ಬ್ರೇಕಿಂಗ್ ನ್ಯೂಸ್
27-09-24 03:25 pm Mangalore Correspondent ಕರಾವಳಿ
ಮಂಗಳೂರು, ಸೆ.27: ದಕ್ಷಿಣ ಕನ್ನಡ ಜಿಲ್ಲೆಯ ಗ್ರಾಮ ಕರಣಿಕರು ಕೆಲಸದ ಒತ್ತಡ ಮತ್ತು ಮೊಬೈಲ್ ಏಪ್ ಗಳಿಂದಾಗುವ ಸಮಸ್ಯೆಯಿಂದ ಬೇಸತ್ತು ಮಂಗಳೂರಿನಲ್ಲಿ ಅನಿರ್ದಿಷ್ಟ ಧರಣಿ ಆರಂಭಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ಗ್ರಾಮಗಳಿಂದ ಬಂದಿರುವ 150ಕ್ಕೂ ಹೆಚ್ಚು ಗ್ರಾಮ ಕರಣಿಕರು ಮಂಗಳೂರಿನ ತಾಲೂಕು ಕಚೇರಿ ಮುಂದೆ ಪ್ರತಿಭಟನೆ ನಡೆಸುತ್ತಿದ್ದಾರೆ.
ಈ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಗ್ರಾಮ ಕರಣಿಕರ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅನಿಲ್ ಪೂಜಾರಿ, ನಮ್ಮ ಜಿಲ್ಲೆಯಲ್ಲಿ ಒಟ್ಟು 325 ಗ್ರಾಮ ಕರಣಿಕರ ಹುದ್ದೆಗಳಿದ್ದರೂ, 90 ಹುದ್ದೆಗಳು ಖಾಲಿಯಿದ್ದು ಅದರ ಹೊಣೆಭಾರವನ್ನು ಉಳಿದವರ ಮೇಲೆ ಹೊರಿಸಿದ್ದಾರೆ. ಇದಲ್ಲದೆ, 20ಕ್ಕೂ ಹೆಚ್ಚು ಮೊಬೈಲ್ ಏಪ್ ಗಳನ್ನು ಬಳಸಿ ತಂತ್ರಜ್ಞಾನ ಆಧರಿತವಾಗಿ ಕೆಲಸ ಮಾಡಲು ಒತ್ತಡ ಹೇರುತ್ತಿದ್ದಾರೆ. ಇದರಿಂದಾಗಿ ಶನಿವಾರ, ಭಾನುವಾರವೂ ರಜೆ ಇಲ್ಲದೆ ಕೆಲಸ ಮಾಡುವ ಸ್ಥಿತಿಯಾಗಿದೆ. 238 ಮಂದಿಯಲ್ಲಿ ನೂರಕ್ಕೂ ಹೆಚ್ಚು ಮಂದಿ ತಾಲೂಕು ಕಚೇರಿ, ಡೀಸಿ ಕಚೇರಿಯಲ್ಲಿದ್ದಾರೆ. ಈಗ 138 ಸಿಬಂದಿ 422 ಗ್ರಾಮಗಳ ಹೊಣೆ ಭಾರ ಹೊತ್ತು ಕೆಲಸ ಮಾಡಬೇಕಾಗಿದೆ. ಇದರ ಬಗ್ಗೆ ಸರಕಾರದ ಗಮನ ಸೆಳೆಯುವುದಕ್ಕಾಗಿ ಧರಣಿ ಕುಳಿತಿದ್ದೇವೆ ಎಂದರು.
ಧರಣಿಯಲ್ಲಿ 50ಕ್ಕೂ ಹೆಚ್ಚು ಮಹಿಳಾ ಸಿಬಂದಿಯೂ ಕೈಜೋಡಿಸಿದ್ದಾರೆ. 2019ರಿಂದ ಗ್ರಾಮ ಕರಣಿಕರ ಹುದ್ದೆಗೆ ನೇಮಕಾತಿ ಆಗಿಲ್ಲ. ಹೀಗಾಗಿ ನಮ್ಮ ಮೇಲೆ ವಿಪರೀತ ಹೊಣೆ ಭಾರ ಹೊರಿಸಿದ್ದಾರೆ. ಕಂದಾಯ ಇಲಾಖೆಯ ಪ್ರತಿ ಕೆಲಸಕ್ಕೂ ವಿಎಗಳನ್ನು ಹೊಣೆಯಾಗಿಸಿ ಒತ್ತಡ ಹೇರುತ್ತಿದ್ದಾರೆ. ನಾವು ವೈಯಕ್ತಿಕ ಜೀವನವೇ ಇಲ್ಲದೆ ಕೆಲಸ ಮಾಡುವ ಸ್ಥಿತಿಯಾಗಿದೆ ಎಂದು ಉಷಾ ಎಂಬವರು ಅಲವತ್ತುಕೊಂಡರು. ಧರಣಿಯಲ್ಲಿ ಗ್ರಾಮ ಕರಣಿಕರ ಸಂಘದ ಜಿಲ್ಲಾಧ್ಯಕ್ಷ ಸಂತೋಷ್, ಉಪಾಧ್ಯಕ್ಷ ಪ್ರದೀಪ್ ಕುಮಾರ್, ಅವಿನಾಶ್ ಬಿಲ್ಲವ, ಪುತ್ತೂರು ವಿಭಾಗ ಮಟ್ಟದ ಉಪಾಧ್ಯಕ್ಷೆ ಅಶ್ವಿನಿ, ಉಮೇಶ್ ಕಾವಡಿ, ಪ್ರಸನ್ನ ಪಕಳ, ತೌಫೀಕ್, ಶಿವರಾಜ್ ಗಾಯಕವಾಡ್, ಪ್ರದೀಪ್ ಶೆಣೈ ಮತ್ತಿತರರು ಇದ್ದರು.
Mobile app issues at office and work load, Mangalore village accountants hold protest in city.
19-09-25 10:04 pm
Bangalore Correspondent
Caste survey: ಜಾತಿ ಸಮೀಕ್ಷೆಗೆ ಸರ್ಕಾರದ ಸಚಿವರಿಂದ...
19-09-25 02:16 pm
ಮೋಸದಿಂದಲೇ ಕಣ್ರೀ ಬಿಜೆಪಿ ಚುನಾವಣೆ ಗೆದ್ದಿದೆ! ರಾಹು...
19-09-25 09:45 am
ಬೆಂಗಳೂರು ಗಬ್ಬೆದ್ದು ನಾರುತ್ತಿದೆ, ರಾಜಧಾನಿ ಈಗ ಗುಂ...
19-09-25 09:42 am
Traffic Violation, Bangalore: ರಾಜ್ಯದಲ್ಲಿ ಸಂಚಾ...
18-09-25 05:34 pm
19-09-25 05:45 pm
HK News Desk
Yasin Malik: ಲಷ್ಕರ್ ಮುಖ್ಯಸ್ಥ ಹಫೀಜ್ ಸಯೀದ್ ಭೇ...
19-09-25 02:24 pm
ಕೇಂದ್ರೀಕೃತ ಸಾಫ್ಟ್ವೇರ್ ಬಳಸಿ ಬೂತ್ಗಳಿಂದಲೇ ಮತದಾ...
18-09-25 08:14 pm
ಎರಡು ಬಾರಿ ಕಚ್ಚಿದ್ರೆ ಬೀದಿ ನಾಯಿಗೆ ಜೀವಾವಧಿ ಶಿಕ್ಷ...
16-09-25 10:11 pm
Cloudburst, Dehradun: ಡೆಹ್ರಾಡೂನ್ನಲ್ಲಿ ಭಾರೀ ಮ...
16-09-25 02:46 pm
19-09-25 10:46 pm
Mangalore Correspondent
ಕಟೀಲು ದೇಗುಲದಲ್ಲಿ ಸೇವಾ ದರ ಏಕಾಏಕಿ ದುಪ್ಪಟ್ಟು ; ಬ...
19-09-25 10:21 pm
ಧರ್ಮಸ್ಥಳ ಕೇಸ್ ; ಅನೇಕ ಶವಗಳನ್ನು ಹೂತಿದ್ದೆವು ಎಂದಿ...
19-09-25 09:59 pm
Kadri, Mangalore, Smart City: ‘ಸ್ಮಾರ್ಟ್ ಸಿಟಿ’...
19-09-25 07:53 pm
ಇನ್ಸ್ಟಾ ಗ್ರಾಂನಲ್ಲಿ ಪ್ರಚೋದನಕಾರಿ ಪೋಸ್ಟ್ ; ಆರೋಪಿ...
19-09-25 04:58 pm
18-09-25 11:44 am
HK News Desk
Vijayapura Bank Robbery: SBI ಬ್ಯಾಂಕ್ ದರೋಡೆ ;...
17-09-25 09:44 pm
Mangalore Crime, Cattle Theft: ಅಡ್ಯಾರ್ ನಲ್ಲಿ...
17-09-25 06:04 pm
Udupi, Job Fraud, Scam: ವಿದೇಶದಲ್ಲಿ ಕೆಲಸ ಕೊಡಿಸ...
17-09-25 02:46 pm
ಫುಡ್ ಡೆಲಿವರಿ ನೆಪದಲ್ಲಿ ಬಾಗಿಲು ತಟ್ಟಿದ ಕಳ್ಳ ; ವೃ...
17-09-25 12:25 pm