ಬ್ರೇಕಿಂಗ್ ನ್ಯೂಸ್
24-09-24 10:31 pm Mangalore Correspondent ಕರಾವಳಿ
ಮಂಗಳೂರು, ಸೆ.24: ಸಿನಿಮಾ, ನಾಟಕಗಳಲ್ಲಿ ಪರಿಶಿಷ್ಟ ಜನಾಂಗದ ನಲಿಕೆಯವರು ಅನಾದಿ ಕಾಲದಿಂದಲೂ ಆರಾಧಿಸಿಕೊಂಡು ಬಂದಿರುವ ದೈವಾರಾಧನೆಯನ್ನು ತೋರಿಸಿ ಅವಮಾನಿಸುತ್ತಿದ್ದಾರೆ. ಇದರಿಂದ ದೈವಗಳಿಗೆ ಮತ್ತು ದೈವ ಕಟ್ಟುವವರಿಗೆ ಅಪಚಾರ ಮಾಡುತ್ತಿದ್ದಾರೆಂದು ಆರೋಪಿಸಿ ದೈವ ನರ್ತಕರು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಹಾಗೂ ಮಂಗಳೂರು ಪೊಲೀಸ್ ಕಮಿಷನರ್ ಅವರಿಗೆ ದೂರು ನೀಡಿದ್ದಾರೆ.
ತುಳು ಅಕಾಡೆಮಿ ಮಾಜಿ ಅಧ್ಯಕ್ಷ ದಯಾನಂದ ಕತ್ತಲ್ಸಾರ್ ನೇತೃತ್ವದಲ್ಲಿ ಮಂಗಳೂರಿನ ಪಂಬದರ ಯಾನೆ ದೈವಾರಾಧಕರ ಸಮಾಜ ಸಂಘದಿಂದ ದೂರು ಸಲ್ಲಿಸಲಾಗಿದೆ. ದೈವಾರಾಧನೆ, ದೈವ ನರ್ತಕರಿಗೆ ಅವಮಾನ ಮಾಡುತ್ತಿರುವವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ದೂರು ನೀಡಿದ್ದಾರೆ.
ಇತ್ತೀಚೆಗೆ ಕಲ್ಜಿಗ ಎನ್ನುವ ಕನ್ನಡ ಸಿನಿಮಾದಲ್ಲಿ ದೈವದ ಪಾತ್ರವನ್ನು ಅನ್ಯರು ಮಾಡಿ, ಆರಾಧನಾ ಪದ್ಧತಿಗೆ ಅಪಚಾರ ಎಸಗಿದ್ದಾರೆ. ಇದಲ್ಲದೆ, ಈ ಸಿನಿಮಾದ ಸುದ್ದಿಗೋಷ್ಟಿಯಲ್ಲಿ ದೈವಾರಾಧಕರನ್ನು ವ್ಯಕ್ತಿಯೊಬ್ಬರು ತುಚ್ಛವಾಗಿ ನಿಂದಿಸಿ ಮಾತನಾಡಿದ್ದಾರೆ. ಇದನ್ನು ನಾವು ಸಹಿಸುವುದಿಲ್ಲ. ಇದರ ಬಗ್ಗೆ ಕ್ರಮ ಕೈಗೊಳ್ಳಬೇಕು ಎಂದು ಪೊಲೀಸರಿಗೆ ದೂರು ನೀಡಿದ್ದೇವೆ. ನಾಟಕ, ಸಿನಿಮಾದಲ್ಲಿ ತೋರಿಸುವ ಮೂಲಕ ದೈವ ನರ್ತನ ಸೇವೆ ಮಾಡುವ ಸಮುದಾಯದವರ ವಿರುದ್ಧ ತಪ್ಪು ಸಂದೇಶ ನೀಡುತ್ತಿದ್ದಾರೆ. ಇದನ್ನು ಮುಂದುವರಿಸದಂತೆ ತಡೆ ಹೇರುವಂತೆ ಜಿಲ್ಲಾಧಿಕಾರಿಗೆ ಆಗ್ರಹ ಮಾಡಿದ್ದೇವೆ ಎಂದು ದೈವಾರಾಧಕರು ಹೇಳಿದ್ದಾರೆ.
ದೈವಾರಾಧನೆ ಮತ್ತು ದೈವದ ಪಾತ್ರ ಮಾಡುವ ಹಿಂದುಳಿದ ವರ್ಗದ ಜನಾಂಗವನ್ನು ನಿಂದಿಸಿರುವವರ ವಿರುದ್ಧ ದಲಿತ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಬೇಕೆಂದು ಸಂಘದ ಸದಸ್ಯರು ಒತ್ತಾಯಿಸಿದ್ದಾರೆ.
Disrespect to Daiva in movies and drama, case filed to police commissioner in Mangalore
27-07-25 01:09 pm
HK News Desk
ದಾವಣಗೆರೆ ; ಸರ್ಕಾರಿ ಜಾಗದಲ್ಲಿ ಬೆಳೆದ ಬೆಳೆ ತೆರವು...
26-07-25 02:00 pm
IPS Officer Soumya Latha, Dharmasthala SIT:...
25-07-25 04:07 pm
Jeep Chikkamagaluru Accident: ನಿಯಂತ್ರಣ ತಪ್ಪಿ...
25-07-25 01:22 pm
ಪೊಲೀಸ್ ಠಾಣೆಯಲ್ಲೇ ಲ್ಯಾಂಡ್ ಡಿಲಿಂಗ್ ; ಜಾಗದ ವಿಚಾರ...
25-07-25 12:25 pm
26-07-25 03:31 pm
HK News Desk
ಹದಗೆಟ್ಟ ಸುರತ್ಕಲ್ - ಬಿ.ಸಿ. ರೋಡ್ ಹೆದ್ದಾರಿ ನಿರ...
25-07-25 04:40 pm
Mangalore MP Brijesh Chowta: ಮಂಗಳೂರಿನಲ್ಲಿ ಮೆರ...
24-07-25 09:06 pm
Supreme Court, Actor Darshan, Murder case: ನಟ...
24-07-25 07:54 pm
3,000 ಕೋಟಿ ಸಾಲ ವಂಚನೆ ಕೇಸ್ ; ಅನಿಲ್ ಅಂಬಾನಿ ಮೇಲ...
24-07-25 03:29 pm
27-07-25 09:58 pm
Mangalore Correspondent
Mangalore Police, Ravi Pujari: ಮಂಗಳೂರಿನ ಬಿಲ್ಡ...
27-07-25 08:56 pm
Dharmasthala Case, SIT, ADGP Pranav Mohanty:...
27-07-25 08:14 pm
Dharmasthala Case, Sowjanya case, Mangalore:...
27-07-25 07:49 pm
Mangalore Congress: ದಕ್ಷಿಣ ಕನ್ನಡ ಜಿಲ್ಲಾ ಕಾಂಗ್...
26-07-25 10:41 pm
27-07-25 08:39 pm
Mangalore Correspondent
ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಯುವತಿಯನ್ನ ಆಸ್ಪತ್ರೆಗ...
27-07-25 07:13 pm
Bangalore Murder, Two Children Killed, Crime:...
27-07-25 03:26 pm
ಸೈಬರ್ ವಂಚಕರ ಜಾಲಕ್ಕೆ ನಕಲಿ ಬ್ಯಾಂಕ್ ಖಾತೆ ಪೂರೈಕೆ...
26-07-25 09:35 pm
ಮನೆಗೆ ದಿನಸಿ ತರಲು ಹೋದ ಯುವತಿಗೆ ನಡು ರಸ್ತೆಯಲ್ಲೇ ತ...
24-07-25 10:38 pm