೋಲಾಕ್ಷ ಉಪಸ್ಥಿತರಿದ್ದರು.
Mangalore CEO of Union Bank of India unveiled construction work of New Ambedkar Circle. MD & CEO of Union Bank of India Ms. A Manimekhalai unveiled the curtain of construction work of New Ambedkar Circle at the proposed junction in Mangalore , recently.
09-06-26 07:04 pm
HK News Staffer
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
ಎಂಬಿಬಿಎಸ್ ಪದವಿ ಮುಗಿಸಿದ ಬೆನ್ನಲ್ಲೇ ಸರ್ಕಾರಿ ಆಸ್ಪ...
05-06-26 07:14 pm
08-06-26 09:11 pm
HK News Staffer
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
ಯೋಗಿಜೀ ನಮ್ಮನ್ನು ಕ್ಷಮಿಸಿ..! ಇನ್ನೆಂದೂ ಅಪರಾಧ ಕೃತ...
04-06-26 04:19 pm
09-06-26 08:58 pm
ರಿಚರ್ಡ್ | Richard
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
ಮಳೆಗಾಲ ಹಿನ್ನೆಲೆ ; ರಸ್ತೆ ಹೊಂಡಕ್ಕೆ ಬಿದ್ದು ಪ್ರಾಣ...
08-06-26 09:21 pm
ಮಂಗಳೂರಿನಲ್ಲಿ ಡಿಎಚ್ಓಗೆ ಸಚಿವ ಯು.ಟಿ ಖಾದರ್ ಕ್ಲಾಸ್...
08-06-26 04:55 pm
UT Khader, Mangalore: ಎಂಬಿಬಿಎಸ್ ಆದವರಿಗೆ ಕಲಿತ...
07-06-26 03:38 pm
09-06-26 05:03 pm
HK News Staffer
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm
ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ 98 ಲಕ್ಷ ರೂ. ದೋಚಿದ...
08-06-26 10:41 pm
ಹೃದಯಾಘಾತ ; ಸಕಾಲದಲ್ಲಿ ಆ್ಯಂಬುಲೆನ್ಸ್ ಸಿಗದೆ ಕೊಕ್ಕ...
08-06-26 04:42 pm