ಬ್ರೇಕಿಂಗ್ ನ್ಯೂಸ್
24-09-24 10:31 pm Mangalore Correspondent ಕರಾವಳಿ
ಮಂಗಳೂರು, ಸೆ.24: ಸಿನಿಮಾ, ನಾಟಕಗಳಲ್ಲಿ ಪರಿಶಿಷ್ಟ ಜನಾಂಗದ ನಲಿಕೆಯವರು ಅನಾದಿ ಕಾಲದಿಂದಲೂ ಆರಾಧಿಸಿಕೊಂಡು ಬಂದಿರುವ ದೈವಾರಾಧನೆಯನ್ನು ತೋರಿಸಿ ಅವಮಾನಿಸುತ್ತಿದ್ದಾರೆ. ಇದರಿಂದ ದೈವಗಳಿಗೆ ಮತ್ತು ದೈವ ಕಟ್ಟುವವರಿಗೆ ಅಪಚಾರ ಮಾಡುತ್ತಿದ್ದಾರೆಂದು ಆರೋಪಿಸಿ ದೈವ ನರ್ತಕರು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಹಾಗೂ ಮಂಗಳೂರು ಪೊಲೀಸ್ ಕಮಿಷನರ್ ಅವರಿಗೆ ದೂರು ನೀಡಿದ್ದಾರೆ.
ತುಳು ಅಕಾಡೆಮಿ ಮಾಜಿ ಅಧ್ಯಕ್ಷ ದಯಾನಂದ ಕತ್ತಲ್ಸಾರ್ ನೇತೃತ್ವದಲ್ಲಿ ಮಂಗಳೂರಿನ ಪಂಬದರ ಯಾನೆ ದೈವಾರಾಧಕರ ಸಮಾಜ ಸಂಘದಿಂದ ದೂರು ಸಲ್ಲಿಸಲಾಗಿದೆ. ದೈವಾರಾಧನೆ, ದೈವ ನರ್ತಕರಿಗೆ ಅವಮಾನ ಮಾಡುತ್ತಿರುವವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ದೂರು ನೀಡಿದ್ದಾರೆ.
ಇತ್ತೀಚೆಗೆ ಕಲ್ಜಿಗ ಎನ್ನುವ ಕನ್ನಡ ಸಿನಿಮಾದಲ್ಲಿ ದೈವದ ಪಾತ್ರವನ್ನು ಅನ್ಯರು ಮಾಡಿ, ಆರಾಧನಾ ಪದ್ಧತಿಗೆ ಅಪಚಾರ ಎಸಗಿದ್ದಾರೆ. ಇದಲ್ಲದೆ, ಈ ಸಿನಿಮಾದ ಸುದ್ದಿಗೋಷ್ಟಿಯಲ್ಲಿ ದೈವಾರಾಧಕರನ್ನು ವ್ಯಕ್ತಿಯೊಬ್ಬರು ತುಚ್ಛವಾಗಿ ನಿಂದಿಸಿ ಮಾತನಾಡಿದ್ದಾರೆ. ಇದನ್ನು ನಾವು ಸಹಿಸುವುದಿಲ್ಲ. ಇದರ ಬಗ್ಗೆ ಕ್ರಮ ಕೈಗೊಳ್ಳಬೇಕು ಎಂದು ಪೊಲೀಸರಿಗೆ ದೂರು ನೀಡಿದ್ದೇವೆ. ನಾಟಕ, ಸಿನಿಮಾದಲ್ಲಿ ತೋರಿಸುವ ಮೂಲಕ ದೈವ ನರ್ತನ ಸೇವೆ ಮಾಡುವ ಸಮುದಾಯದವರ ವಿರುದ್ಧ ತಪ್ಪು ಸಂದೇಶ ನೀಡುತ್ತಿದ್ದಾರೆ. ಇದನ್ನು ಮುಂದುವರಿಸದಂತೆ ತಡೆ ಹೇರುವಂತೆ ಜಿಲ್ಲಾಧಿಕಾರಿಗೆ ಆಗ್ರಹ ಮಾಡಿದ್ದೇವೆ ಎಂದು ದೈವಾರಾಧಕರು ಹೇಳಿದ್ದಾರೆ.
ದೈವಾರಾಧನೆ ಮತ್ತು ದೈವದ ಪಾತ್ರ ಮಾಡುವ ಹಿಂದುಳಿದ ವರ್ಗದ ಜನಾಂಗವನ್ನು ನಿಂದಿಸಿರುವವರ ವಿರುದ್ಧ ದಲಿತ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಬೇಕೆಂದು ಸಂಘದ ಸದಸ್ಯರು ಒತ್ತಾಯಿಸಿದ್ದಾರೆ.
Disrespect to Daiva in movies and drama, case filed to police commissioner in Mangalore
22-04-25 02:37 pm
HK News Desk
ಜನಿವಾರ ತೆಗೆಸಿರುವ ಕ್ರಮ ನಿಯಮಬಾಹಿರ, ಧಾರ್ಮಿಕ ನಂಬಿ...
22-04-25 01:00 pm
R Ashok, Census Probe: ಜಾತಿಗಣತಿ ವರದಿಯೇ ನಕಲಿ,...
21-04-25 07:27 pm
ನ್ಯಾ.ಕೃಷ್ಣ ದೀಕ್ಷಿತ್, ನ್ಯಾ.ಹೇಮಂತ್ ಚಂದನಗೌಡರ್ ಸೇ...
21-04-25 07:10 pm
Jayaprakash Hegde; ಹಿಂದೂಗಳಂತೆ ಮುಸ್ಲಿಮರಲ್ಲು 93...
19-04-25 03:04 pm
22-04-25 07:13 pm
HK News Desk
Next Pope: ರೋಮನ್ ಕ್ಯಾಥೋಲಿಕ್ ಚರ್ಚ್ನ 266ನೇ ಪೋಪ...
21-04-25 07:46 pm
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
22-04-25 07:37 pm
Bangalore Correspondent
IPS Om Prakash Murder, Update: ನಿವೃತ್ತ ಡಿಜಿಪಿ...
22-04-25 03:26 pm
Om Prakash IPS Murder, Wife arrest: ನಿವೃತ್ತ ಡ...
21-04-25 01:03 pm
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm