ಬ್ರೇಕಿಂಗ್ ನ್ಯೂಸ್
24-09-24 10:16 pm Mangalore Correspondent ಕರಾವಳಿ
ಸುಳ್ಯ, ಸೆ.24: ಆತ್ಮಹತ್ಯೆಗೆ ಯತ್ನಿಸಿದ್ದ ಯುವತಿಯ ಹೇಳಿಕೆ ಪಡೆಯಲು ಸುಳ್ಯ ಆಸ್ಪತ್ರೆಗೆ ಬಂದಿದ್ದ ಕೇರಳದ ಕಾಸರಗೋಡು ಜಿಲ್ಲಾ ಮ್ಯಾಜಿಸ್ಟ್ರೇಟ್ಗೆ ವೈದ್ಯರು ಅಗೌರವ ತೋರಿದ್ದಾರೆಂದು ಸ್ವತಃ ನ್ಯಾಯಾಧೀಶರೇ ಸುಳ್ಯ ಪೊಲೀಸರಿಗೆ ದೂರು ನೀಡಿದ ಪ್ರಸಂಗ ನಡೆದಿದೆ.
ಕೇರಳದ ಕಾಸರಗೋಡಿನ ದೇಲಂಪಾಡಿಯ ಯುವತಿಯೊಬ್ಬಳು ಆತ್ಮಹತ್ಯೆಗೆ ಯತ್ನಿಸಿದ್ದು, ಅವರನ್ನು ಸುಳ್ಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆ ಯುವತಿಯ ಹೇಳಿಕೆ ಪಡೆಯಲು ಆದೂರು ಪೊಲೀಸ್ ಅಧಿಕಾರಿಗಳ ಜೊತೆ ಸುಳ್ಯ ಸರ್ಕಾರಿ ಆಸ್ಪತ್ರೆಗೆ ನ್ಯಾಯಾಧೀಶರು ಆಗಮಿಸಿದ್ದಾಗ ಆಸ್ಪತ್ರೆಯ ಇಬ್ಬರು ವೈದ್ಯರು ಅಗೌರವದಿಂದ ನಡೆದುಕೊಂಡಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ನ್ಯಾಯಾಧೀಶರು ಸುಳ್ಯ ಪೊಲೀಸ್ ಠಾಣೆಯಲ್ಲಿ ವೈದ್ಯರ ವಿರುದ್ಧ ದೂರು ನೀಡಿದ್ದಾರೆ.
ಕೇರಳ ಹೈಕೋರ್ಟ್ ಆದೇಶದ ಪ್ರಕಾರ ಆತ್ಮಹತ್ಯೆಗೆ ಯತ್ನಿಸಿದವರ ಹೇಳಿಕೆಯನ್ನು ಸ್ವತಃ ಜಿಲ್ಲಾ ನ್ಯಾಯಾಧೀಶರೇ ಸ್ಥಳಕ್ಕೆ ಹೋಗಿ ಪಡೆಯಬೇಕಿದ್ದು ಮ್ಯಾಜಿಸ್ಟ್ರೇಟ್ ಅಬ್ದುಲ್ ಬಾತಿಷ್ ಅವರು ಸೆ.21ರಂದು ರಾತ್ರಿ ಸುಳ್ಯದ ಸರ್ಕಾರಿ ಆಸ್ಪತ್ರೆಗೆ ಆಗಮಿಸಿದ್ದರು.
ತಾವು ಆಸ್ಪತ್ರೆಗೆ ಬರುವ ಬಗ್ಗೆ ಮೊದಲೇ ಮಾಹಿತಿ ನೀಡಿದ್ದರೂ, ವೈದ್ಯರು ಅಗೌರವದಿಂದ ನಡೆಸಿಕೊಂಡಿದ್ದಾರೆ ಎಂದು ಮ್ಯಾಜಿಸ್ಟ್ರೇಟ್ ಅಬ್ದುಲ್ ಬಾತಿಷ್ ಸುಳ್ಯ ಪೊಲೀಸ್ ಠಾಣೆಗೆ ಆಗಮಿಸಿ ದೂರು ನೀಡಿದ್ದಾರೆ. ದೂರು ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಈ ಬಗ್ಗೆ ಜಿಲ್ಲಾ ಆರೋಗ್ಯಾಧಿಕಾರಿ ಡಾ.ತಿಮ್ಮಯ್ಯ, ಯುವತಿಯ ಬಗ್ಗೆ ಮಾಹಿತಿ ಕೇಳಿದ್ದಕ್ಕೆ ಕರ್ತವ್ಯದಲ್ಲಿದ್ದ ವೈದ್ಯರು ಅದನ್ನು ಲಿಖಿತವಾಗಿ ನೀಡುವಂತೆ ಕೇಳಿದ್ದಾರೆ ಎಂಬುದಾಗಿ ತನಗೆ ಮಾಹಿತಿ ಲಭ್ಯವಾಗಿದೆ. ಆಸ್ಪತ್ರೆಯಲ್ಲಿ ಬೇರೇನು ನಡೆದಿದೆ ಎಂಬ ಕುರಿತು ವರದಿ ನೀಡುವಂತೆ ತಾಲೂಕು ವೈದ್ಯಾಧಿಕಾರಿಗೆ ತಿಳಿಸಲಾಗಿದೆ ಎಂದು ಹೇಳಿದ್ದಾರೆ.
Kasaragod Judge reports of disrespect shown by doctors during visit to Sullia hospital.
27-07-25 01:09 pm
HK News Desk
ದಾವಣಗೆರೆ ; ಸರ್ಕಾರಿ ಜಾಗದಲ್ಲಿ ಬೆಳೆದ ಬೆಳೆ ತೆರವು...
26-07-25 02:00 pm
IPS Officer Soumya Latha, Dharmasthala SIT:...
25-07-25 04:07 pm
Jeep Chikkamagaluru Accident: ನಿಯಂತ್ರಣ ತಪ್ಪಿ...
25-07-25 01:22 pm
ಪೊಲೀಸ್ ಠಾಣೆಯಲ್ಲೇ ಲ್ಯಾಂಡ್ ಡಿಲಿಂಗ್ ; ಜಾಗದ ವಿಚಾರ...
25-07-25 12:25 pm
26-07-25 03:31 pm
HK News Desk
ಹದಗೆಟ್ಟ ಸುರತ್ಕಲ್ - ಬಿ.ಸಿ. ರೋಡ್ ಹೆದ್ದಾರಿ ನಿರ...
25-07-25 04:40 pm
Mangalore MP Brijesh Chowta: ಮಂಗಳೂರಿನಲ್ಲಿ ಮೆರ...
24-07-25 09:06 pm
Supreme Court, Actor Darshan, Murder case: ನಟ...
24-07-25 07:54 pm
3,000 ಕೋಟಿ ಸಾಲ ವಂಚನೆ ಕೇಸ್ ; ಅನಿಲ್ ಅಂಬಾನಿ ಮೇಲ...
24-07-25 03:29 pm
27-07-25 09:58 pm
Mangalore Correspondent
Mangalore Police, Ravi Pujari: ಮಂಗಳೂರಿನ ಬಿಲ್ಡ...
27-07-25 08:56 pm
Dharmasthala Case, SIT, ADGP Pranav Mohanty:...
27-07-25 08:14 pm
Dharmasthala Case, Sowjanya case, Mangalore:...
27-07-25 07:49 pm
Mangalore Congress: ದಕ್ಷಿಣ ಕನ್ನಡ ಜಿಲ್ಲಾ ಕಾಂಗ್...
26-07-25 10:41 pm
27-07-25 08:39 pm
Mangalore Correspondent
ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಯುವತಿಯನ್ನ ಆಸ್ಪತ್ರೆಗ...
27-07-25 07:13 pm
Bangalore Murder, Two Children Killed, Crime:...
27-07-25 03:26 pm
ಸೈಬರ್ ವಂಚಕರ ಜಾಲಕ್ಕೆ ನಕಲಿ ಬ್ಯಾಂಕ್ ಖಾತೆ ಪೂರೈಕೆ...
26-07-25 09:35 pm
ಮನೆಗೆ ದಿನಸಿ ತರಲು ಹೋದ ಯುವತಿಗೆ ನಡು ರಸ್ತೆಯಲ್ಲೇ ತ...
24-07-25 10:38 pm