ಬ್ರೇಕಿಂಗ್ ನ್ಯೂಸ್
24-09-24 10:31 pm Mangalore Correspondent ಕರಾವಳಿ
ಮಂಗಳೂರು, ಸೆ.24: ಸಿನಿಮಾ, ನಾಟಕಗಳಲ್ಲಿ ಪರಿಶಿಷ್ಟ ಜನಾಂಗದ ನಲಿಕೆಯವರು ಅನಾದಿ ಕಾಲದಿಂದಲೂ ಆರಾಧಿಸಿಕೊಂಡು ಬಂದಿರುವ ದೈವಾರಾಧನೆಯನ್ನು ತೋರಿಸಿ ಅವಮಾನಿಸುತ್ತಿದ್ದಾರೆ. ಇದರಿಂದ ದೈವಗಳಿಗೆ ಮತ್ತು ದೈವ ಕಟ್ಟುವವರಿಗೆ ಅಪಚಾರ ಮಾಡುತ್ತಿದ್ದಾರೆಂದು ಆರೋಪಿಸಿ ದೈವ ನರ್ತಕರು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಹಾಗೂ ಮಂಗಳೂರು ಪೊಲೀಸ್ ಕಮಿಷನರ್ ಅವರಿಗೆ ದೂರು ನೀಡಿದ್ದಾರೆ.
ತುಳು ಅಕಾಡೆಮಿ ಮಾಜಿ ಅಧ್ಯಕ್ಷ ದಯಾನಂದ ಕತ್ತಲ್ಸಾರ್ ನೇತೃತ್ವದಲ್ಲಿ ಮಂಗಳೂರಿನ ಪಂಬದರ ಯಾನೆ ದೈವಾರಾಧಕರ ಸಮಾಜ ಸಂಘದಿಂದ ದೂರು ಸಲ್ಲಿಸಲಾಗಿದೆ. ದೈವಾರಾಧನೆ, ದೈವ ನರ್ತಕರಿಗೆ ಅವಮಾನ ಮಾಡುತ್ತಿರುವವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ದೂರು ನೀಡಿದ್ದಾರೆ.
ಇತ್ತೀಚೆಗೆ ಕಲ್ಜಿಗ ಎನ್ನುವ ಕನ್ನಡ ಸಿನಿಮಾದಲ್ಲಿ ದೈವದ ಪಾತ್ರವನ್ನು ಅನ್ಯರು ಮಾಡಿ, ಆರಾಧನಾ ಪದ್ಧತಿಗೆ ಅಪಚಾರ ಎಸಗಿದ್ದಾರೆ. ಇದಲ್ಲದೆ, ಈ ಸಿನಿಮಾದ ಸುದ್ದಿಗೋಷ್ಟಿಯಲ್ಲಿ ದೈವಾರಾಧಕರನ್ನು ವ್ಯಕ್ತಿಯೊಬ್ಬರು ತುಚ್ಛವಾಗಿ ನಿಂದಿಸಿ ಮಾತನಾಡಿದ್ದಾರೆ. ಇದನ್ನು ನಾವು ಸಹಿಸುವುದಿಲ್ಲ. ಇದರ ಬಗ್ಗೆ ಕ್ರಮ ಕೈಗೊಳ್ಳಬೇಕು ಎಂದು ಪೊಲೀಸರಿಗೆ ದೂರು ನೀಡಿದ್ದೇವೆ. ನಾಟಕ, ಸಿನಿಮಾದಲ್ಲಿ ತೋರಿಸುವ ಮೂಲಕ ದೈವ ನರ್ತನ ಸೇವೆ ಮಾಡುವ ಸಮುದಾಯದವರ ವಿರುದ್ಧ ತಪ್ಪು ಸಂದೇಶ ನೀಡುತ್ತಿದ್ದಾರೆ. ಇದನ್ನು ಮುಂದುವರಿಸದಂತೆ ತಡೆ ಹೇರುವಂತೆ ಜಿಲ್ಲಾಧಿಕಾರಿಗೆ ಆಗ್ರಹ ಮಾಡಿದ್ದೇವೆ ಎಂದು ದೈವಾರಾಧಕರು ಹೇಳಿದ್ದಾರೆ.
ದೈವಾರಾಧನೆ ಮತ್ತು ದೈವದ ಪಾತ್ರ ಮಾಡುವ ಹಿಂದುಳಿದ ವರ್ಗದ ಜನಾಂಗವನ್ನು ನಿಂದಿಸಿರುವವರ ವಿರುದ್ಧ ದಲಿತ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಬೇಕೆಂದು ಸಂಘದ ಸದಸ್ಯರು ಒತ್ತಾಯಿಸಿದ್ದಾರೆ.
Disrespect to Daiva in movies and drama, case filed to police commissioner in Mangalore
15-01-26 05:56 pm
HK News Desk
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
16-01-26 12:31 pm
Mangalore Correspondent
ಲಕ್ಕಿ ಸ್ಕೀಮ್ ಕಂಪೆನಿಗಳಿಗೆ ಬೀಗ ಜಡಿಯಿರಿ ; ನೂರಕ್ಕ...
15-01-26 10:24 pm
ಗೋ ಸೇವೆಗೆ ಜನಸಾಮಾನ್ಯರು ಕೊಡುಗೆ ನೀಡಲು ವೇದಿಕೆ ; ಕ...
15-01-26 10:07 pm
ದಕ್ಷಿಣ ಕನ್ನಡದ ಸರ್ಕಾರಿ ಶಾಲೆಗಳಿಗೆ ಇಸ್ರೇಲ್ ಡಿಜಿ...
15-01-26 09:04 pm
ಮನರೇಗಾ ಜಾರಿಗೆ ಒತ್ತಾಯಿಸಿ ಸುಳ್ಯದಿಂದ ಮುಲ್ಕಿಗೆ ಪಾ...
15-01-26 08:12 pm
15-01-26 11:07 pm
Bangalore Correspondent
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm