ಬ್ರೇಕಿಂಗ್ ನ್ಯೂಸ್
24-09-24 10:16 pm Mangalore Correspondent ಕರಾವಳಿ
ಸುಳ್ಯ, ಸೆ.24: ಆತ್ಮಹತ್ಯೆಗೆ ಯತ್ನಿಸಿದ್ದ ಯುವತಿಯ ಹೇಳಿಕೆ ಪಡೆಯಲು ಸುಳ್ಯ ಆಸ್ಪತ್ರೆಗೆ ಬಂದಿದ್ದ ಕೇರಳದ ಕಾಸರಗೋಡು ಜಿಲ್ಲಾ ಮ್ಯಾಜಿಸ್ಟ್ರೇಟ್ಗೆ ವೈದ್ಯರು ಅಗೌರವ ತೋರಿದ್ದಾರೆಂದು ಸ್ವತಃ ನ್ಯಾಯಾಧೀಶರೇ ಸುಳ್ಯ ಪೊಲೀಸರಿಗೆ ದೂರು ನೀಡಿದ ಪ್ರಸಂಗ ನಡೆದಿದೆ.
ಕೇರಳದ ಕಾಸರಗೋಡಿನ ದೇಲಂಪಾಡಿಯ ಯುವತಿಯೊಬ್ಬಳು ಆತ್ಮಹತ್ಯೆಗೆ ಯತ್ನಿಸಿದ್ದು, ಅವರನ್ನು ಸುಳ್ಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆ ಯುವತಿಯ ಹೇಳಿಕೆ ಪಡೆಯಲು ಆದೂರು ಪೊಲೀಸ್ ಅಧಿಕಾರಿಗಳ ಜೊತೆ ಸುಳ್ಯ ಸರ್ಕಾರಿ ಆಸ್ಪತ್ರೆಗೆ ನ್ಯಾಯಾಧೀಶರು ಆಗಮಿಸಿದ್ದಾಗ ಆಸ್ಪತ್ರೆಯ ಇಬ್ಬರು ವೈದ್ಯರು ಅಗೌರವದಿಂದ ನಡೆದುಕೊಂಡಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ನ್ಯಾಯಾಧೀಶರು ಸುಳ್ಯ ಪೊಲೀಸ್ ಠಾಣೆಯಲ್ಲಿ ವೈದ್ಯರ ವಿರುದ್ಧ ದೂರು ನೀಡಿದ್ದಾರೆ.
ಕೇರಳ ಹೈಕೋರ್ಟ್ ಆದೇಶದ ಪ್ರಕಾರ ಆತ್ಮಹತ್ಯೆಗೆ ಯತ್ನಿಸಿದವರ ಹೇಳಿಕೆಯನ್ನು ಸ್ವತಃ ಜಿಲ್ಲಾ ನ್ಯಾಯಾಧೀಶರೇ ಸ್ಥಳಕ್ಕೆ ಹೋಗಿ ಪಡೆಯಬೇಕಿದ್ದು ಮ್ಯಾಜಿಸ್ಟ್ರೇಟ್ ಅಬ್ದುಲ್ ಬಾತಿಷ್ ಅವರು ಸೆ.21ರಂದು ರಾತ್ರಿ ಸುಳ್ಯದ ಸರ್ಕಾರಿ ಆಸ್ಪತ್ರೆಗೆ ಆಗಮಿಸಿದ್ದರು.
ತಾವು ಆಸ್ಪತ್ರೆಗೆ ಬರುವ ಬಗ್ಗೆ ಮೊದಲೇ ಮಾಹಿತಿ ನೀಡಿದ್ದರೂ, ವೈದ್ಯರು ಅಗೌರವದಿಂದ ನಡೆಸಿಕೊಂಡಿದ್ದಾರೆ ಎಂದು ಮ್ಯಾಜಿಸ್ಟ್ರೇಟ್ ಅಬ್ದುಲ್ ಬಾತಿಷ್ ಸುಳ್ಯ ಪೊಲೀಸ್ ಠಾಣೆಗೆ ಆಗಮಿಸಿ ದೂರು ನೀಡಿದ್ದಾರೆ. ದೂರು ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಈ ಬಗ್ಗೆ ಜಿಲ್ಲಾ ಆರೋಗ್ಯಾಧಿಕಾರಿ ಡಾ.ತಿಮ್ಮಯ್ಯ, ಯುವತಿಯ ಬಗ್ಗೆ ಮಾಹಿತಿ ಕೇಳಿದ್ದಕ್ಕೆ ಕರ್ತವ್ಯದಲ್ಲಿದ್ದ ವೈದ್ಯರು ಅದನ್ನು ಲಿಖಿತವಾಗಿ ನೀಡುವಂತೆ ಕೇಳಿದ್ದಾರೆ ಎಂಬುದಾಗಿ ತನಗೆ ಮಾಹಿತಿ ಲಭ್ಯವಾಗಿದೆ. ಆಸ್ಪತ್ರೆಯಲ್ಲಿ ಬೇರೇನು ನಡೆದಿದೆ ಎಂಬ ಕುರಿತು ವರದಿ ನೀಡುವಂತೆ ತಾಲೂಕು ವೈದ್ಯಾಧಿಕಾರಿಗೆ ತಿಳಿಸಲಾಗಿದೆ ಎಂದು ಹೇಳಿದ್ದಾರೆ.
Kasaragod Judge reports of disrespect shown by doctors during visit to Sullia hospital.
14-05-26 10:19 am
HK News Staffer
ಬಿಜೆಪಿ ಸರ್ಕಾರ ನಿಷೇಧಿಸಿದ್ದ ಹಿಜಾಬ್ ನಿಷೇಧ ಹಿಂಪಡೆ...
13-05-26 10:18 pm
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
15-05-26 04:16 pm
HK News Staffer
ದೇಶಾದ್ಯಂತ ಪೆಟ್ರೋಲ್, ಡೀಸೆಲ್ ದರ ಹೆಚ್ಚಳ ; ಮಿತವ್ಯ...
15-05-26 08:54 am
ಕೇರಳಕ್ಕೆ ವಿಡಿ ಸತೀಶನ್ ಹೊಸ ಮುಖ್ಯಮಂತ್ರಿ ; ರಾಹುಲ್...
14-05-26 12:36 pm
ಜ್ಯೋತಿಷಿಗೆ ಕೂಡದ ಜಾತಕ ; ಟೀಕೆಗಳ ಸುಳಿಯಲ್ಲಿ ವಿಜಯ್...
13-05-26 06:42 pm
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
14-05-26 10:48 pm
HK News Staffer
ರಿಯಲ್ ಎಸ್ಟೇಟ್ ಉದ್ಯಮಿ, ‘ಲ್ಯಾನ್ಸಿ ಕನ್ಸ್ಟ್ರಕ್ಷನ...
14-05-26 05:39 pm
ಮಂಗಳೂರಿನಲ್ಲೂ "ಲಾಕ್ಡ್ ಹೌಸ್ ಬೀಟ್ ಸಿಸ್ಟಮ್" ಜಾರಿ...
13-05-26 11:02 pm
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
15-05-26 12:21 pm
HK News Staffer
ಬೇರೊಬ್ಬ ಮಹಿಳೆ ಹೆಸರಲ್ಲಿ ನಕಲಿ ಪಾಸ್ ಪೋರ್ಟ್ ಮಾಡಿಸ...
14-05-26 01:41 pm
ತುಮಕೂರಿನ ಮದರಸಾದಲ್ಲಿ ಸಿಬ್ಬಂದಿಗಳಿಂದ ಮಕ್ಕಳ ಮೇಲೆ...
14-05-26 10:49 am
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; 30 ಸಾವಿರದಿಂದ 28...
13-05-26 09:25 pm
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm