ಬ್ರೇಕಿಂಗ್ ನ್ಯೂಸ್
24-09-24 10:16 pm Mangalore Correspondent ಕರಾವಳಿ
ಸುಳ್ಯ, ಸೆ.24: ಆತ್ಮಹತ್ಯೆಗೆ ಯತ್ನಿಸಿದ್ದ ಯುವತಿಯ ಹೇಳಿಕೆ ಪಡೆಯಲು ಸುಳ್ಯ ಆಸ್ಪತ್ರೆಗೆ ಬಂದಿದ್ದ ಕೇರಳದ ಕಾಸರಗೋಡು ಜಿಲ್ಲಾ ಮ್ಯಾಜಿಸ್ಟ್ರೇಟ್ಗೆ ವೈದ್ಯರು ಅಗೌರವ ತೋರಿದ್ದಾರೆಂದು ಸ್ವತಃ ನ್ಯಾಯಾಧೀಶರೇ ಸುಳ್ಯ ಪೊಲೀಸರಿಗೆ ದೂರು ನೀಡಿದ ಪ್ರಸಂಗ ನಡೆದಿದೆ.
ಕೇರಳದ ಕಾಸರಗೋಡಿನ ದೇಲಂಪಾಡಿಯ ಯುವತಿಯೊಬ್ಬಳು ಆತ್ಮಹತ್ಯೆಗೆ ಯತ್ನಿಸಿದ್ದು, ಅವರನ್ನು ಸುಳ್ಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆ ಯುವತಿಯ ಹೇಳಿಕೆ ಪಡೆಯಲು ಆದೂರು ಪೊಲೀಸ್ ಅಧಿಕಾರಿಗಳ ಜೊತೆ ಸುಳ್ಯ ಸರ್ಕಾರಿ ಆಸ್ಪತ್ರೆಗೆ ನ್ಯಾಯಾಧೀಶರು ಆಗಮಿಸಿದ್ದಾಗ ಆಸ್ಪತ್ರೆಯ ಇಬ್ಬರು ವೈದ್ಯರು ಅಗೌರವದಿಂದ ನಡೆದುಕೊಂಡಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ನ್ಯಾಯಾಧೀಶರು ಸುಳ್ಯ ಪೊಲೀಸ್ ಠಾಣೆಯಲ್ಲಿ ವೈದ್ಯರ ವಿರುದ್ಧ ದೂರು ನೀಡಿದ್ದಾರೆ.
ಕೇರಳ ಹೈಕೋರ್ಟ್ ಆದೇಶದ ಪ್ರಕಾರ ಆತ್ಮಹತ್ಯೆಗೆ ಯತ್ನಿಸಿದವರ ಹೇಳಿಕೆಯನ್ನು ಸ್ವತಃ ಜಿಲ್ಲಾ ನ್ಯಾಯಾಧೀಶರೇ ಸ್ಥಳಕ್ಕೆ ಹೋಗಿ ಪಡೆಯಬೇಕಿದ್ದು ಮ್ಯಾಜಿಸ್ಟ್ರೇಟ್ ಅಬ್ದುಲ್ ಬಾತಿಷ್ ಅವರು ಸೆ.21ರಂದು ರಾತ್ರಿ ಸುಳ್ಯದ ಸರ್ಕಾರಿ ಆಸ್ಪತ್ರೆಗೆ ಆಗಮಿಸಿದ್ದರು.
ತಾವು ಆಸ್ಪತ್ರೆಗೆ ಬರುವ ಬಗ್ಗೆ ಮೊದಲೇ ಮಾಹಿತಿ ನೀಡಿದ್ದರೂ, ವೈದ್ಯರು ಅಗೌರವದಿಂದ ನಡೆಸಿಕೊಂಡಿದ್ದಾರೆ ಎಂದು ಮ್ಯಾಜಿಸ್ಟ್ರೇಟ್ ಅಬ್ದುಲ್ ಬಾತಿಷ್ ಸುಳ್ಯ ಪೊಲೀಸ್ ಠಾಣೆಗೆ ಆಗಮಿಸಿ ದೂರು ನೀಡಿದ್ದಾರೆ. ದೂರು ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಈ ಬಗ್ಗೆ ಜಿಲ್ಲಾ ಆರೋಗ್ಯಾಧಿಕಾರಿ ಡಾ.ತಿಮ್ಮಯ್ಯ, ಯುವತಿಯ ಬಗ್ಗೆ ಮಾಹಿತಿ ಕೇಳಿದ್ದಕ್ಕೆ ಕರ್ತವ್ಯದಲ್ಲಿದ್ದ ವೈದ್ಯರು ಅದನ್ನು ಲಿಖಿತವಾಗಿ ನೀಡುವಂತೆ ಕೇಳಿದ್ದಾರೆ ಎಂಬುದಾಗಿ ತನಗೆ ಮಾಹಿತಿ ಲಭ್ಯವಾಗಿದೆ. ಆಸ್ಪತ್ರೆಯಲ್ಲಿ ಬೇರೇನು ನಡೆದಿದೆ ಎಂಬ ಕುರಿತು ವರದಿ ನೀಡುವಂತೆ ತಾಲೂಕು ವೈದ್ಯಾಧಿಕಾರಿಗೆ ತಿಳಿಸಲಾಗಿದೆ ಎಂದು ಹೇಳಿದ್ದಾರೆ.
Kasaragod Judge reports of disrespect shown by doctors during visit to Sullia hospital.
15-01-26 05:56 pm
HK News Desk
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
16-01-26 12:31 pm
Mangalore Correspondent
ಲಕ್ಕಿ ಸ್ಕೀಮ್ ಕಂಪೆನಿಗಳಿಗೆ ಬೀಗ ಜಡಿಯಿರಿ ; ನೂರಕ್ಕ...
15-01-26 10:24 pm
ಗೋ ಸೇವೆಗೆ ಜನಸಾಮಾನ್ಯರು ಕೊಡುಗೆ ನೀಡಲು ವೇದಿಕೆ ; ಕ...
15-01-26 10:07 pm
ದಕ್ಷಿಣ ಕನ್ನಡದ ಸರ್ಕಾರಿ ಶಾಲೆಗಳಿಗೆ ಇಸ್ರೇಲ್ ಡಿಜಿ...
15-01-26 09:04 pm
ಮನರೇಗಾ ಜಾರಿಗೆ ಒತ್ತಾಯಿಸಿ ಸುಳ್ಯದಿಂದ ಮುಲ್ಕಿಗೆ ಪಾ...
15-01-26 08:12 pm
15-01-26 11:07 pm
Bangalore Correspondent
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm