ಬ್ರೇಕಿಂಗ್ ನ್ಯೂಸ್
22-09-24 01:16 pm Mangalore Correspondent ಕರಾವಳಿ
ಮಂಗಳೂರು, ಸೆ.22: ರಾಜ್ಯದಲ್ಲಿನ್ನು ಹಿಂದೂ ಧಾರ್ಮಿಕ ಕಾರ್ಯಕ್ರಮಗಳಿಗೆ, ಮೆರವಣಿಗೆಗಳ ಸಂದರ್ಭದಲ್ಲಿ ಶ್ರೀರಾಮ ಸೇನೆಯಿಂದಲೇ ರಕ್ಷಣೆ ನೀಡಲಾಗುವುದು. ಶಸ್ತ್ರಸಜ್ಜಿತ ತಲವಾರು ಹಿಡಿದ 50 ಮಂದಿ ಶ್ರೀರಾಮಸೇನೆ ಕಾರ್ಯಕರ್ತರು ರಕ್ಷಣೆ ನೀಡುವ ಕೆಲಸ ಮಾಡಲಿದ್ದಾರೆ ಎಂದು ಶ್ರೀರಾಮ ಸೇನೆ ರಾಜ್ಯಾಧ್ಯಕ್ಷ ಗಂಗಾಧರ ಕುಲ್ಕರ್ಣಿ ಹೇಳಿದ್ದಾರೆ.
ಮಂಗಳೂರಿನಲ್ಲಿ ಶ್ರೀರಾಮ ಸೇನೆ ಜಿಲ್ಲಾ ಸಮಾವೇಶದ ಬಳಿಕ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಇವತ್ತು ಕರ್ನಾಟಕದಲ್ಲಿ ಕಾಂಗ್ರೆಸ್ ಸರಕಾರದ ಕೃಪೆಯಿಂದ ಜಹಾದಿ ಶಕ್ತಿಗಳು ಹದ್ದು ಮೀರುತ್ತಿವೆ. ಮುಸಲ್ಮಾನ ಪುಂಡರು ನಾಗಂಮಗಲ, ದಾವಣಗೆರೆಯಲ್ಲಿ ಗಣಪತಿ ಮೆರವಣಿಗೆ ಮೇಲೆ ಕಲ್ಲು ತೂರಿದ್ದಾರೆ. ಪೆಟ್ರೋಲ್ ಬಾಂಬ್ ಹಾಕುವಂತಹ ಮಟ್ಟಕ್ಕೆ ಬಂದು ನಿಂತಿದ್ದಾರೆ. ಇದಕ್ಕೆ ನೇರ ಕಾಂಗ್ರೆಸ್ ಸರಕಾರವೇ ಕಾರಣ ಎಂದು ಆಕ್ರೋಶ ವ್ಯಕ್ತಪಡಿಸಿದರು.


ಮುಸ್ಲಿಂ ಗುಂಡಾಗಳು ಓಪನ್ ಆಗಿ ಹೇಳ್ತಿದ್ದಾರೆ, ಈಗ ಇರುವುದು ನಮ್ಮ ಸರಕಾರ ಅಂತ. ಇವರ ಉದ್ಧಟತನಕ್ಕೆ ರಾಜ್ಯ ಸರಕಾರ ಕಾರಣ. ರಾಜ್ಯ ಸರಕಾರ ಸಂಪೂರ್ಣವಾಗಿ ಅವರ ಜೊತೆಗೆ ನಿಂತಿದೆ. ಗೃಹ ಮಂತ್ರಿಗಳಿಗೆ ನಾಚಿಕೆ ಮಾನ ಮರ್ಯಾದೆ ಇದೆಯೋ ಗೊತ್ತಿಲ್ಲ. ನಾಗಮಂಗಲ ಘಟನೆ ಆಕಸ್ಮಿಕ ಘಟನೆ ಅಂತಾರೆ. ಗೃಹ ಮಂತ್ರಿ ಅಯೋಗ್ಯರು. ವ್ಯವಸ್ಥಿತವಾಗಿ ನಡೆಸಲಾದ ಗಲಭೆ ಆಕಸ್ಮಿಕ ಅಂತ ತೋರುತ್ತಿದೆಯಾ ? ಇದೇ ಮುಸ್ಲಿಂ ಗೂಂಡಾಗಳಿಗೆ ಪ್ರೇರಣೆ ಆಗುತ್ತಿದೆ. ಇದರ ಹಿಂದೆ ನಿಷೇಧಿತ ಪಿ ಎಫ್ ಐ ಸಂಘಟನೆ ಇದೆ. ಮೂರು ನಾಲ್ಕು ದಿನದ ಮುಂಚಿತವಾಗಿ ಅವರು ಬಂದು ನಾಗಮಂಗಲದಲ್ಲಿ ಇದ್ದರು. ಇವೆಲ್ಲದಕ್ಕೂ ಹೊಣೆ ಹೊತ್ತು ಗೃಹಸಚಿವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.
ಮುಸ್ಲಿಂ ಗೂಂಡಾಗಳಿಗೆ ಹೇಳುತ್ತಿದ್ದೇನೆ, ಕೈಯಲ್ಲಿ ಕಲ್ಲು ಹಿಡಿಯಲು, ತಲವಾರು ಹಿಡಿಯಲು ಹಿಂದೂ ಸಮಾಜಕ್ಕೆ ಗೊತ್ತಿಲ್ಲ ಅಂದುಕೊಳ್ಳಬೇಡಿ. ಮುಂಬರುವ ಗಣೇಶನ ಮೆರವಣಿಗೆ ಸೇರಿದಂತೆ ಇನ್ನಿತರ ಹಿಂದೂ ಧಾರ್ಮಿಕ ಕಾರ್ಯಕ್ರಮ, ಮೆರವಣಿಗೆಯಲ್ಲಿ ನಾವೇ ರಕ್ಷಣೆ ನೀಡುತ್ತೇವೆ. ತಲವಾರು ಸಮೇತ 50 ಮಂದಿ ಶ್ರೀರಾಮಸೇನೆಯ ಕಾರ್ಯಕರ್ತರು ರಕ್ಷಣೆ ನೀಡಲಿದ್ದಾರೆ. ಈ ನಿಟ್ಟಿನಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ. ರಾಜ್ಯ ಸರಕಾರದಿಂದ ನಮಗೆ ರಕ್ಷಣೆ ಇಲ್ಲ ಅನ್ನೋದು ಸಾಬೀತಾಗಿದೆ. ಅದಕ್ಕಾಗಿ ನಾವೇ ರಕ್ಷಣೆಗೆ ಶಸ್ತ್ರ ಹಿಡಿಯುತ್ತೇವೆ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
Hindu activists will hold swords for Hindu programs for our own protection says Shri Ram sene Gangadhar Kulkarni in Mangalore.
09-02-26 07:20 pm
Bangalore Correspondent
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರ...
09-02-26 12:29 pm
Gadag, No phone, Tv: ಎಸ್ಸೆಸ್ಸೆಲ್ಸಿ ಮಕ್ಕಳ ಭವಿಷ...
07-02-26 05:09 pm
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
10-02-26 02:15 pm
HK News Desk
ರಾಮ ಮಂದಿರ ಸ್ಫೋಟಕ್ಕೆ ಸಂಚು ರೂಪಿಸಿದ್ದ ಕೈದಿ ಫರೀದಾ...
10-02-26 11:44 am
ಕೆನಡಾದಲ್ಲಿ ಗುಂಡಿಟ್ಟು ಕನ್ನಡಿಗ ಸಾಫ್ಟ್ವೇರ್ ಇಂಜಿ...
09-02-26 10:25 pm
ಜಾಗತಿಕ ಷೇರು ಮಾರುಕಟ್ಟೆಯಲ್ಲಿ 'ಆಂಥ್ರೋಪಿಕ್' AI ಬಿ...
09-02-26 12:27 pm
ಬಿಜೆಪಿಯಿಂದ ನಮಗೆ ಅಚ್ಛೇ ದಿನ್ ಬಂದಿಲ್ಲ, ಸ್ವಯಂಸೇವಕ...
08-02-26 10:18 pm
09-02-26 11:20 pm
HK News Desk
Mangalore Accident, Bus: ನಂತೂರಿನಲ್ಲಿ ಅಪಘಾತಕ್ಕ...
09-02-26 08:02 pm
ಕೆಪಿಟಿ ಜಂಕ್ಷನ್ ಬಳಿಯ ಹೆದ್ದಾರಿ ಡಿವೈಡರ್ ಮುಚ್ಚಿದ್...
09-02-26 02:50 pm
ಸೌಜನ್ಯಾ ಕೊಲೆ ಪ್ರಕರಣ ; ದೋಷಪೂರಿತ ತನಿಖೆ ನಡೆಸಿದ ಅ...
08-02-26 11:17 pm
ಜಾಗತಿಕ ಪ್ರವಾಸಿ ತಾಣಗಳ ಅಭಿವೃದ್ಧಿ ; ಕೋಡಿ- ಕನ್ಯಾನ...
08-02-26 10:10 pm
10-02-26 04:38 pm
Bangalore Correspondent
Belthangady Fake Kidnap: ಕಾಲೇಜು ವಿದ್ಯಾರ್ಥಿನಿ...
10-02-26 10:59 am
ಜಾಲತಾಣದಲ್ಲೇ ಪಡ್ಡೆ ಹುಡುಗರಿಗೆ ಬಲೆ, ಖತರ್ನಾಕ್ ಪ್...
09-02-26 02:04 pm
ಬೆಳ್ತಂಗಡಿ ; ಕಾಲೇಜು ತೆರಳುತ್ತಿದ್ದ ಅಪ್ರಾಪ್ತ ಯುವತ...
09-02-26 11:26 am
Mangalore Jail Raid: ಮಂಗಳೂರು ಜೈಲಿನಲ್ಲಿ ಬರ್ಕೆ...
08-02-26 02:07 pm