ಬ್ರೇಕಿಂಗ್ ನ್ಯೂಸ್
24-09-24 07:23 pm Mangalore Correspondent ಕರಾವಳಿ
ಮಂಗಳೂರು, ಸೆ.24: ಮೂಡಾ ಹಗರಣ ಕುರಿತು ಹೈಕೋರ್ಟ್ ತೀರ್ಪಿನಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಬೇಕೆಂದು ಆಗ್ರಹಿಸಿ ನಗರದ ಪಿವಿಎಸ್ ವೃತ್ತದ ಬಳಿಯ ಜಿಲ್ಲಾ ಬಿಜೆಪಿ ಕಚೇರಿ ಮುಂದೆ ಶಾಸಕ ವೇದವ್ಯಾಸ ಕಾಮತ್ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಪ್ರತಿಭಟನೆಯಲ್ಲಿ ಮಾತನಾಡಿದ ಶಾಸಕ ವೇದವ್ಯಾಸ ಕಾಮತ್, ಇದು ಸತ್ಯಕ್ಕೆ ಸಂದ ಜಯವಾಗಿದೆ. ಮೂಡಾ ಹಗರಣವನ್ನು ಖಂಡಿಸಿ ಬಿಜೆಪಿ ಮೈಸೂರು ಚಲೋ ಯಾತ್ರೆ ನಡೆಸಿದ್ದಾಗ, ಇದು ರಾಜಕೀಯ ಷಡ್ಯಂತ್ರ. ಇದರಲ್ಲಿ ಯಾವುದೇ ಹುರುಳಿಲ್ಲ, ನಾನು ರಾಜೀನಾಮೆ ಕೊಡುವುದಿಲ್ಲ, ಬೇಕಿದ್ದರೆ ರಾಜ್ಯಪಾಲರೇ ರಾಜೀನಾಮೆ ಕೊಡಲಿ ಎಂದು ಭಂಡತನ ಪ್ರದರ್ಶಿಸಿದ್ದ ಸಿದ್ದರಾಮಯ್ಯನವರಿಗೆ ಹೈಕೋರ್ಟ್ ತೀರ್ಪು ಕಪಾಳ ಮೋಕ್ಷ ನೀಡಿದೆ. ಇವರ ಹಿಂಬಾಲಕರಂತೂ ರಾಜ್ಯಪಾಲರನ್ನು ಬಾಂಗ್ಲಾ ಮಾದರಿಯಲ್ಲಿ ಓಡಿಸುತ್ತೇವೆ ಎಂದಿದ್ದರು. ಸಾಲದ್ದಕ್ಕೆ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದರ ವಿರುದ್ಧ ಸಚಿವ ಸಂಪುಟ ಸಭೆ ನಡೆಸಿ ನಿರ್ಣಯ ಕೈಗೊಳ್ಳಲಾಗಿತ್ತು. ಈಗ ಈ ಎಲ್ಲಾ ಭ್ರಷ್ಟರಿಗೆ ಹಾಗೂ ಕಾಂಗ್ರೆಸ್ ಸರ್ಕಾರಕ್ಕೆ ನ್ಯಾಯಾಲಯದ ಮೂಲಕವೇ ಉತ್ತರ ಸಿಕ್ಕಿದೆ ಎಂದು ಹೇಳಿದರು.
ಈಗಲಾದರೂ ಮುಡಾ ಪ್ರಕರಣದಲ್ಲಿ ತನಿಖೆಗೆ ಸಹಕರಿಸಲು ಸಿದ್ದರಾಮಯ್ಯನವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಮುಖ್ಯಮಂತ್ರಿ ಹುದ್ದೆಯ ಘನತೆಯನ್ನು ಉಳಿಸಬೇಕೆಂದು ಶಾಸಕ ವೇದವ್ಯಾಸ ಕಾಮತ್ ಅವರು ಆಗ್ರಹಿಸಿದರು. ಮುಂದಿನ ದಿನಗಳಲ್ಲಿ ಕಾಂಗ್ರೆಸ್ಸಿನ ಎಲ್ಲಾ ಹಗರಣಗಳು ಬಯಲಿಗೆ ಬರಲಿದ್ದು ಕಾಂಗ್ರೆಸ್ ಸರ್ಕಾರ ಗಂಟು ಮೂಟೆ ಕಟ್ಟುವುದು ನಿಶ್ಚಿತವೆಂದು ಶಾಸಕರು ಹೇಳಿದರು.
ಪ್ರತಿಭಟನೆಯಲ್ಲಿ ಶಾಸಕರಾದ ಡಾ.ಭರತ್ ಶೆಟ್ಟಿ, ಹರೀಶ್ ಪೂಂಜಾ, ಭಾಗೀರಥಿ ಮುರುಳ್ಯ, ಮೇಯರ್ ಮನೋಜ್ ಕೋಡಿಕಲ್, ಉಪ ಮೇಯರ್ ಭಾನುಮತಿ ಪಿ.ಎಸ್, ಪ್ರಮುಖರಾದ ಪ್ರೇಮಾನಂದ ಶೆಟ್ಟಿ, ದಿವಾಕರ ಪಾಂಡೇಶ್ವರ, ಸುಧೀರ್ ಶೆಟ್ಟಿ ಕಣ್ಣೂರು, ಜಗದೀಶ್ ಶೇಣವ, ನಂದನ್ ಮಲ್ಯ, ರಮೇಶ್ ಹೆಗ್ಡೆ, ಮಂಜುಳಾ ರಾವ್, ಮಹೇಶ್ ಜೋಗಿ, ಪೂಜಾ ಪೈ, ಯತೀಶ್ ಆರ್ವಾರ್, ರವೀಂದ್ರ ಶೆಟ್ಟಿ ಉಪಸ್ಥಿತರಿದ್ದರು.
Muda scam, BJP MLA Vedavyas kamath holds protest demanding resignation of CM Siddaramaiah. BJP members and leaders gathered for the resignation of CM for involving in muda case.
22-04-25 02:37 pm
HK News Desk
ಜನಿವಾರ ತೆಗೆಸಿರುವ ಕ್ರಮ ನಿಯಮಬಾಹಿರ, ಧಾರ್ಮಿಕ ನಂಬಿ...
22-04-25 01:00 pm
R Ashok, Census Probe: ಜಾತಿಗಣತಿ ವರದಿಯೇ ನಕಲಿ,...
21-04-25 07:27 pm
ನ್ಯಾ.ಕೃಷ್ಣ ದೀಕ್ಷಿತ್, ನ್ಯಾ.ಹೇಮಂತ್ ಚಂದನಗೌಡರ್ ಸೇ...
21-04-25 07:10 pm
Jayaprakash Hegde; ಹಿಂದೂಗಳಂತೆ ಮುಸ್ಲಿಮರಲ್ಲು 93...
19-04-25 03:04 pm
22-04-25 07:13 pm
HK News Desk
Next Pope: ರೋಮನ್ ಕ್ಯಾಥೋಲಿಕ್ ಚರ್ಚ್ನ 266ನೇ ಪೋಪ...
21-04-25 07:46 pm
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
22-04-25 07:37 pm
Bangalore Correspondent
IPS Om Prakash Murder, Update: ನಿವೃತ್ತ ಡಿಜಿಪಿ...
22-04-25 03:26 pm
Om Prakash IPS Murder, Wife arrest: ನಿವೃತ್ತ ಡ...
21-04-25 01:03 pm
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm